ಹೊಸಪೇಟೆ: ಭೀಕರ ಅಪಘಾತ ಪ್ರಕರಣ, ಮೃತರ ಕುಟುಂಬಸ್ಥರಿಗೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ. ಘೋಷಣೆ
ಬಳ್ಳಾರಿ ಜೂನ್, 30: ಬಳ್ಳಾರಿ ನಗರದಿಂದ ಹೊಸಪೇಟೆ ಬಳಿಯಿರುವ ತುಂಗಭದ್ರಾ ಜಲಾಶಯ ನೋಡಲು ಆಗಮಿಸಿದ್ದ ಪ್ರವಾಸಿಗರ ಆಟೋಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ 7 ಜನ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಮೃತ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳ ಚಿಕಿತ್ಸೆಗೆ ತಲಾ 50 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಮಾಹಿತಿ ನೀಡಿದ್ದಾರೆ.
ಸಫುರಾ ಬೀ (55), ಕೌಸರ್ (35), ಸಲೀಂ, ಯಾಸ್ಮೀನ್ (28), ಇಬ್ರಾಹಿಂ (28) ಹಾಗೂ ಜಹೀರ್ 4- ಇಬ್ರಾಹಿಂ ಹಾಗೂ ಆಟೋಚಾಲಕ ಮೃತಪಟ್ಟರವಾಗುದ್ದಾರೆ. ಇನ್ನು ಶಾನು (30), ಸಹಿರಾ (24), ನವಾಜ್ (3),
ತಾಹೀರ್ (6) ಗಾಯಳಾಗುಗಳಾಗಿದ್ದಾರೆ.
ಘಟನೆ ಬಗ್ಗೆ ಸಚಿವ ಬಿ.ನಾಗೇಂದ್ರ ಸಿಎಂ ಸಿದ್ದರಾಮಯ್ಯಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಇದೇ ವೇಳೆ ಸಿಎಂ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರು ಹಾಗೂ ಗಯಾಳುಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಈ ಭೀಕರ ಅಪಘಾತ ನಡೆದಿದೆ. ಎರಡು ಆಟೋಗಳು ಮತ್ತು ಲಾರಿ ನಡುವೆ ಡಿಕ್ಕಿ ಅಪಘಾತ ಸಂಭವಿಸಿದ್ದು, ಒಂದು ಆಟೋ ಡಿಕ್ಕಿಯ ರಭಸಕ್ಕೆ ಹಲವು ಮೀಟರ್ ದೂರ ಹೋಗಿ ಬಿದ್ದಿದೆ. ಇನ್ನು ಈ ಟೋದಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ನಂತರ ಘಟನಾ ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಅಪಘಾತಕ್ಕೀಡಾದ ಎರಡು ಆಟೋಗಳ ಪೈಕಿ ಒಂದು ಬಳ್ಳಾರಿಯಿಂದ ಹೊಸಪೇಟೆಗೆ ಹೊರಟಿತ್ತು. ಈ ವೇಳೆ ಒಂದೇ ಆಟೋದಲ್ಲಿ 20 ಜನರಿದ್ದರು ಎನ್ನಲಾಗಿದೆ. ಈ ಇಪ್ಪತ್ತು ಜನರ ಪೈಕಿ ಶಾಶಮ್ಮ ಎಂಬ ಓರ್ವ ಮಹಿಳೆ ಮೃತಪಟ್ಟಿದ್ದು, ಮತ್ತೊಂದು ಆಟೋದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಇದೀಗ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಕೆಲವು ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಇಬ್ಬರು ತೀವ್ರವಾಗಿ ಗಾಯಗೊಂಡವರನ್ನು ಬಳ್ಳಾರಿಯ ವಿಮ್ಸ್ಗೆ ರವಾನಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications