ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈ ಬಾರಿ ಹಂಪಿ ಉತ್ಸವ ಇಲ್ಲ, ಸರ್ಕಾರ ಅಧಿಕೃತ ಘೋಷಣೆ

|
Google Oneindia Kannada News

ಬಳ್ಳಾರಿ, ನವೆಂಬರ್ 27: ಈ ಬಾರಿ ಹಂಪಿ ಉತ್ಸವ ಆಚರಿಸದಿರಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೂರಕ್ಕಿಂತಲೂ ಹೆಚ್ಚು ತಾಲೂಕುಗಳಲ್ಲಿ ಬರ ಇರುವ ಕಾರಣ ಆಡಂಬರವಾಗಿ ಹಂಪಿ ಉತ್ಸವ ಮಾಡಲು ಸಾಧ್ಯವಿಲ್ಲ, ಹೀಗಾಗಿ ಹಂಪಿ ಉತ್ಸವವನ್ನು ಮುಂದೂಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಹಂಪಿ ಉತ್ಸವಕ್ಕೆ ಕೂಡಿ ಬರದ ಮುಹೂರ್ತ: ನಡೆಯುವುದು ಅನುಮಾನ ಹಂಪಿ ಉತ್ಸವಕ್ಕೆ ಕೂಡಿ ಬರದ ಮುಹೂರ್ತ: ನಡೆಯುವುದು ಅನುಮಾನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿ ಉತ್ಸವಕ್ಕೆಂದೇ 10ಕೋಟಿ ರೂ,ಗಳ ಅನುದಾನವನ್ನು ತೆಗೆದಿರಿಸುತ್ತಿತ್ತು, ಆದರೆ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಮೇಲೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬಜೆಟ್‌ನಲ್ಲಿ ಹಂಪಿ ಉತ್ಸವಕ್ಕೆ ಯಾವುದೇ ಅನುದಾನವನ್ನು ತೆಗೆದಿರಿಸಿರಲಿಲ್ಲ.

Govt cancels Hampi Utsav this year

ರಾಜ್ಯ ಸರ್ಕಾರ ಹಂಪಿ ಉತ್ಸವಕ್ಕೆ ಅನುದಾನವನ್ನೇ ಬಿಡುಗಡೆ ಮಾಡಿಲ್ಲವಾದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಸಂಪನ್ಮೂಲ ಕ್ರೋಢೀಕರಿಸಿ ಹಂಪಿ ಉತ್ಸವ ನೆರವೇರಿಸುವುದಾಗಿ ಹಂಪಿ ಉತ್ಸವ ನಡೆಸುವುದಾಗಿ ಡಿಕೆ ಶಿವಕುಮಾರ್‌ ತಿಳಿಸಿದ್ದರು.

ಹಂಪಿ ಉತ್ಸವಕ್ಕೆ ಕೊನೆಗೂ ಮುಹೂರ್ತ ಫಿಕ್ಸ್‌ ಹಂಪಿ ಉತ್ಸವಕ್ಕೆ ಕೊನೆಗೂ ಮುಹೂರ್ತ ಫಿಕ್ಸ್‌

ಬಳ್ಳಾರಿಯ ಐದು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಹಂಪಿ ಉತ್ಸವ ಬೇಕೆ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಸರ್ಕಾರದ ಹಂತದಲ್ಲಿಯೇ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

English summary
Following drought in more than 100 taluks, state government has cancelled Hampi Utsav celebration this year, district in charge minister D.K. Shivakumar said
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X