ಅನಿಲ್ ಲಾಡ್ ಕಾರ್ಯಕ್ರಮದಲ್ಲಿ ಬಳೆ, ಸೀರೆಗೆ ಮುಗಿಬಿದ್ದ ಮಹಿಳೆಯರು
ಬಳ್ಳಾರಿ, ಮಾರ್ಚ್ 05: ಶಾಸಕ ಅನಿಲ್ ಲಾಡ್ ದಂಪತಿ ಆಯೋಜಿಸಿದ್ದ ಮಹಿಳೆಯರಿಗೆ 'ಉಡಿ ತುಂಬುವ' ಕಾರ್ಯಕ್ರಮ ಸಂಪೂರ್ಣ ಅಸ್ತವ್ಯಸ್ಥವಾಗಿ ಕೊಡಲೆಂದು ಇಟ್ಟಿದ್ದ ಉಡಿ ಕಾಣಿಕೆ ಪೊಟ್ಟಣಗಳನ್ನು ಮಹಿಳೆಯರು ತಾವೇ ಮನಸೋಇಚ್ಛೆ ಹೊತ್ತೊಯ್ದರು.
ಭಾನುವಾರ ಇಲ್ಲಿನ ವಾರ್ಡ್ಲಾ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ರವಿಕೆ, ಬಳೆ ಹಾಗೂ ಹಣ್ಣಿನ ಪೊಟ್ಟಣಗಳನ್ನು ತೆಗೆದುಕೊಳ್ಳಲು ಮುಗಿಬಿದ್ದುದರಿಂದ ಭಾರಿ ನೂಕು ನುಗ್ಗಲು ಉಂಟಾಗಿತ್ತು. ಕಾರ್ಯಕ್ರಮ ನಡೆಯುತ್ತಿರುವಾಗಲೇ ಉಡಿ ಪೊಟ್ಟಣಗಳಿಗೆ ಮುಗಿ ಬಿದ್ದ ಮಹಿಳೆಯರು ಕೈಗೆ ಸಿಕ್ಕಷ್ಟು ಪೊಟ್ಟಣಗಳನ್ನು ತೆಗೆದು ಕೊಂಡು ಹೋದರು.
ಒಂದೆಡೆ ವೇದಿಕೆ ಕಾರ್ಯಕ್ರಮ ಆಯೋಜಿತವಾಗಿತ್ತು, ಮತ್ತೊಂದೆಡೆ ಮಹಿಳೆಯರಿಗೆ ವಿತರಿಸಲೆಂದ ಉಡಿ ವಸ್ತುಗಳನ್ನು ಪೊಟ್ಟಣಗಳನ್ನಾಗಿ ಮಾಡಿ ಇಡಲಾಗಿತ್ತು. ಈ ವಿಷಯ ತಿಳಿದ ಮಹಿಳೆಯರು ಒಬ್ಬೊಬ್ಬರಾಗಿ ಉಡಿ ಪೊಟ್ಟಣ ಹಂಚಲು ಇಟ್ಟಿದ್ದ ಕಡೆಗೆ ಹೊರಟರು ನಂತರ ವಿಷಯ ತಿಳಿದು ಎಲ್ಲರೂ ಒಮ್ಮೆಲೆ ಮುಗಿಬಿದ್ದು ಉಡಿ ಪೊಟ್ಟಣಗಳನ್ನು ಹೊತ್ತುಕೊಂಡು ಹೋದರು. ಸಾವಿರಾರು ಸಂಖ್ಯೆಯಲ್ಲಿ ಇದ್ದ ಮಹಿಳೆಯರನ್ನು ಕಾರ್ಯಕರ್ತರು ಮತ್ತು ಪೊಲೀಸರು ನಿಯಂತ್ರಿಸಲಾಗಲಿಲ್ಲ.

ಈ ವೇಳೆ ಭಾರಿ ನೂಕಾಟ ತಳ್ಳಾಟ ಆದ ಕಾರಣ ಹಣ್ಣುಗಳು, ಬಳೆ, ಇನ್ನಿತರ ವಸ್ತುಗಳು ಚೆಲ್ಲಾಪಿಲ್ಲಾಗಿ ಬಿದ್ದಿದ್ದವು. ಹಲವರು ಹೆಚ್ಚು ಪೊಟ್ಟಣಗಳು ಹೊತ್ತೊಯ್ದರು ಕೆಲವರಿಗೆ ಏನು ಸಿಗಲಿಲ್ಲ, ಅವರು ಶಾಸಕರಿಗೆ ಹಿಡಿ ಶಾಪ ಹಾಕಿ ತೆರಳಿದರು. ಕಾರ್ಯಕ್ರಮಕ್ಕೆ ಬಂದವರಿಗಾಗಿ ಸಸ್ಯಾಹಾರ ಹಾಗೂ ಮಾಂಸಾಹಾರ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿಯೂ ಜನದಟ್ಟಣೆ ಕಂಡು ಬಂತು.

-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications