ಬಳ್ಳಾರಿಯಲ್ಲಿ ಪರ್ಲ್ಸ್ ವರ್ಲ್ಡ್ ಕಂಪನಿಯಿಂದ ವಂಚನೆ, ಹೂಡಿಕೆದಾರರು ಕಂಗಾಲು
ಬಳ್ಳಾರಿ, ಆಗಸ್ಟ್, 25: ಗಣಿನಾಡು ಬಳ್ಳಾರಿಯಲ್ಲಿ ನಡೆದ ಪರ್ಲ್ಸ್ ವರ್ಲ್ಡ್ ಕಂಪನಿಯ ಬಹುಕೋಟಿ ವಂಚನೆ ಪ್ರಕರಣ ಸದ್ಯಕ್ಕೆ ಇರ್ತಥ್ಯವಾಗುವ ಲಕ್ಷಣಗಳು ಕಾಣುತ್ತಿಲ್ಲ. ಈ ಕಂಪನಿಯ ಮಾಲೀಕ ಬಂಧನವಾಗಿ ಹಲವು ದಿನಗಳು ಕಳೆದರೂ ಹೂಡಿಕೆ ಮಾಡಿದ ಠೇವಣಿದಾರರಿಗೆ ಮಾತ್ರ ಹಣ ಹಿಂದಿರುಗಿಲ್ಲ. ಹೀಗಾಗಿ ಹಣ ಹೂಡಿಕೆ ಮಾಡಿದ ಠೇವಣಿದಾರರು ನಿತ್ಯ ಪೊಲೀಸ್ ಠಾಣೆಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ.
ಪರ್ಲ್ಸ್ ವರ್ಲ್ಡ್ ಕಂಪನಿಯಿಂದ ವಂಚನೆ
ಬಳ್ಳಾರಿ ನಗರ, ಹೊಸಪೇಟೆ ಸೇರಿದಂತೆ ಆಂಧ್ರದ ರಾಜಮಂಡ್ರಿಯಲ್ಲಿ ಪರ್ಲ್ಸ್ ವರ್ಲ್ಡ್ ಕಂಪನಿ ಆರಂಭ ಮಾಡಿದ್ದರು. ಕಂಪನಿ ಆರಭಿಸಿದ್ದ ದೂಡಂ ರವಿ 400ಕ್ಕೂ ಹೆಚ್ಚು ಠೇವಣಿದಾರರಿಂದ ಲಕ್ಷ ಲಕ್ಷ ಹಣ ಸಂಗ್ರಹಿಸಿ ಕಳೆದ ನಾಲ್ಕು ತಿಂಗಳಿನಿಂದ ಪರಾರಿ ಆಗಿದ್ದ. ಕೋಟಿ ಕೋಟಿ ವಂಚಿಸಿದ್ದ ದೂಡಂ ರವಿ ವಿರುದ್ದ ಬಳ್ಳಾರಿಯ ಗಾಂಧಿನಗರ ಹಾಗೂ ಹೊಸಪೇಟೆ ನಗರ ಠಾಣೆ, ಆಂಧ್ರದ ರಾಜಮಂಡ್ರಿಯ ಒನ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆಂಧ್ರದ ರಾಜಮಂಡ್ರಿಯಲ್ಲಿ ಶರಣಾಗಿದ್ದ ಆರೋಪಿ ದೂಡಂ ರವಿಯನ್ನು ಬಳ್ಳಾರಿಯ ಗಾಂಧಿನಗರ ಠಾಣೆಯ ಪೊಲೀಸರು ಕರೆತಂದು ವಿಚಾರಣೆ ನಡೆಸಿದ್ದಾರೆ. ಆದರೆ, ಇದುವರೆಗೂ ಆರೋಪಿಯಿಂದ ಯಾವುದೇ ಹಣ ಸಂಗ್ರಹಿಸಿಲ್ಲ. ಇತ್ತ ಹಣ ಹೂಡಿಕೆ ಮಾಡಿದ ನೂರಾರು ಜನರು ನಿತ್ಯ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಗೆ ಅಲೆದಾಡುತ್ತಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ನಿತ್ಯ ಠಾಣೆಗೆ ಅಲೆದಾಡಿದರೂ ಹೂಡಿದ ಹಣ ಸಿಗುತ್ತಿಲ್ಲ ಎಂದು ಅಲ್ಲಿನ ಜನರು ಅಸಮಾಧಾನ ಹೊರಹಾಕಿದ್ದಾರೆ.

