ಹಂಪೆಯಲ್ಲಿ ಪ್ರವಾಸಿ ವಿಶ್ವವಿದ್ಯಾಲಯ: ಮೆಚ್ಚುಗೆ ವ್ಯಕ್ತಪಡಿಸಿದ ಗೈಡ್ ಗಳು
ಬಳ್ಳಾರಿ, ಜುಲೈ 05: ಎಚ್.ಡಿ. ಕುಮಾರಸ್ವಾಮಿ ಅವರು ಬಜೆಟ್ ನಲ್ಲಿ ಪ್ರವಾಸಿ ಗೈಡುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತರಬೇತಿಗೊಳಿಸಲಿಕ್ಕಾಗಿ ಹಂಪೆಯಲ್ಲಿ ಪ್ರವಾಸಿ ವಿಶ್ವವಿದ್ಯಾಲಯ' ಪ್ರಾರಂಭಿಸಲು ಮುಂದಾಗಿರುವುದನ್ನು ಗೈಡ್ ಗಳು ಸ್ವಾಗತಿಸಿದ್ದಾರೆ.
ಹಂಪೆ ಕನ್ನಡ ವಿಶ್ವವಿದ್ಯಾಲಯದಲ್ಲಿ ಗೈಡ್ ಕೋರ್ಸ್ ಪ್ರಸ್ತುತ ಬೋಧಿಸಲಾಗುತ್ತಿದೆ. ಈ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ನೀಡುವ ಒಂದು ತಿಂಗಳ ಪ್ರವಾಸಿ ಗೈಡ್' ತರಬೇತಿ ಪಡೆದು, ಅಧಿಕೃತವಾಗಿ ಗುರುತಿನ ಚೀಟಿ (ಐಡಿ ಕಾರ್ಡ್) ಪಡೆದು, ಗೈಡ್ ಕೆಲಸ ನಿರ್ವಹಿಸುತ್ತಿದ್ದಾರೆ.
ಪ್ರವಾಸೋದ್ಯಮ ಇಲಾಖೆ ನೀಡುವ ತರಬೇತಿಯಿಂದ ಕೌಶಲ್ಯಭರಿತ ಗೈಡ್ ಗಳಾಗಿರುವ 100 - 150 ಗೈಡುಗಳು ಹಂಪೆಯಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ, 60 -75 ಗೈಡ್ ಗಳು ಅನಧಿಕೃತವಾಗಿ ಕೆಲಸ ಮಾಡುತ್ತಿದ್ದಾರೆ.

ಕೆಲ ಗೈಡುಗಳು ದೇಶೀ ಭಾಷೆಗಳ ಜೊತೆ ಜೊತೆಯಲ್ಲಿ ವಿದೇಶೀ ಭಾಷೆಗಳನ್ನು ಕಲಿತು, ವಿದೇಶಿ ಪ್ರವಾಸಿಗರ ಮೆಚ್ಚುಗೆ ಗಳಿಸಿದ್ದಾರೆ.
ಇಂಥಹ ಸಂದರ್ಭದಲ್ಲಿ ಹಂಪೆಯಲ್ಲಿ ಪ್ರವಾಸಿ ವಿಶ್ವವಿದ್ಯಾಲಯ ಪ್ರಾರಂಭವಾಗಲು ಗೈಡ್ ಗಳಿಗೆ ರಾಷ್ಟ್ರೀಯ ಮನ್ನಣೆ ಸಿಗುತ್ತಿರುವುದಕ್ಕೆ ಎಸ್ಸಿ/ಎಸ್ಟಿ ಗೈಡ್ ಗಳ ಸಂಘಟನೆಯ ಕಾರ್ಯದರ್ಶಿ ವಾಲ್ಮೀಕಿ ಅಂಬರೀಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ಕನ್ನಡ ವಿಶ್ವವಿದ್ಯಾಲಯ ಮತ್ತು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯಗಳಿವೆ. ಈಗ ಪ್ರವಾಸಿ ವಿಶ್ವವಿದ್ಯಾಲಯ ಪ್ರಾರಂಭವಾದರೆ ಮೂರು ವಿಶ್ವವಿದ್ಯಾಲಯಗಳನ್ನು ಹೊಂದಿದ ಕೀರ್ತಿ ಜಿಲ್ಲೆಗೆ ಸಿಗಲಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications