ವಿವಾದ ಹುಟ್ಟು ಹಾಕಿದ ಹಂಪಿ ಬೈ ನೈಟ್ ಯೋಜನೆ
ಬಳ್ಳಾರಿ, ಅ, 24 : ವಿಶ್ವ ಪ್ರಸಿದ್ಧ ಹಂಪಿಯ ಸ್ಮಾರಕಗಳನ್ನು ಪ್ರವಾಸಿಗರು ರಾತ್ರಿ ವೇಳೆಯಲ್ಲೂ ವೀಕ್ಷಿಸಲು ಅವಕಾಶ ಮಾಡಿಕೊಡುವ ಸಲುವಾಗಿ ಆರಂಭಿಸಲಾಗಿದ್ದ 'ಹಂಪಿ ಬೈ ನೈಟ್' ಯೋಜನೆ ವಿವಾದಕ್ಕೆ ಕಾರಣವಾಗಿದೆ. ಈ ವಿವಾದಿಂದಾಗಿ ಯೋಜನೆಯ ಕಾಮಗಾರಿಯನ್ನು ಸ್ಥಗಿರಗೊಳಿಸಲಾಗಿದೆ.
ಹಂಪಿ ಬೈ ನೈಟ್ ಯೋಜನೆಯ ಟೆಂಡರ್ ಹಂಚಿಕೆ ಮತ್ತು ಕಾಮಗಾರಿ ಅನುಷ್ಠಾನದಲ್ಲಿ ಲೋಪಗಳಾಗುತ್ತಿತ್ತು. ಇದರಿಂದಾಗಿ ಕಾಮಗಾರಿ ಸದ್ಯ ಸ್ಥಗಿತಗೊಂಡಿದ್ದು, ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಜಿಲ್ಲಾಡಳಿತ ಸರ್ಕಾರಕ್ಕೆ ಪತ್ರ ಬರೆದು ಮಾಹಿತಿ ನೀಡಿದೆ. ಕಾಮಗಾರಿ ಸ್ಥಗಿತ ಗೊಳಿಸಿ ಅಲ್ಲಿದ್ದ ಉಪಕರಣಗಳನ್ನು ವಶಪಡಿಸಿಕೊಂಡಿದೆ.

ವಿಜಯನಗರ ಅರಸರ ರಾಜಧಾನಿ ಹಂಪಿಯ ಸ್ಮಾರಕಗಳನ್ನು ಪ್ರವಾಸಿಗರು ರಾತ್ರಿವೇಳೆಯಲ್ಲೂ ವೀಕ್ಷಿಸಲು ಅನುಕೂಲವಾಗುವಂತೆ ಲೈಟಿಂಗ್ ವ್ಯವಸ್ಥೆ ಮಾಡುವುದೇ ಹಂಪಿ ಬೈ ನೈಟ್ ಯೋಜನೆಯಾಗಿತ್ತು. 2010 ರಲ್ಲಿ ರಾಜ್ಯ ಸರ್ಕಾರ 'ಹಂಪಿ ಬೈ ನೈಟ್' ಯೋಜನೆ ಕಾಮಗಾರಿ ಗುತ್ತಿಗೆಯನ್ನು ಬೆಂಗಳೂರು ಮೂಲದ ಇನೋವೆಟಿವ್ ಲೈಟಿಂಗ್ ಸಿಸ್ಟಮ್ಸ್ ಕಂಪೆನಿಗೆ ನೀಡಿ ಆದೇಶ ಹೊರಡಿಸಿತ್ತು.
ಆದರೆ, ಈ ಟೆಂಡರ್ ವ್ಯವಹಾರದಲ್ಲೇ ಅವ್ಯವಹಾರ ನಡೆದಿದೆ ಎಂಬುದು ಸದ್ಯದ ಆರೋಪ. ಗುತ್ತಿಗೆ ಪಡೆದ ಈ ಕಂಪೆನಿಯು ಟೆಂಡರ್ನಲ್ಲಿ ಯೋಜನೆಗೆ ರೂ. 11.50 ಕೋಟಿ ವೆಚ್ಚಾಗುತ್ತದೆ ಎಂದು ನಮೂದಿಸಿತ್ತು. ಆದರೆ, ದೆಹಲಿ ಮೂಲದ ಇಂಟೆಗ್ರೇಟೆಡ್ ಡಿಜಿಟಲ್ ಸಲ್ಯೂಶನ್ ಕಂಪೆನಿ ರೂ. 9.50 ಕೋಟಿ ನಮೂದಿಸಿತ್ತು.
ಆದರೂ ಯೋಜನೆಗೆ ಟೆಂಡರ್ ಅನ್ನು ದೆಹಲಿ ಕಂಪೆನಿಗಿಂತ 2 ಕೋಟಿ ಹೆಚ್ಚು ನಮೂದಿಸಿದ್ದ ಇನೋವೆಟಿವ್ ಲೈಟಿಂಗ್ ಸಿಸ್ಟಮ್ಸ್ ಕಂಪೆನಿಗೆ ನೀಡಲಾಗಿತ್ತು. ಇಂತಹ ಯೋಜನೆ ಅನುಷ್ಠಾನಗೊಳಿಸಿದ ಅನುಭವ ಸಹ ಈ ಕಂಪನಿಗೆ ಇರಲಿಲ್ಲ. ಆದ್ದರಿಂದ ಅಕ್ರಮವಾಗಿ ಈ ಕಂಪನಿಗೆ ಟೆಂಡರ್ ನೀಡಲಾಗಿದೆ ಎಂಬುದು ಸದ್ಯ ಕೇಳಿ ಬರುತ್ತಿರುವ ಆರೋಪ.
ಈ ಕಂಪನಿ ಸೌಂಡ್ ಮತ್ತು ಲೈಟಿಂಗ್ ಕಾಮಗಾರಿಗಳನ್ನು ಬೇರೆ ಕಂಪೆನಿಗಳಿಗೆ ಉಪಗುತ್ತಿಗೆ ನೀಡಿದೆ. ಗುತ್ತಿಗೆದಾರರು ತಾಂತ್ರಿಕವಾಗಿ ಕೆಲಸ ನಿರ್ವಹಿಸುತ್ತಿಲ್ಲ, ಅನುಭವವಿಲ್ಲದ ಕಂಪನಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡುತ್ತಿದೆ ಎಂದು ಜಿಲ್ಲಾಡಳಿತವು ಸರ್ಕಾರಕ್ಕೆ ಬರೆದ ಪತ್ರದಲ್ಲಿ ತಿಳಿಸಿದೆ ಹಾಗೂ ಕಾಮಗಾರಿಯನ್ನು ಸ್ಥಗಿತಗೊಳಿಸಿದೆ.
ಕಂಪೆನಿ ನಿಯಮ ಉಲ್ಲಂಘಿಸಿ ಕಾಮಗಾರಿ ನಡೆಸುತ್ತಿದೆ ಮತ್ತು ಭಾರತೀಯ ಪ್ರಾಚ್ಯ ವಸ್ತು ಸಂಶೋಧನಾ ಇಲಾಖೆ ಸಹ ಕಾಮಗಾರಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ ಆದ್ದರಿಂದ ತಾತ್ಕಾಲಿಕವಾಗಿ ಕಾಮಗಾರಿ ಸ್ಥಗಿತಗೊಳಿಸಿ, ಉಪಕರಣಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಸರ್ಕಾರದ ಆದೇಶದ ನಂತರ ಕಾಮಗಾರಿ ಪ್ರಾರಂಭವಾಗುವುದೋ ಕಾದು ನೋಡಬೇಕು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications