ನಾನು ಸಚಿವ ಸ್ಥಾನದ ಆಕಾಂಕ್ಷಿಯೇ ಅಲ್ಲ ಎಂದಿದ್ದೇಕೆ ಆನಂದ್ ಸಿಂಗ್?
ಬಳ್ಳಾರಿ, ಡಿಸೆಂಬರ್.25: ರಾಜ್ಯದಲ್ಲಿ ಉಪ ಚುನಾವಣೆ ಮುಗಿದು ಫಲಿತಾಂಶ ಬಂದಿದ್ದಾಗಿದೆ. ಬಿಜೆಪಿ ಸರ್ಕಾರವೂ ಸೇಫ್ ಆಗಿದೆ. ಕಾಂಗ್ರೆಸ್ ನಿಂದ ಬಿಜೆಪಿಗೆ ಆಗಮಿಸಿದ ಎಲ್ಲ ಶಾಸಕರಿಗೂ ಸಚಿವ ಸ್ಥಾನ ಪಕ್ಕಾ ಎಂದು ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಹೇಳಿದ್ದಾರೆ.
ಸಿಎಂ ಹೇಳಿಕೆ ಬಳಿಕವೂ ಇಲ್ಲೊಬ್ಬ ