ವಾಂತಿ ಭೇದಿ ಪ್ರಕರಣಗಳ ನಿಯಂತ್ರಣ ಮಾಡುವುದು ಹೇಗೆ?
ಬಳ್ಳಾರಿ, ಜೂನ್. 27: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಇದೇ ವೇಳೆ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿದ್ದು ರೋಗ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಲುಷಿತ ನೀರಿನಿಂದ ಮತ್ತು ಕಲುಷಿತ ಆಹಾರ ಸೇವನೆಯಿಂದ ಸಾಮಾನ್ಯವಾಗಿ ವಾಂತಿ ಬೇಧಿ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿವೆ.
ಹೀಗಾಗಿ ಸಾರ್ವಜನಿಕರು ಕುದಿಸಿ ಆರಿಸಿ ಸೋಸಿದ ನೀರನ್ನು ಕುಡಿಯಲು ಆದ್ಯತೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದ್ದಾರೆ. ಬಳ್ಳಾರಿ ತಾಲ್ಲೂಕಿನ ವೈ. ಕಗ್ಗಲ್ ಗ್ರಾಮದಲ್ಲಿ ಶಂಕಿತ ವಾಂತಿ ಬೇಧಿ ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಜಾಗೃತಿ ನೀಡಿದ್ದಾರೆ.

ವಾಂತಿ ಭೇದಿ ತಡೆಯುವುದು ಹೇಗೆ?
ಓಆರ್ಎಸ್ ಜೀವಜಲ ತಯಾರಿಸಬೇಕು. ಇದನ್ನು ತಯಾರಿಸುವಾಗ 1 ಲೀಟರ್ ನೀರಿಗೆ ಇಲಾಖೆಯಿಂದ ನೀಡುವ ಓಆರ್ಎಸ್ ಪೊಟ್ಟಣದ ಪುಡಿಯವನ್ನು ಸಂಪೂರ್ಣವಾಗಿ ಹಾಕಿ ಮಿಶ್ರಣ ಮಾಡಿದ ದ್ರಾವಣವನ್ನು ವಾಂತಿ ಭೇದಿ ಭಾದಿತರಿಗೆ ಕುಡಿಯಲು ಕೊಡಬೇಕು. 24 ಗಂಟೆಯೊಳಗಡೆ ಸಂಪೂರ್ಣವಾಗಿ ಬಳಸಬೇಕು ಮತ್ತು ವಾಂತಿ ಭೇದಿ ಪ್ರಕರಣ ನಿಯಂತ್ರಿಸಲು ಕೈ ಜೋಡಿಸಬೇಕು ಎಂದು ಅವರು ಹೇಳಿದ್ದಾರೆ.
ಕಲುಷಿತ ನೀರಿನ ಸೇವನೆಯಿಂದ ಸಾಮಾನ್ಯವಾಗಿ ವಾಂತಿ-ಬೇದಿ, ಕಾಲರಾ, ಟೈಪಾಯಿಡ್, ಹೆಪಟೈಟಸ್-ಎ, ಗಿಯಾರ್ಡಿಯಾ, ಸಾಲ್ಮೋನೆಲ್ಲಾ ಶಿಗೆಲ್ಲೋಸಿಸ್, ಅಮೀಬಿಯಾಸಿಸ್, ಇ-ಕೋಲಿ (ಇವುಗಳಲ್ಲಿ ವಾಂತಿ-ಭೇದಿ, ಕಾಲರಾ, ಹೆಪಟೈಟಸ್-ಎ, ಕಲುಷಿತ ಆಹಾರ ಸೇವನೆ) ಸಾಂಕ್ರಾಮಿಕ ರೋಗಗಳು ಹರಡುತ್ತವೆ ಎಂದು ಅರಿವು ಮೂಡಿಸಿದ್ದಾರೆ.
