ಬಳ್ಳಾರಿಯಲ್ಲಿ ವಿವಿಧೆಡೆ ದಾಳಿ: ಐವರು ಬಾಲ ಕಾರ್ಮಿಕರ ರಕ್ಷಣೆ
ಬಳ್ಳಾರಿ, ಅಕ್ಟೋಬರ್ 14: ಇತ್ತೀಚಿಗೆ ರಾಜ್ಯದಲ್ಲಿ ಬಾಲ ಕಾರ್ಮಿಕತೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹೋಟೆಲ್, ಗ್ಯಾರೇಜ್, ಅಂಗಡಿಗಳು ಸೇರಿದಂತೆ ಇತರ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ಮಕ್ಕಳ ರಕ್ಷಣೆ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಬಿಡಿಡಿಎಸ್ ಚೈಲ್ಡ್ಲೈನ್ ಸಹಯೋಗದೊಂದಿಗೆ ಅಧಿಕಾರಿಗಳು ಬಳ್ಳಾರಿಯಲ್ಲಿ ವಿವಿಧೆಡೆ ದಾಳಿ ನಡೆಸಿ ಐವರು ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ.
ಬಳ್ಳಾರಿ ನಗರದ ಕೌಲ್ ಬಜಾರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧ ಸ್ಥಳಗಳಲ್ಲಿ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿಗಳಲ್ಲಿ ಬಾಲ ಕಾರ್ಮಿಕರು ಕೆಲಸ ಮಾಡುತ್ತಿದ್ದ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಸಮಿತಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದು, 5 ಬಾಲ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ.

ಮಕ್ಕಳ ವಯಸ್ಸಿನ ದಾಖಲೆಗಳನ್ನು ಪಡೆದ ಅಧಿಕಾರಿಗಳು ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್ ಮಾಲೀಕರ ವಿರುದ್ಧ ಬಾಲ ಕಾರ್ಮಿಕ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಇನ್ನು ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ ತಿಳಿಸಿದ್ದಾರೆ.
ಬಳಿಕ ಬಾಲ ಕಾರ್ಮಿಕ ಕಾಯ್ದೆ ಕುರಿತು ಬಳ್ಳಾರಿ ನಗರದ ಅಂಗಡಿ ಮಾಲೀಕರಿಗೆ ಜಾಗೃತಿ ಮೂಡಿಸಿದ ಅಧಿಕಾರಿಗಳು ಕರಪತ್ರಗಳನ್ನು ನೀಡಿ ಹಾಗೂ ಪೋಸ್ಟರ್ಗಳನ್ನು ವಿತರಿಸಿದ್ದಾರೆ.
ಐವರು ಮಕ್ಕಳ ರಕ್ಷಣಾ ಕಾರ್ಯಾಚರಣೆಯಲ್ಲಿ ಕಾರ್ಮಿಕ ಅಧಿಕಾರಿ ಕಮಲ್ ಅಲ್ತಾಪ್ ಅಹಮದ್, ಕಾರ್ಮಿಕ ನಿರೀಕ್ಷಕ ರವಿದಾಸ್, ಶಿಶು ಅಭಿವೃದ್ಧಿ ಇಲಾಖೆಯ ಶಿವಕುಮಾರ ಸ್ವಾಮಿ, ಎ.ಎಸ್.ಐ ಬೋಜರಾಜ, ಟಿ.ಎ.ಕುಬೇರ, ಗ್ರಾಮ ಲೆಕ್ಕಿಗ ಉಮೇಶ್, ಸಿ.ಆರ್.ಪಿ ವಿಜಯಕುಮಾರ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆಯ ಕ್ಷೇತ್ರಾಧಿಕಾರಿ ಪಿ.ಎಂ.ಈಶ್ವರಯ್ಯ ಹಾಗೂ ಚೈಲ್ಡ್ಲೈನ್ ಸಿಬ್ಬಂದಿ ಚಂದ್ರಕಲಾ, ಕಾರ್ತಿಕ್ ಭಾಗಿಯಾಗಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications