ಹೊಸಪೇಟೆ-ಕೊಟ್ಟೂರು ನಡುವೆ ರೈಲು; ದಶಕಗಳ ಕನಸು ನನಸು
ಬಳ್ಳಾರಿ, ಸೆಪ್ಟೆಂಬರ್ 06 : ಹೊಸಪೇಟೆಯಿಂದ ಕೊಟ್ಟೂರಿಗೆ ಪ್ರಯಾಣಿಕರ ರೈಲು ಓಡಿಸಲು ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಸೆಪ್ಟೆಂಬರ್ 15 ರಿಂದ ಎರಡೂ ಪಟ್ಟಣಗಳ ನಡುವೆ ರೈಲು ಓಡಿಸಲು ಇಲಾಖೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ಸುಮಾರು 2 ದಶಕಗಳ ನಿರಂತರ ಹೋರಾಟಕ್ಕೆ ಈಗ ಫಲ ಸಿಕ್ಕಿದೆ. ಹರಿಹರ-ಕೊಟ್ಟೂರು ನಡುವೆ ಈಗಾಗಲೇ ಪ್ಯಾಸೆಂಜರ್ ರೈಲು ಸಂಚಾರ ನಡೆಸುತ್ತಿದೆ. ಈಗ ಹೊಸಪೇಟೆ ತನಕ ರೈಲು ಸೇವೆ ವಿಸ್ತರಣೆಯಾಗಲಿದ್ದು, ಜನರ ಬಹುದಿನ ಬೇಡಿಕೆಗೆ ಒಪ್ಪಿಗೆ ಸಿಕ್ಕಿದೆ.
ಪ್ರವಾಸಿಗರಿಗೆ ಸಿಹಿ ಸುದ್ದಿ; ದೂಧ್ ಸಾಗರದಲ್ಲಿ ರೈಲು ನಿಲ್ಲಲಿದೆ
1990ರಲ್ಲಿ ಹೊಸಪೇಟೆ-ಕೊಟ್ಟೂರು-ಸ್ವಾಮಿಹಳ್ಳ ನಡುವೆ ಮೀಟರ್ ಗೇಜ್ ಹಳಿ ಇತ್ತು. ಪ್ರಯಾಣಿಕ ಮತ್ತು ಸರಕು ಸಾಗಣೆ ರೈಲುಗಳು ಸಂಚಾರ ನಡೆಸುತ್ತಿದ್ದವು. 1995ರಲ್ಲಿ ಮಾರ್ಗವನ್ನು ಬ್ರಾಡ್ಗೇಜ್ ಆಗಿ ಪರಿವರ್ತನೆ ಮಾಡಲಾಯಿತು.
ಪ್ರೇಮಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಭಾರತೀಯ ರೈಲ್ವೆ!
ಸರಕು ಸಾಗಣೆ ರೈಲುಗಳ ಸಂಚಾರ ಮುಂದುವರೆಯಿತು. ಆದರೆ, ಪ್ರಯಾಣಿಕರ ರೈಲುಗಳ ಸಂಚಾರ ಸ್ಥಗಿತವಾಯಿತು. ಸ್ಥಳೀಯರು ಈ ಕುರಿತು ಸತತ ಹೋರಾಟವನ್ನು ಮಾಡುತ್ತಾ ಬಂದರು. ಈ ಹೋರಾಟಗಳಿಗೆ ಈಗ ಫಲ ಸಿಕ್ಕಿದ್ದು, ರೈಲು ಸೇವೆ ಆರಂಭವಾಗುತ್ತಿದೆ.
ಏರ್ ಪೋರ್ಟ್ನಂತೆ ಬದಲಾಗಲಿದೆ ಯಶವಂತಪುರ ರೈಲ್ವೆ ನಿಲ್ದಾಣ
ಹೊಸಪೇಟೆ-ಕೊಟ್ಟೂರು ರೈಲು ಹರಿಹರದ ತನಕ ಸಂಚಾರ ನಡೆಸಲಿದೆ. ಇದರಿಂದಾಗಿ ಶಿವಮೊಗ್ಗ, ಅರಸೀಕೆರೆ, ಹಾಸನ, ಮೈಸೂರು ಸೇರಿದಂತೆ ವಿವಿಧ ಪ್ರದೇಶಗಳಿಗೆ ಜನರು ಸಂಚಾರ ನಡೆಸಲು ಅನುಕೂಲವಾಗಲಿದೆ. ಸಮಯ ಮತ್ತು ಹಣ ಉಳಿತಾಯವಾಗಲಿದೆ.