ಪ್ರಸ್ತುತ ಗ್ರಾಮದಲ್ಲಿ ರೋಗ ಸಂಪೂರ್ಣ ನಿಯಂತ್ರಣದಲ್ಲಿದ್ದು, ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಅವರ ಮಾರ್ಗದರ್ಶನದಲ್ಲಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರವನ್ನು ಆರಂಭಿಸಲಾಗಿದೆ. ತಾಲ್ಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ದಿನದ 24 ಗಂಟೆ ವೈದ್ಯಕೀಯ ತಂಡ ಸ್ಥಳದಲ್ಲಿಯೇ ಇದ್ದು, ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಲಾಗಿದೆ ಎಂದಿದ್ದಾರೆ.

ಮನೆ ಮನೆಗೆ ಭೇಟಿ ನೀಡಿ ಜಾಗೃತಿ
ಸ್ಥಳೀಯ ಆಶಾ ಕಾರ್ಯಕರ್ತೆಯರು ಮತ್ತು ಕ್ಷೇತ್ರ ಸಿಬ್ಬಂದಿಯ 9 ತಂಡಗಳನ್ನು ರಚಿಸಿ, ಮನೆ ಮನೆಗೆ ಭೇಟಿ ನೀಡಿ ಜಾಗೃತಿ ನೀಡಲಾಗುತ್ತಿದ್ದು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ಮೈಕಿಂಗ್ ಹಾಗೂ ಸ್ವಚ್ಛತೆ ಕುರಿತು ಪ್ರಾತ್ಯಕ್ಷತೆಯನ್ನು ಮಾಡಿಸಲಾಗುತ್ತಿದೆ. ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಕಾಲಾರ ನಿಯಂತ್ರಣ ತಂಡವು ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, ಸಾರ್ವಜನಿಕರು ಶುದ್ದ ನೀರಿನ ಘಟಕದ ನೀರನ್ನು ಕುಡಿಯಬೇಕು ಎಂದು ವಿನಂತಿಸಿದ್ದಾರೆ.
ಮಲ-ಮೂತ್ರ ವಿಸರ್ಜನೆಗಾಗಿ ಶೌಚಾಲಯಗಳನ್ನೇ ಬಳಸಬೇಕು. ತಂಗಳು ಆಹಾರ ಸೇವಿಸದೇ ಬೆಳಗಿನ ಆಹಾರ ಬೆಳಿಗ್ಗೆ ಹಾಗೂ ರಾತ್ರಿ ಆಹಾರ ರಾತ್ರಿ ಮಾತ್ರ ಬಳಸಬೇಕು. ತಯಾರಿಸಿದ ಆಹಾರದ ಮೇಲೆ ನೊಣಗಳು ಕೂಡದಂತೆ ಮುಚ್ಚಳ ಮುಚ್ಚಬೇಕು. ಕುಡಿಯುವ ನೀರು ತುಂಬಿದ ನಂತರ ಪಾತ್ರೆಗಳಿಗೆ ಮುಚ್ಚಳ ಮುಚ್ಚಿ. ಆದಷ್ಟು ನಳ ಇರುವ ಪಾತ್ರೆಗಳನ್ನು ಬಳಸಿ. ನೀರಿನಲ್ಲಿ ಕೈ ಅದ್ದದಂತೆ ಮುಂಜಾಗೃತೆ ವಹಿಸಿ ಎಂದಿದ್ದಾರೆ.
ವಾಂತಿ-ಭೇದಿ ಅಥವಾ ಕಾಲರಾ ಸೋಂಕಿತರಿಗೆ ಮನೆಯಲ್ಲಿಯೆ ತಯಾರಿಸಿದ ಗಂಜಿ, ಬೇಳೆ ತಿಳಿ, ನಿಂಬು ಪಾನಕ ಹಾಗೂ ಎಳೆನೀರು ಕೊಡುವುದನ್ನು ನಿಲ್ಲಿಸಬಾರದು. ಊಟದ ಮೊದಲು ಹಾಗೂ ಶೌಚದ ನಂತರ ಕೈಗಳನ್ನು ಸಾಬೂನು ಮತ್ತು ನೀರಿನಿಂದ ತಪ್ಪದೇ ತೊಳೆಯಬೇಕು ಎಂದು ತಿಳಿಸಿದ್ದಾರೆ.
-
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications