ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಳೆಗೆ ನೆಲ ಕಚ್ಚಿದ ಬೆಳೆ : ಆರ್ಥಿಕ ಸಂಕಷ್ಟದಲ್ಲಿ ರೈತರು

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಮೇ. 27 : ಹಗರಿಬೊಮ್ಮನಹಳ್ಳಿ ಮತ್ತು ಹೊಸಪೇಟೆ ತಾಲೂಕಿನಾದ್ಯಂತ ಬೀಸಿದ ಬಿರುಗಾಳಿ ಮತ್ತು ಮಳೆಗೆ ವಿದ್ಯುತ್ ಪೋಲ್ ಗಳು, ಮೊಬೈಲ್ ಟವರ್ ಗಳು ಬಾಗಿವೆ. ಅಷ್ಟೇ ಅಲ್ಲ, ಬಾಳೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳು ನೆಲಕಚ್ಚಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಹಗರಿಬೊಮ್ಮಹಳ್ಳಿ ತಾಲೂಕಿನ ತಂಬ್ರಹಳ್ಳಿ ಹೋಬಳಿಯಲ್ಲಿ ಬೀಸಿದ ಭಾರಿ ಬಿರುಗಾಳಿ, ಮಳೆಗೆ ಬಿಜಾಪುರದ ಕೂಡ್ಗಿ ವಿದ್ಯುತ್ ಸಂಗ್ರಹ ಘಟಕದಿಂದ ತುಮಕೂರಿನ ಮಧುಗಿರಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸರಬರಾಜು ಮಾಡುವ 750 ಕೆ.ವಿ. ಸಾಮರ್ಥ್ಯದ ವಿದ್ಯುತ್ ಪೂರೈಸುವ ನೂರಾರು ಅಡಿ ಎತ್ತರದ ನಾಲ್ಕಾರು ಗೋಪುರಗಳು ಗುರುವಾರ ರಾತ್ರಿ ನೆಲಕ್ಕುರುಳಿವೆ.

ಸಾಲಮನ್ನಾ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಕೇಳಿ ರೈತ ಆತ್ಮಹತ್ಯೆ ಸಾಲಮನ್ನಾ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಕೇಳಿ ರೈತ ಆತ್ಮಹತ್ಯೆ

ಜೆಸ್ಕಾಂನ 25 ಕೆ.ವಿ. ಶಕ್ತಿಯುಳ್ಳ ವಿದ್ಯುತ್ ಪರಿವರ್ತಕಗಳು ನಾಶವಾಗಿವೆ. 50 - 60 ಕಂಬಗಳು ನೆಲಕಚ್ಚಿವೆ. ತಂತಿಗಳು ಹರಿದು ಬಿದ್ದ ಪರಿಣಾಮ ವಿದ್ಯುತ್ ಕಂಬಗಳ ಜೊತೆಗೆ ಅನೇಕ ಕಡೆ ನೂರಾರು ಮರ ಗಿಡಗಳು ನೆಲಕ್ಕುರುಳಿ ಕೃಷಿ ಬೆಳೆಗಳು ನಷ್ಟವಾಗಿವೆ.

horticultural crops have fallen, farmers are in trouble

ಸುಮಾರು 8-10 ಲಕ್ಷ ರೂಪಾಯಿ ಬೆಲೆಯ ಬೆಳೆ ಹಾಳಾಗಿದೆ ಎಂದು ರೈತರು ತಿಳಿಸಿದ್ದಾರೆ.

ಹೊಸಪೇಟೆ ತಾಲೂಕಿನಾದ್ಯಂತ 300 ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ಬಾಳೆ, ದ್ರಾಕ್ಷಿ, ದಾಳಿಂಬೆ ಸೇರಿ ವಿವಿಧ ತೋಟಗಾರಿಕೆ ಬೆಳೆಗಳು ನೆಲಕಚ್ಚಿ, ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

English summary
There are power poles and mobile towers have fallen for storm and rain blowing across Hagaribommanahalli and Hosapete taluk. Including grapes, pomegranates various horticultural crops have fallen. Farmers are in trouble
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X