ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿ ತಹಶೀಲ್ದಾರ್ ಕಚೇರಿಯಲ್ಲಿ ಬೆಂಕಿ ಅವಘಡ

|
Google Oneindia Kannada News

ಬಳ್ಳಾರಿ, ಮೇ 2: ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಹಳೇ ತಹಶೀಲ್ದಾರ್ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪರಿಣಾಮ ಅಪಾರ ಪ್ರಮಾಣದ ದಾಖಲೆ ಸುಟ್ಟು ಭಸ್ಮವಾಗಿದೆ.
ಇಂದು ಬೆಳಗ್ಗೆ ಸುಮಾರು 9 ಘಂಟೆ ಸುಮಾರಿಗೆ ಕಚೇರಿ ತೆರೆಯುತ್ತಿದ್ದಂತೆ, ಬೆಂಕಿ ಅವಘಡ ನಡೆದಿದೆ. ಕಚೇರಿಯಲ್ಲಿ ಇದ್ದ ಎರಡು ಕಂಪ್ಯೂಟರ್ ಮತ್ತು ಸ್ಟೋರ್ ರೂಂನಲ್ಲಿಟ್ಟಿದ್ದ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ.

ಯುವಕನ ನೋವಿಗೆ ನೆರವಾದ ಸಚಿವ ಆನಂದ್ ಸಿಂಗ್ಯುವಕನ ನೋವಿಗೆ ನೆರವಾದ ಸಚಿವ ಆನಂದ್ ಸಿಂಗ್

ಹಠಾತ್ ಬೆಂಕಿಯಿಂದಾಗಿ ಇಡೀ ಕಚೇರಿ ತುಂಬಾ ಹೊಗೆ ಆವರಿಸಿಕೊಂಡಿತ್ತು. ಪ್ರಮುಖ ದಾಖಲೆಗಳು ಸುಟ್ಟು ಕರಕಲಾದವು.

Fire Accident In Bellary Tahsildar Office
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು. ಶಾರ್ಟ್ ಸರ್ಕ್ಯೂಟ್ ನಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಆದರೆ, ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ, ಕೆಲವರು ಉದ್ದೇಶ ಪೂರಕವಾಗಿ ಈ ಘಟನೆ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಬೆಂಕಿ ಅವಘಡದ ಫಟನೆಯ ಬಗ್ಗೆ ಹೊಸಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
English summary
Fire accident in Bellary tahsildar office Today May 2nd
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X