ಬಳ್ಳಾರಿಯಲ್ಲಿ ಠೇವಣಿದಾರರ ಅಳಲು
ಆರೋಪಿಯನ್ನ ಮಂಪರು ಪರೀಕ್ಷೆಗೆ ಒಳಪಡಿಸುವ ಮೂಲಕ ಹಣ ವಾಪಾಸ್ ಕೊಡಿಸಬೇಕು ಎಂದು ಹೂಡಿಕೆದಾರರು ಅಳಲು ತೋಡಿಕೊಂಡಿದ್ದಾರೆ. ಕಡಿಮೆ ಅವಧಿಗೆ ಹೆಚ್ಚಿನ ಲಾಭ ಸಿಗುತ್ತದೆ ಅನ್ನುವ ಕಾರಣದಿಂದ ನೂರಾರು ಜನರು ಪರ್ಲ್ಸ್ ವರ್ಲ್ಡ್ ಕಂಪನಿಗೆ ಲಕ್ಷ ಲಕ್ಷ ಹಣ ಹೂಡಿಕೆ ಮಾಡಿದ್ದಾರೆ. ನೂರಾರು ಮಹಿಳೆಯರು ಸಾಲ ಮಾಡಿ ಹಣ ಹೂಡಿಕೆ ಮಾಡಿದ್ದರು. ಇನ್ನೂ ಕೆಲವರು ಬಂಗಾರವನ್ನು ಒತ್ತೆಯಿಟ್ಟು ಹೂಡಿಕೆ ಮಾಡಿದ್ದಾರೆ. ಆದರೆ ಈಗ ಇದ್ಯಾವುದು ಕೈಗೆ ಸಿಗದಂತೆ ಬಡ್ಡಿ ಸಾಲ ಬೆಳೆಯುತ್ತಿದೆ. ಇತ್ತ ಹೂಡಿಕೆ ಮಾಡಿದ ಹಣವೂ ಸಿಗುತ್ತಿಲ್ಲ. ಇದರಿಂದ ಬೇಸತ್ತ ಠೇವಣಿದಾರರು ನಿತ್ಯ ಪೊಲೀಸ್ ಠಾಣೆಗೆ ಅಲೆದಾಡುತ್ತಿದ್ದಾರೆ. ಪ್ರತಿನಿತ್ಯವೂ ಠಾಣೆಗೆ ಹೋಗುವುದು, ಮತ್ತೆ ವಾಪಾಸ್ ಬರುವುದು ಆಗಿಬಿಟ್ಟಿದೆ. ಇದುವರೆಗೆ ನಾವು ಹೂಡಿಕೆ ಮಾಡಿದ ಹಣ ವಾಪಾಸ್ ಸಿಗುತ್ತಿಲ್ಲ ಎಂದು ಮಹಿಳೆಯರು ಅಸಮಾಧಾನ ಹೊರಹಾಕಿದರು. ಕಳೆದ ನಾಲ್ಕು ತಿಂಗಳಿನಿಂದಲೂ ಠೇವಣಿದಾರರು ಠಾಣೆಗೆ ಅಲೆದಾಡಿದರೂ ಕೂಡ ಪ್ರಯೋಜನವಾಗಿಲ್ಲ. ಹೀಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ಠೇವಣಿದಾರರು ತೀರ್ಮಾನ ಮಾಡಿದ್ದಾರೆ.

ಬಹುಕೋಟಿ ವಂಚನೆ ಮಾಡಿದ ಆರೋಪಿಯಿಂದ ಬಳ್ಳಾರಿಯ ಗಾಂಧಿನಗರ ಠಾಣೆಯ ಪೊಲೀಸರು ಇದುವರೆಗೆ ಒಂದು ರೂಪಾಯಿಯನ್ನೂ ಜಪ್ತಿ ಮಾಡದಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಹೂಡಿಕೆದಾರರು ಅಸಮಾಧಾನ ಹೊರಹಾಕಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications