ಯುವತಿ ಜೊತೆ ಸ್ನೇಹ: ಯುವಕನಿಗೆ ಹಿಗ್ಗಾಮುಗ್ಗಾ ಥಳಿತದ ವಿಡಿಯೋ ವೈರಲ್!
ಬಳ್ಳಾರಿ, ಡಿಸೆಂಬರ್ 13: ಯುವತಿಯ ಜೊತೆ ಸ್ನೇಹ ಮಾಡಿದ್ದ ಯುವಕನಿಗೆ ಧರ್ಮದೇಟು ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗಣಿ ನಗರಿ ಬಳ್ಳಾರಿಯಲ್ಲಿ ಆ ವಿಡಿಯೊ ತುಣುಕುಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿ ಇದೀಗ ಭಾರೀ ಸದ್ದು ಮಾಡುತ್ತಿವೆ.
ಒಂದು ಧರ್ಮದ ಯುವತಿಯ ಕಡೆಯವರು ಅದೇ ಧರ್ಮದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೇ, ಹಲ್ಲೆಗೆ ಹಳೆಯದಾದ ಕಬ್ಬಿಣದ ಚೇರ್ ಹಾಗೂ ಕಲ್ಲನ್ನು ಬಳಕೆ ಮಾಡಿಕೊಂಡಿದ್ದಾರೆ. ಆ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೋಡುಗರ ಮನಕಲಕುವಂತಿವೆ.
ಘಟನೆಗೆ ಕಾರಣ:
ಬಳ್ಳಾರಿ ನಗರದ ಕೌಲ್ ಬಜಾರ್ ನ ಯುವಕ ಫಜಲ್ ಹಾಗೂ ಯುವತಿ ಅಬಿದಾ ಗಾಡ ಸ್ನೇಹಿತರಾಗಿದ್ದರು. ಈ ಹಿಂದೆ ಅಬಿದಾ ಮನೆ ಕಡೆಯವರು ಅವರಿಬ್ಬರಿಗೂ ಮಾತನಾಡದಂತೆ ವಾರ್ನಿಂಗ್ ಮಾಡಿದ್ದರು.

ಇಷ್ಟಾದರೂ ಸ್ನೇಹ ಮುದುವರೆಸಿದ್ದರಿಂದ, ಯುವತಿ ಅಬಿದಾ ಮನೆ ಕಡೆಯವರಿಂದ ನಡು ರಸ್ತೆಯಲ್ಲೇ ಯುವಕ ಫಜಲ್ ಹಾಗೂ ಕುಟುಬಸ್ಥರ ಮೇಲೆ ಮಾರಣಾಂತಿಕ ಹಲ್ಲೆಗೆ ಮುಂದಾಗಿರುವುದು ಇದೀಗ ಬೆಳಕಿಗೆ ಬಂದಿದೆ.
ಯುವತಿ ಅಬಿದಾ ತಂದೆ ಆರೀಫ್ ಮತ್ತು ಚಿಕ್ಕಪ್ಪ ಇದಾಯತ್ ಸೇರಿ ಎಂಟು ಮಂದಿಯ ಗುಂಪೊಂದು ಫಜಲ್ ಹಾಗೂ ಆತನ ತಂದೆ ವಲಿಬಾಷಾ ಹಾಗೂ ಚಿಕ್ಕಪ್ಪ ನಿಸಾರ್ ಅಹಮದ್ ಮೇಲೆ ಹಲ್ಲೆ ನಡೆಸಿದ್ದರ ಪರಿಣಾಮ ಗಂಭೀರ ಗಾಯಗಳಾಗಿದ್ದು, ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾದ ಇದಾಯತ್ ಸರ್ಕಾರಿ ನೌಕರರಾಗಿದ್ದಾರೆ. ಇದಾಯತ್ ಸೇರಿ ಎಂಟು ಮಂದಿಯ ವಿರುದ್ದ ಎಫ್ಐಆರ್ ದಾಖಲಾಗಿದೆ. ಈ ಘಟನೆ ನಡೆದು ಐದು ದಿನ ಕಳೆದರೂ ಕೂಡ ಆರೋಪಿಗಳನ್ನು ಈವರೆಗೂ ಬಂಧಿಸಿಲ್ಲ ಎಂಬ ಆರೋಪವೂ ಕೂಡ ಕೇಳಿಬಂದಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications