ಬಳ್ಳಾರಿಯಲ್ಲಿ ಮಾಜಿ ಸಂಸದ ಕೋಳೂರು ಬಸವನಗೌಡ ನಿಧನ
ಬಳ್ಳಾರಿ, ನವೆಂಬರ್, 26: ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಂಸದ ಕೋಳೂರು ಬಸವನಗೌಡ (88) ಶುಕ್ರವಾರ ನಿಧನರಾಗಿದ್ದಾರೆ. ಮಾಜಿ ಸಂಸದ ಬಸವನಗೌಡ ಅವರು ಬಳ್ಳಾರಿಯ ತಮ್ಮ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ವಯೋ ಸಹಜ ಕಾಯಿಲೆ ಹಿನ್ನೆಲೆ ಶುಕ್ರವಾರ ನಿಧನರಾಗಿದ್ದಾರೆ.
ಶನಿವಾರ (ನವೆಂಬರ್ 26) ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ಬಸವನಗೌಡ ಅವರ ಅಂತ್ಯಕ್ರಿಯೆ ನಡೆಯಲಿದೆ. 13ನೇ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾಗಿದ್ದ ಕೋಳೂರು ಬಸವನಗೌಡ, ಸೋನಿಯಾಗಾಂಧಿ ರಾಜೀನಾಮೆಯಿಂದ ತೆರವುಗೊಂಡಿದ್ದ ಸ್ಥಾನಕ್ಕೆ 2000ನೇ ಇಸವಿಯಲ್ಲಿ ಉಪ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆ ಆಗಿದ್ದರು.
ಲಿಂಗಾಯತ ಸಮುದಾಯದ ಹಿರಿಯ ಮುಖಂಡರಾಗಿದ್ದ ಬಸವನಗೌಡ, ವೀರಶೈವ ಸಂಘದ ಹಿರಿಯ ನಾಯಕರಾಗಿದ್ದರು. ಅವರು ಇದೀಗ ಕುಟುಂಬ, ಬಂಧು ಬಳಗ ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. ಹಾಗೆಯೇ ಬಳ್ಳಾರಿ ಜಿಲ್ಲೆಯ ಶಾಸಕರು, ಸಚಿವರು, ಮಾಜಿ ಶಾಸಕರು ಸಚಿವರು ಗಣ್ಯರು ಸಂತಾಪ ಸಲ್ಲಿಸಿದ್ದಾರೆ.

ಬಸವನಗೌಡರ ರಾಜಕೀಯದ ಹಾದಿ
ಅವರು ವೀರಶೈವ ಸಂಘದಲ್ಲಿ ಗುಮಾಸ್ತರಾಗಿ ಸೇವೆಗೆ ಸೇರಿದ್ದು, ನಂತರ ಸಂಘದ ಎಲ್ಲರ ಸಹಕಾರದಿಂದ ಬೆಳೆದಿದ್ದರು. ಶಿಕ್ಷಣ ಇಲಾಖೆಯಲ್ಲಿ ಆಗಬೇಕಾದ ಸಂಘದ ಕಾರ್ಯಗಳನ್ನೆಲ್ಲ ಸೂಕ್ಷವಾಗಿ ಬಗೆಹರಿಸಿಕೊಂಡು ಬರುವ ಚಾಣಾಕ್ಷತನವನ್ನು ಹೊಂದಿದ್ದರು. ಅಲ್ಲದೇ ಎಲ್ಲಾ ಪಕ್ಷದ ಮುಖಂಡರೊಂದಿಗೆ, ಸಮಾಜದ ಎಲ್ಲಾ ಮುಖಂಡರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದವರಾಗಿರು.
ವೀರಶೈವ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಅವರನ್ನು ಕಾಂಗ್ರೆಸ್ ಪಕ್ಷ ಗುರುತಿಸಿತ್ತು. ಉಪಚುನಾವಣೆಗೆ ಅಭ್ಯರ್ಥಿಗಳ ಹುಡುಕಾಟ ನಡೆದಾಗ, ಮಾಜಿ ಸಂಸದ ಕೆ.ಸಿ.ಕೊಂಡಯ್ಯ ಅವರು ಬಸನಗೌಡರನ್ನು ಸೂಚಿಸಿ ಟಿಕೆಟ್ ಪಡೆದಿದ್ದರು. ರಾಜ್ಯಸಭಾ ಸದಸ್ಯರಾಗಿದ್ದ ಕೊಂಡಯ್ಯ ಅವರು ಇವರ ಜೊತೆಗೆ ಉತ್ತಮ ಬಾಂಧವ್ಯದಿಂದ ಇದ್ದರು ಎನ್ನಲಾಗಿದೆ.
ಬಸವನಗೌಡರ ನಿಧನಕ್ಕೆ, ಮಾಜಿ ಸಚಿವರಾದ ಅಲ್ಲಂ ವೀರಭದ್ರಪ್ಪ, ಮಾಜಿ ಸಂಸದ ಕೆ.ಸಿ.ಕೊಂಡಯ್ಯ, ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಗ್ರಾಮೀಣ ಶಾಸಕ ಬಿ.ನಾಗೇಂದ್ರ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುರುಸಿದ್ದಸ್ವಾಮಿ, ಕಾರ್ಯದರ್ಶಿ ಬಿ.ವಿ.ಬಸವರಾಜ್, ಖಜಾಂಚಿ ಗೋನಾಳ್ ರಾಜಶೇಖರಗೌಡ, ಸಹ ಕಾರ್ಯದರ್ಶಿ ದರೂರು ಶಾಂತನಗೌಡರು ತೀವ್ರ ಸಂತಾಪ ಸೂಚಿಸಿದ್ದಾರೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications