ಪಾಪ ಪರಿಹಾರಕ್ಕೆ ರಾಮೇಶ್ವರನ ಮೊರೆ ಹೋದರಾ ಜನಾರ್ಧನ ರೆಡ್ಡಿ?
ಬಳ್ಳಾರಿ, ಸೆಪ್ಟೆಂಬರ್ 13: ದಕ್ಷಿಣ ಭಾರತದ ಪುಣ್ಯಕ್ಷೇತ್ರವಾದ ತಮಿಳುನಾಡಿನ ರಾಮೇಶ್ವರಕ್ಕೆ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು ಕುಟುಂಬ ಸಮೇತ ಭೇಟಿ ನೀಡಿರುವ ಕುರಿತು ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮೈನಿಂಗ್ ಕೇಸ್ ನಲ್ಲಿ ಜೈಲು ಸೇರಿದ ಬಳಿಕ ಬಳ್ಳಾರಿಗೆ ಕಾಲಿಡದೆ ವರ್ಷಗಳೇ ಕಳೆದಿದ್ದು, ಸದ್ಯ ರಾಜಕೀಯದಿಂದ ದೂರವಿರುವ ಜನಾರ್ಧನ ರೆಡ್ಡಿ ಅವರು ತಮಿಳುನಾಡು ರಾಜ್ಯದ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ನಲ್ಲಿರುವ ಜ್ಯೋತಿರ್ಲಿಂಗದ ದರ್ಶನ ಪಡೆದಿದ್ದಾರೆ.
ರಾಮೇಶ್ವರಂ ಕ್ಷೇತ್ರವು ವಿಶೇಷವಾಗಿ ಪಂಬನ್ ನಡುಗಡ್ಡೆಯಲ್ಲಿದೆ. ಪಂಬನ್ ಸೇತುವೆಯು ರಾಮೇಶ್ವರವನ್ನು ದೇಶದ ಇತರ ಭಾಗಗಳೊಂದಿಗೆ ಜೋಡಿಸುತ್ತದೆ. ಶ್ರೀಲಂಕಾದ ಮನ್ನಾರ್ ದ್ವೀಪ ರಾಮೇಶ್ವರದಿಂದ ಕೇವಲ 50 ಕಿಲೋಮೀಟರ್ ದೂರದಲ್ಲಿದೆ.

ಪುರಾಣಗಳ ಪ್ರಕಾರ ಶ್ರೀ ಮಹಾವಿಷ್ಣುವಿನ ಏಳನೇ ಅವತಾರ ಎಂದು ಕರೆಯಲ್ಪಡುವ ಶ್ರೀರಾಮನು ಲಂಕಾಧೀಶ ರಾವಣನನ್ನು ವಧಿಸಿ, ತನ್ನ ಮಾತೃ ಭೂಮಿಗೆ ಕಾಲಿಟ್ಟಾಗ, ಬ್ರಾಹ್ಮಣನನ್ನು ವಧಿಸಿದ ಕಾರ್ಯದ ಪರಿಹಾರಾರ್ಥವಾಗಿ ಸ್ವತಃ ಶ್ರೀರಾಮನೇ ಶಿವಲಿಂಗವನ್ನು ಪ್ರತಿಷ್ಠಾಪಿಸಿ, ಶಿವನನ್ನು ಪೂಜಿಸುತ್ತಾನೆ ಹಾಗೂ ಶಿವನು ಇಲ್ಲಿ ನಿರಂತರವಾಗಿ ವಾಸಿಸಬೇಕು ಎಂದು ಪ್ರಾರ್ಥಿಸುತ್ತಾನೆ.
ಶ್ರೀರಾಮನು ಈಶ್ವರನನ್ನು ಪೂಜಿಸಿರುವುದರಿಂದ ಕ್ರಮೇಣವಾಗಿ ಈ ಪ್ರದೇಶಕ್ಕೆ ರಾಮೇಶ್ವರಂ ಎಂಬ ಹೆಸರಿನಿಂದ ಕರೆಯುಲಾಗುತ್ತಿದೆ. ಶ್ರೀರಾಮನು ತನ್ನ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ನಿರ್ಧರಿಸಿದ ಸ್ಥಳ ಎಂದು ಹೇಳಲಾಗುತ್ತದೆ. ಈ ಪುಣ್ಯಕ್ಷೇತ್ರಕ್ಕೆ ಬರುವ ಲಕ್ಷಾಂತರ ಭಕ್ತರು ಸಮುದ್ರ ಸ್ನಾನ ಮಾಡಿಕೊಂಡು ಬಂದ ನಂತರ 24 ತೀರ್ಥ ಬಾವಿಗಳ ನೀರಿನಲ್ಲಿ ಸ್ನಾನ ಮಾಡಿದರೆ ತಮ್ಮ ಪಾಪಗಳೆಲ್ಲವೂ ಪರಿಹಾರವಾಗುತ್ತವೆ ಎಂಬ ನಂಬಿಕೆ ಇದೆ ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ.

16ನೇ ಶತಮಾನದಿಂದ 1765ರ ವರೆಗೆ ಅಂದರೆ, ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪನಿ ರಾಮೇಶ್ವರವನ್ನು ವಶಕ್ಕೆ ತೆಗೆದುಕೊಳ್ಳುವ ಮೊದಲು ರಾಮೇಶ್ವರ, ವಿಜಯನಗರ ಸಾಮ್ರಾಜ್ಯದ ಆಡಳಿತಕ್ಕೊಳಪಟ್ಟಿತ್ತು. ಅಲ್ಲಿನ ಅನೇಕ ಸಂಸ್ಕೃತಿಗಳು ಹಾಗೂ ಸ್ಥಳೀಯ ಜನರ ದೈನಂದಿನ ಸಂಪ್ರದಾಯಗಳು ಅಲ್ಲದೆ ಕಟ್ಟಡಗಳ ವಾಸ್ತುಶಿಲ್ಪಗಳಲ್ಲಿ ವಿಜಯನಗರ ಸಾಮ್ರಾಜ್ಯದ ಕುರುಹುಗಳನ್ನು ಕಾಣಬಹುದು.
ಈ ಒಂದು ಪುಣ್ಯಕ್ಷೇತ್ರವು ನಮ್ಮ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಜನ್ಮ ಸ್ಥಳವಾಗಿರುವುದು ನಮ್ಮೆಲ್ಲರ ಹೆಮ್ಮೆ ಎಂದು ರೆಡ್ಡಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

ಶ್ರೀರಾಮಚಂದ್ರ ಪಾಪ ಪರಿಹಾರಕ್ಕೆ ಶಿವಲಿಂಗವನ್ನು ಪ್ರತಿಷ್ಠಾಪಿಸಿ, ಶಿವನನ್ನು ಪೂಜಿಸಿದ ಪುಣ್ಯಕ್ಷೇತ್ರಕ್ಕೆ ನಾನು ಕುಟುಂಬ ಸಮೇತ ಹೋಗಿ ರಾಮನಾಥೇಶ್ವರ ದೇವರ ದರ್ಶನ ಪಡೆದು ಬಂದಿರುವೆ ಎಂದು ಮಾಜಿ ಸಚಿವ ಹೇಳಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications