ವಿಶ್ವ ಪ್ರಸಿದ್ಧ ಹಂಪಿಯಲ್ಲಿ ಮದ್ಯ ಸೇವಿಸಿ ವಿದೇಶಿಗರ ಮೋಜು ಮಸ್ತಿ, ಸ್ಥಳಿಯರಿಂದ ಪೊಲೀಸರಿಗೆ ಮಾಹಿತಿ
ಹಲವಾರು ಬಾರಿ ವಿದೇಶಿ ಪ್ರವಾಸಿಗರು ಹಂಪಿಯ ಗುಡ್ಡಗಾಡು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಮ್ಮಷ್ಟಕ್ಕೆ ತಿರುಗುತ್ತಾರೆ.
ವಿಜಯನಗರ, ಫೆಬ್ರವರಿ. 22: ವಿಶ್ವದ ಪಾರಂಪರಿಕ ನಗರಗಳ ಪಟ್ಟಿಯಲ್ಲಿರುವ ನಾಡಿನ ಪ್ರಸಿದ್ಧ ಸ್ಥಳ ಹಂಪಿಯಲ್ಲಿ ವಿದೇಶಿಗರ ಬೀಡು ಯಾವಾಗಲು ಇರುತ್ತದೆ. ಆದರೆ, ಕೆಲವು ಪ್ರವಾಸಿಗರು ಪೂಜನೀಯ ಸ್ಥಳದಲ್ಲಿ ಮಧ್ಯಪಾನ, ಧೂಮಪಾನ ಮಾಡಿವ ಮೂಲಕ ಪದೇ ಪದೇ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ. ಈ ಬಗ್ಗೆ ಮತ್ತೊಂದು ಘಟನೆ ವರದಿಯಾಗಿದೆ.
ತುಂಗಭದ್ರಾ ನದಿಯ ಅಂಚಿನಲ್ಲಿರುವ ಪುಣ್ಯಕ್ಷೇತ್ರದಲ್ಲಿ ಐವರು ಪ್ರವಾಸಿಗರ ತಂಡ ಮದ್ಯಪಾನ ಮತ್ತು ಧೂಮಪಾನ ಮಾಡುತ್ತಿರುವುದು ವರದಿಯಾಗಿದೆ. ಹೀಗಾಗಿ ಹಂಪಿಯ ಪ್ರಸಿದ್ಧ ಪುರಂದರ ಮಂಟಪದಲ್ಲಿ ಪಾರ್ಟಿ ಮಾಡುತ್ತಿದ್ದ ವಿದೇಶಿಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ವಿದೇಶಿಗರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪಾರ್ಟಿ ಮಾಡುತ್ತಿದ್ದ ವಿದೇಶಿಯರ ಗುಂಪನ್ನು ನೋಡಿದ ಕೆಲವು ಸ್ಥಳೀಯರು ಪವಿತ್ರ ಸ್ಥಳದ ಬಳಿ ಪಾರ್ಟಿ ಮಾಡದಂತೆ ಕೇಳಿಕೊಂಡಿದ್ದಾರೆ. ಮಾತು ಕೇಳದ ಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಪೊಲೀಸರು ಸ್ಥಳಕ್ಕೆ ಬಂದ ನಂತರ, ಪ್ರವಾಸಿಗರು ತಮ್ಮೊಂದಿಗೆ ಇಟ್ಟುಕೊಂಡಿದ್ದ ಮದ್ಯ ಮತ್ತು ಇತರ ವಸ್ತುಗಳನ್ನು ಬಿಚ್ಚಿಟ್ಟಿದ್ದಾರೆ.
ಪುರಂದರ ಮಂಟಪದ ಅಂಚಿನಲ್ಲಿ ಕುಳಿತು ಮದ್ಯಪಾನ ಮಾಡುತ್ತಿದ್ದ ವಿದೇಶಿಗರ ಗುಂಪನ್ನು ನೋಡಿದ ಹಂಪಿಯ ಸ್ಥಳೀಯರೊಬ್ಬರು "ನಾವು ಅವರ ವಿಡಿಯೋ ಮಾಡಲು ಆರಂಭಿಸಿದಾಗ ಒಬ್ಬ ವ್ಯಕ್ತಿ ನಮ್ಮನ್ನು ಗಮನಿಸಿ ವಾದಿಸಲು ಶುರು ಮಾಡಿದರು. ಈ ಸ್ಥಳದಲ್ಲಿ ಪಾರ್ಟಿ ಮಾಡಬಾರದು ಎಂಬ ಯಾವುದೇ ಸೂಚನೆಗಳಿಲ್ಲ ಎಂದು ಪ್ರವಾಸಿಗರೊಬ್ಬರು ವಾದಿಸಿದರು. ನಾವು ಪ್ರವಾಸಿಗರಿಗೆ ಇಲ್ಲಿನ ನಿಯಮಗಳನ್ನು ವಿವರಿಸಿ, ಬಳಿಕ ಪೊಲೀಸರಿಗೆ ಕರೆ ಮಾಡಿದ್ದೇವೆ" ಎಂದಿದ್ದಾರೆ.
ಹಂಪಿಯಲ್ಲಿ ಹೆಚ್ಚಿನ ಸಂಖ್ಯೆಯ ವಿದೇಶಿ ಪ್ರವಾಸಿಗರು ಬರುತ್ತಾರೆ. ಹಂಪಿಯ ಪ್ರಸಿದ್ಧ ಸ್ಮಾರಕಗಳಿಗೆ ಭೇಟಿ ನೀಡುವುದರ ಜೊತೆಗೆ, ಇಲ್ಲಿ ಒದಗಿಸಲಾದ ರಾಕ್ ಕ್ಲೈಂಬಿಂಗ್ ಮತ್ತು ಜಲಕ್ರೀಡೆ ಚಟುವಟಿಕೆಗಳಿಂದಾಗಿ ಹೆಚ್ಚಿನ ವಿದೇಶಿಗರು ಹಂಪಿಯತ್ತ ಆಕರ್ಷಿತರಾಗುತ್ತಾರೆ. ಹಂಪಿ ಬಳಿಯ ತುಂಗಭದ್ರಾ ನದಿ ಹಾಗೂ ಕೊಪ್ಪಳದ ಆನೆಗುಂದಿಯಲ್ಲಿ ವಿದೇಶಿಗರು ಹೆಚ್ಚು ಸಮಯ ಕಳೆಯುತ್ತಾರೆ.

"ಹಲವಾರು ಬಾರಿ ವಿದೇಶಿ ಪ್ರವಾಸಿಗರು ಹಂಪಿಯ ಗುಡ್ಡಗಾಡು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಮ್ಮಷ್ಟಕ್ಕೆ ತಿರುಗುತ್ತಾರೆ. ಅವರು ಸಾಮಾನ್ಯವಾಗಿ ಮಾಹಿತಿ ಕೇಂದ್ರಕ್ಕೆ ಅಥವಾ ಬಾಡಿಗೆ ಸೈಕಲ್ಗಳಿಗಾಗಿ ನಮ್ಮ ಬಳಿಗೆ ಬಂದಾಗ ಈ ಸ್ಥಳದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಸಂಕ್ಷಿಪ್ತವಾಗಿ ಹೇಳುತ್ತೇವೆ. ಅವರು ಗುಂಪು ಪ್ರವಾಸಕ್ಕೆ ಬಂದಾಗ ಮಾರ್ಗದರ್ಶಿಗಳಿಗೆ ಸೂಚನೆಗಳನ್ನು ನೀಡಲಾಗುತ್ತದೆ" ಎಂದು ಪ್ರವಾಸಿ ಮಾರ್ಗದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ.
ಘಟನೆ ಬಳಿಕ ವಿದೇಶಿ ಪ್ರವಾಸಿಗರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದರೆ, ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ ಎಂದು ಹಂಪಿ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications