ವಾಂತಿ ಭೇದಿ ಪ್ರಕರಣಗಳ ನಿಯಂತ್ರಣ ಮಾಡುವುದು ಹೇಗೆ?
ಬಳ್ಳಾರಿ, ಜೂನ್. 27: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಇದೇ ವೇಳೆ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿದ್ದು ರೋಗ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಲುಷಿತ ನೀರಿನಿಂದ ಮತ್ತು ಕಲುಷಿತ ಆಹಾರ ಸೇವನೆಯಿಂದ ಸಾಮಾನ್ಯವಾಗಿ ವಾಂತಿ ಬೇಧಿ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿವೆ.
ಹೀಗಾಗಿ ಸಾರ್ವಜನಿಕರು ಕುದಿಸಿ ಆರಿಸಿ ಸೋಸಿದ ನೀರನ್ನು ಕುಡಿಯಲು ಆದ್ಯತೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದ್ದಾರೆ. ಬಳ್ಳಾರಿ ತಾಲ್ಲೂಕಿನ ವೈ. ಕಗ್ಗಲ್ ಗ್ರಾಮದಲ್ಲಿ ಶಂಕಿತ ವಾಂತಿ ಬೇಧಿ ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಜಾಗೃತಿ ನೀಡಿದ್ದಾರೆ.

ವಾಂತಿ ಭೇದಿ ತಡೆಯುವುದು ಹೇಗೆ?
ಓಆರ್ಎಸ್ ಜೀವಜಲ ತಯಾರಿಸಬೇಕು. ಇದನ್ನು ತಯಾರಿಸುವಾಗ 1 ಲೀಟರ್ ನೀರಿಗೆ ಇಲಾಖೆಯಿಂದ ನೀಡುವ ಓಆರ್ಎಸ್ ಪೊಟ್ಟಣದ ಪುಡಿಯವನ್ನು ಸಂಪೂರ್ಣವಾಗಿ ಹಾಕಿ ಮಿಶ್ರಣ ಮಾಡಿದ ದ್ರಾವಣವನ್ನು ವಾಂತಿ ಭೇದಿ ಭಾದಿತರಿಗೆ ಕುಡಿಯಲು ಕೊಡಬೇಕು. 24 ಗಂಟೆಯೊಳಗಡೆ ಸಂಪೂರ್ಣವಾಗಿ ಬಳಸಬೇಕು ಮತ್ತು ವಾಂತಿ ಭೇದಿ ಪ್ರಕರಣ ನಿಯಂತ್ರಿಸಲು ಕೈ ಜೋಡಿಸಬೇಕು ಎಂದು ಅವರು ಹೇಳಿದ್ದಾರೆ.
ಕಲುಷಿತ ನೀರಿನ ಸೇವನೆಯಿಂದ ಸಾಮಾನ್ಯವಾಗಿ ವಾಂತಿ-ಬೇದಿ, ಕಾಲರಾ, ಟೈಪಾಯಿಡ್, ಹೆಪಟೈಟಸ್-ಎ, ಗಿಯಾರ್ಡಿಯಾ, ಸಾಲ್ಮೋನೆಲ್ಲಾ ಶಿಗೆಲ್ಲೋಸಿಸ್, ಅಮೀಬಿಯಾಸಿಸ್, ಇ-ಕೋಲಿ (ಇವುಗಳಲ್ಲಿ ವಾಂತಿ-ಭೇದಿ, ಕಾಲರಾ, ಹೆಪಟೈಟಸ್-ಎ, ಕಲುಷಿತ ಆಹಾರ ಸೇವನೆ) ಸಾಂಕ್ರಾಮಿಕ ರೋಗಗಳು ಹರಡುತ್ತವೆ ಎಂದು ಅರಿವು ಮೂಡಿಸಿದ್ದಾರೆ.
ಪ್ರಸ್ತುತ ಗ್ರಾಮದಲ್ಲಿ ರೋಗ ಸಂಪೂರ್ಣ ನಿಯಂತ್ರಣದಲ್ಲಿದ್ದು, ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಅವರ ಮಾರ್ಗದರ್ಶನದಲ್ಲಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರವನ್ನು ಆರಂಭಿಸಲಾಗಿದೆ. ತಾಲ್ಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ದಿನದ 24 ಗಂಟೆ ವೈದ್ಯಕೀಯ ತಂಡ ಸ್ಥಳದಲ್ಲಿಯೇ ಇದ್ದು, ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಲಾಗಿದೆ ಎಂದಿದ್ದಾರೆ.

ಮನೆ ಮನೆಗೆ ಭೇಟಿ ನೀಡಿ ಜಾಗೃತಿ
ಸ್ಥಳೀಯ ಆಶಾ ಕಾರ್ಯಕರ್ತೆಯರು ಮತ್ತು ಕ್ಷೇತ್ರ ಸಿಬ್ಬಂದಿಯ 9 ತಂಡಗಳನ್ನು ರಚಿಸಿ, ಮನೆ ಮನೆಗೆ ಭೇಟಿ ನೀಡಿ ಜಾಗೃತಿ ನೀಡಲಾಗುತ್ತಿದ್ದು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ಮೈಕಿಂಗ್ ಹಾಗೂ ಸ್ವಚ್ಛತೆ ಕುರಿತು ಪ್ರಾತ್ಯಕ್ಷತೆಯನ್ನು ಮಾಡಿಸಲಾಗುತ್ತಿದೆ. ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಕಾಲಾರ ನಿಯಂತ್ರಣ ತಂಡವು ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, ಸಾರ್ವಜನಿಕರು ಶುದ್ದ ನೀರಿನ ಘಟಕದ ನೀರನ್ನು ಕುಡಿಯಬೇಕು ಎಂದು ವಿನಂತಿಸಿದ್ದಾರೆ.
ಮಲ-ಮೂತ್ರ ವಿಸರ್ಜನೆಗಾಗಿ ಶೌಚಾಲಯಗಳನ್ನೇ ಬಳಸಬೇಕು. ತಂಗಳು ಆಹಾರ ಸೇವಿಸದೇ ಬೆಳಗಿನ ಆಹಾರ ಬೆಳಿಗ್ಗೆ ಹಾಗೂ ರಾತ್ರಿ ಆಹಾರ ರಾತ್ರಿ ಮಾತ್ರ ಬಳಸಬೇಕು. ತಯಾರಿಸಿದ ಆಹಾರದ ಮೇಲೆ ನೊಣಗಳು ಕೂಡದಂತೆ ಮುಚ್ಚಳ ಮುಚ್ಚಬೇಕು. ಕುಡಿಯುವ ನೀರು ತುಂಬಿದ ನಂತರ ಪಾತ್ರೆಗಳಿಗೆ ಮುಚ್ಚಳ ಮುಚ್ಚಿ. ಆದಷ್ಟು ನಳ ಇರುವ ಪಾತ್ರೆಗಳನ್ನು ಬಳಸಿ. ನೀರಿನಲ್ಲಿ ಕೈ ಅದ್ದದಂತೆ ಮುಂಜಾಗೃತೆ ವಹಿಸಿ ಎಂದಿದ್ದಾರೆ.
ವಾಂತಿ-ಭೇದಿ ಅಥವಾ ಕಾಲರಾ ಸೋಂಕಿತರಿಗೆ ಮನೆಯಲ್ಲಿಯೆ ತಯಾರಿಸಿದ ಗಂಜಿ, ಬೇಳೆ ತಿಳಿ, ನಿಂಬು ಪಾನಕ ಹಾಗೂ ಎಳೆನೀರು ಕೊಡುವುದನ್ನು ನಿಲ್ಲಿಸಬಾರದು. ಊಟದ ಮೊದಲು ಹಾಗೂ ಶೌಚದ ನಂತರ ಕೈಗಳನ್ನು ಸಾಬೂನು ಮತ್ತು ನೀರಿನಿಂದ ತಪ್ಪದೇ ತೊಳೆಯಬೇಕು ಎಂದು ತಿಳಿಸಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications