ಬಳ್ಳಾರಿಯಲ್ಲಿ ಸುರಿದ‌ ಮಳೆಗೆ ಮನೆಗಳು ಹಾನಿ: ಜನ-ಜಾನುವಾರುಗಳ ಜೀವನ ಅಸ್ತವ್ಯಸ್ತ

ಬಳ್ಳಾರಿ, ಅಕ್ಟೋಬರ್ 15: ಗಣಿನಾಡು ಬಳ್ಳಾರಿ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಹಾ ಮಳೆಯಿಂದ ಜನ-ಜಾನುವಾರುಗಳ ಜೀವನ ಅಸ್ತವ್ಯಸ್ತಗೊಂಡಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕೆಲ ಸೇತುವೆಗಳು ಈ ಮಳೆಯ ನೀರಿನಿಂದ ಜಲಾವೃತಗೊಂಡಿದ್ದು, ಆ‌ ಮಾರ್ಗದಲ್ಲಿನ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಇದಲ್ಲದೇ, ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಾನಾ ಗ್ರಾಮಗಳಲ್ಲಿನ ಒಂಬತ್ತು ಕಚ್ಚಾ ಮನೆಗಳಿಗೆ ಭಾರೀ ಪ್ರಮಾಣದ ಹಾನಿಯುಂಟಾಗಿದ್ದು, ಎರಡು ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿರುವುದು ಬಿಟ್ಟರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಹಾಮಳೆಗೆ ಬಳ್ಳಾರಿ ಜಿಲ್ಲೆಯ ಸಂಡೂರು ಹೋಬಳಿಯಲ್ಲಿ 6 ಮನೆ, ಚೋರುನೂರು ಹೋಬಳಿಯಲ್ಲಿ 3 ಮನೆಗಳಿಗೆ ಹಾನಿ ಉಂಟಾಗಿದೆ. ಸೋವೆನಹಳ್ಳಿ ಗ್ರಾಮದ ಹನುಮಂತಪ್ಪ ಎಂಬುವರಿಗೆ ಸೇರಿದ ಎರಡು ಎಮ್ಮೆಗಳು ಮೃತಪಟ್ಟಿವೆ.

Heavy Rain In North Karnataka: Houses Damaged In Ballari District

ಸಂಡೂರಿನ ತಾರಾನಗರ ಗ್ರಾಮದಲ್ಲಿ 2, ನಾರಾಯಣಪುರ ಗ್ರಾಮದಲ್ಲಿ 3, ಕೃಷ್ಣಾನಗರದಲ್ಲಿ 1, ಚೋರುನೂರು ಹೋಬಳಿಯ ಬೊಮ್ಮಗಟ್ಟ, ಡಿ.ಮಲ್ಲಾಪುರ ಹಾಗೂ ಜಿಗೆನಹಳ್ಳಿಯಲ್ಲಿ ತಲಾ ಒಂದೊಂದು ಮನೆಗೆ ಹಾನಿಯಾಗಿದೆ ಎಂದು ಕಂದಾಯ ನಿರೀಕ್ಷಕರು ತಿಳಿಸಿದ್ದಾರೆ.

Heavy Rain In North Karnataka: Houses Damaged In Ballari District

ಜಿಲ್ಲಾದ್ಯಂತ ಸುರಿದ ಮಳೆಯ ವಿವರ ಇಂತಿದೆ

ಬಳ್ಳಾರಿ-4.5, ಹೂವಿನಹಡಗಲಿ-3.2, ಹಗರಿಬೊಮ್ಮನಹಳ್ಳಿ-15.8, ಹರಪನಹಳ್ಳಿ-49.2, ಹೊಸಪೇಟೆ-3.0, ಕೂಡ್ಲಿಗಿ-16.7, ಸಂಡೂರು-44.2, ಕೊಟ್ಟೂರು-43.0 ಮಿಲಿಮೀಟರ್ ನಷ್ಟು ಮಳೆ ಸುರಿದಿದ್ದು, ಸಿರುಗುಪ್ಪ-ಕುರುಗೋಡು ಹಾಗೂ ಕಂಪ್ಲಿ ಭಾಗದಲ್ಲಿ ಮಳೆಯೇ ಸುರಿದಿಲ್ಲ ಎಂದು ಜಿಲ್ಲಾ ಸಾಂಖ್ಯಿಕ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+