ಬಳ್ಳಾರಿ: ಅತಿಥಿ ಉಪನ್ಯಾಸಕರ ಕಷ್ಟಕ್ಕೆ ಸ್ಪಂದಿಸಿದ ಮಾಜಿ ಶಾಸಕ
ಬಳ್ಳಾರಿ, ಸೆಪ್ಟೆಂಬರ್ 23: ಕೊರೊನಾ ವೈರಸ್ ಮಾಹಾಮಾರಿಯಿಂದಾಗಿ ಕೆಲಸ ಇಲ್ಲದೆ, ಸಂಬಳ ಇಲ್ಲದೆ ಸಂಸಾರ ನಡೆಸಲು ಸಾಧ್ಯವಾಗದ ಸ್ಥಿತಿಯಲ್ಲಿರುವ ಅತಿಥಿ ಉಪನ್ಯಾಸಕರ ಸಹಾಯಕ್ಕೆ ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಮುಂದಾಗಿದ್ದಾರೆ.
ಸರಕಾರಿ ಪದವಿ ಪೂರ್ವ ಹಾಗೂ ಸರಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರ ಕಷ್ಟಕ್ಕೆ ಸ್ಪಂದಿಸಿ, ಅವರಿಗೆಲ್ಲಾ ಆಹಾರದ ಕಿಟ್ ಗಳನ್ನು ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಸೇರಿದಂತೆ ಜಿಲ್ಲೆಯ 200 ಕ್ಕೂ ಹೆಚ್ಚಿನ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ್ದಾರೆ.

ಇದೇ ಸಮಯದಲ್ಲಿ ಎಲ್ಲಾ ಅತಿಥಿ ಉಪನ್ಯಾಸಕರು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ನೇಮಿರಾಜ ನಾಯ್ಕ್, ಹಲವಾರು ತಿಂಗಳುಗಳಿಂದ ಸಂಬಳವಿಲ್ಲದೆ ಅತ್ಯಂತ ಕಷ್ಟದ ಸ್ಥಿತಿಯಲ್ಲಿರುವ ಈ ಅತಿಥಿ ಉಪನ್ಯಾಸಕರಿಗೆ ನೆರವಾಗಬೇಕಿದೆ ಎಂದರು.

ನಾಡಿದ್ದು ಬಳ್ಳಾರಿ ಜಿಲ್ಲೆಯ ಅತಿಥಿ ಉಪನ್ಯಾಸಕರ ನಿಯೋಗವನ್ನು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ರವರ ಬಳಿ ಕರೆದುಕೊಂಡು ಹೋಗಿ, ಅವರೊಂದಿಗೆ ಚರ್ಚಿಸಿ, ಸಂಬಳ ಹೆಚ್ಚಳ, ಕೆಲಸ ಖಾಯಂ ಮಾಡಲು ಬೇಕಾದ ನೆರವು ನೀಡುವುದಾಗಿ ಮಾಜಿ ಶಾಸಕ ನೇಮಿರಾಜ್ ನಾಯ್ಕ್ ತಿಳಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications