ವಿವಾದ ಹುಟ್ಟು ಹಾಕಿದ ಹಂಪಿ ಬೈ ನೈಟ್ ಯೋಜನೆ
ಬಳ್ಳಾರಿ, ಅ, 24 : ವಿಶ್ವ ಪ್ರಸಿದ್ಧ ಹಂಪಿಯ ಸ್ಮಾರಕಗಳನ್ನು ಪ್ರವಾಸಿಗರು ರಾತ್ರಿ ವೇಳೆಯಲ್ಲೂ ವೀಕ್ಷಿಸಲು ಅವಕಾಶ ಮಾಡಿಕೊಡುವ ಸಲುವಾಗಿ ಆರಂಭಿಸಲಾಗಿದ್ದ 'ಹಂಪಿ ಬೈ ನೈಟ್' ಯೋಜನೆ ವಿವಾದಕ್ಕೆ ಕಾರಣವಾಗಿದೆ. ಈ ವಿವಾದಿಂದಾಗಿ ಯೋಜನೆಯ ಕಾಮಗಾರಿಯನ್ನು ಸ್ಥಗಿರಗೊಳಿಸಲಾಗಿದೆ.
ಹಂಪಿ ಬೈ ನೈಟ್ ಯೋಜನೆಯ ಟೆಂಡರ್ ಹಂಚಿಕೆ ಮತ್ತು ಕಾಮಗಾರಿ ಅನುಷ್ಠಾನದಲ್ಲಿ ಲೋಪಗಳಾಗುತ್ತಿತ್ತು. ಇದರಿಂದಾಗಿ ಕಾಮಗಾರಿ ಸದ್ಯ ಸ್ಥಗಿತಗೊಂಡಿದ್ದು, ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಜಿಲ್ಲಾಡಳಿತ ಸರ್ಕಾರಕ್ಕೆ ಪತ್ರ ಬರೆದು ಮಾಹಿತಿ ನೀಡಿದೆ. ಕಾಮಗಾರಿ ಸ್ಥಗಿತ ಗೊಳಿಸಿ ಅಲ್ಲಿದ್ದ ಉಪಕರಣಗಳನ್ನು ವಶಪಡಿಸಿಕೊಂಡಿದೆ.

ವಿಜಯನಗರ ಅರಸರ ರಾಜಧಾನಿ ಹಂಪಿಯ ಸ್ಮಾರಕಗಳನ್ನು ಪ್ರವಾಸಿಗರು ರಾತ್ರಿವೇಳೆಯಲ್ಲೂ ವೀಕ್ಷಿಸಲು ಅನುಕೂಲವಾಗುವಂತೆ ಲೈಟಿಂಗ್ ವ್ಯವಸ್ಥೆ ಮಾಡುವುದೇ ಹಂಪಿ ಬೈ ನೈಟ್ ಯೋಜನೆಯಾಗಿತ್ತು. 2010 ರಲ್ಲಿ ರಾಜ್ಯ ಸರ್ಕಾರ 'ಹಂಪಿ ಬೈ ನೈಟ್' ಯೋಜನೆ ಕಾಮಗಾರಿ ಗುತ್ತಿಗೆಯನ್ನು ಬೆಂಗಳೂರು ಮೂಲದ ಇನೋವೆಟಿವ್ ಲೈಟಿಂಗ್ ಸಿಸ್ಟಮ್ಸ್ ಕಂಪೆನಿಗೆ ನೀಡಿ ಆದೇಶ ಹೊರಡಿಸಿತ್ತು.
ಆದರೆ, ಈ ಟೆಂಡರ್ ವ್ಯವಹಾರದಲ್ಲೇ ಅವ್ಯವಹಾರ ನಡೆದಿದೆ ಎಂಬುದು ಸದ್ಯದ ಆರೋಪ. ಗುತ್ತಿಗೆ ಪಡೆದ ಈ ಕಂಪೆನಿಯು ಟೆಂಡರ್ನಲ್ಲಿ ಯೋಜನೆಗೆ ರೂ. 11.50 ಕೋಟಿ ವೆಚ್ಚಾಗುತ್ತದೆ ಎಂದು ನಮೂದಿಸಿತ್ತು. ಆದರೆ, ದೆಹಲಿ ಮೂಲದ ಇಂಟೆಗ್ರೇಟೆಡ್ ಡಿಜಿಟಲ್ ಸಲ್ಯೂಶನ್ ಕಂಪೆನಿ ರೂ. 9.50 ಕೋಟಿ ನಮೂದಿಸಿತ್ತು.
ಆದರೂ ಯೋಜನೆಗೆ ಟೆಂಡರ್ ಅನ್ನು ದೆಹಲಿ ಕಂಪೆನಿಗಿಂತ 2 ಕೋಟಿ ಹೆಚ್ಚು ನಮೂದಿಸಿದ್ದ ಇನೋವೆಟಿವ್ ಲೈಟಿಂಗ್ ಸಿಸ್ಟಮ್ಸ್ ಕಂಪೆನಿಗೆ ನೀಡಲಾಗಿತ್ತು. ಇಂತಹ ಯೋಜನೆ ಅನುಷ್ಠಾನಗೊಳಿಸಿದ ಅನುಭವ ಸಹ ಈ ಕಂಪನಿಗೆ ಇರಲಿಲ್ಲ. ಆದ್ದರಿಂದ ಅಕ್ರಮವಾಗಿ ಈ ಕಂಪನಿಗೆ ಟೆಂಡರ್ ನೀಡಲಾಗಿದೆ ಎಂಬುದು ಸದ್ಯ ಕೇಳಿ ಬರುತ್ತಿರುವ ಆರೋಪ.
ಈ ಕಂಪನಿ ಸೌಂಡ್ ಮತ್ತು ಲೈಟಿಂಗ್ ಕಾಮಗಾರಿಗಳನ್ನು ಬೇರೆ ಕಂಪೆನಿಗಳಿಗೆ ಉಪಗುತ್ತಿಗೆ ನೀಡಿದೆ. ಗುತ್ತಿಗೆದಾರರು ತಾಂತ್ರಿಕವಾಗಿ ಕೆಲಸ ನಿರ್ವಹಿಸುತ್ತಿಲ್ಲ, ಅನುಭವವಿಲ್ಲದ ಕಂಪನಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡುತ್ತಿದೆ ಎಂದು ಜಿಲ್ಲಾಡಳಿತವು ಸರ್ಕಾರಕ್ಕೆ ಬರೆದ ಪತ್ರದಲ್ಲಿ ತಿಳಿಸಿದೆ ಹಾಗೂ ಕಾಮಗಾರಿಯನ್ನು ಸ್ಥಗಿತಗೊಳಿಸಿದೆ.
ಕಂಪೆನಿ ನಿಯಮ ಉಲ್ಲಂಘಿಸಿ ಕಾಮಗಾರಿ ನಡೆಸುತ್ತಿದೆ ಮತ್ತು ಭಾರತೀಯ ಪ್ರಾಚ್ಯ ವಸ್ತು ಸಂಶೋಧನಾ ಇಲಾಖೆ ಸಹ ಕಾಮಗಾರಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ ಆದ್ದರಿಂದ ತಾತ್ಕಾಲಿಕವಾಗಿ ಕಾಮಗಾರಿ ಸ್ಥಗಿತಗೊಳಿಸಿ, ಉಪಕರಣಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಸರ್ಕಾರದ ಆದೇಶದ ನಂತರ ಕಾಮಗಾರಿ ಪ್ರಾರಂಭವಾಗುವುದೋ ಕಾದು ನೋಡಬೇಕು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications