ಮಾಜಿ ಸಚಿವ ಈಟಿ ಶಂಭುನಾಥ ವಿಧಿವಶ: ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ
ಹೊಸಪೇಟೆ, ಆಗಸ್ಟ್ 09: ಕರುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಸೇಂಟ್ ಜಾನ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಈಟಿ ಶಂಭುನಾಥ (77)ಇಂದು ಗುರುವಾರ ಮಧ್ಯಾಹ್ನ 12ಗಂಟೆಗೆ ನಿಧನರಾಗಿದ್ದಾರೆ.
ಶಂಭುನಾಥ 1941, ಡಿಸೆಂಬರ್ 23ರಂದು ಜನಿಸಿದ್ದರು. 1965ರಲ್ಲಿ ಬಿ.ಇ.ಸಿವಿಲ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿದ್ದ ಶಂಭುನಾಥ್, 1990 ರಲ್ಲಿ ಬಂಗಾರಪ್ಪ ಸರ್ಕಾರದಲ್ಲಿ ಅರಣ್ಯ ಖಾತೆ ಸಚಿವರಾಗಿದ್ದರು.
1989ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹೂವಿನ ಹಡಗಲಿ ಕ್ಷೇತ್ರದಿಂದ ದಿವಂಗತ ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ವಿರುದ್ಧ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1992ರಲ್ಲಿ ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಕನಕ ಗುರು ಪೀಠ ಸ್ಥಾಪನೆ ಶ್ರಮಿಸಿದ್ದರು ಶಂಭುನಾಥ್.
ಕೇರಳದಲ್ಲಿ ಗಡಿನಾಡ ಕನ್ನಡಿಗರ ಧ್ವನಿಯಾಗಿದ್ದ ಚೆರ್ಕಳಂ ಅಬ್ದುಲ್ಲ ಇನ್ನಿಲ್ಲ
ಶುಕ್ರವಾರ ಮಧ್ಯಾಹ್ನ ತಮ್ಮ ಸ್ವಗ್ರಾಮ ಹೂವಿನಹಡಗಲಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
Comments
minister died hospital bangalore district news ಸಚಿವ ನಿಧನ ಆಸ್ಪತ್ರೆ ಅಂತಿಮ ಸಂಸ್ಕಾರ ಹೊಸಪೇಟೆ ಬಳ್ಳಾರಿ ಜಿಲ್ಲಾಸುದ್ದಿ
English summary
Former minister ET Shambhunath (77), who was admitted to St. John's Hospital in Bangalore, died today at 12 noon on Thursday. They suffered from gastrointestinal disorders.
Story first published: Thursday, August 9, 2018, 14:19 [IST]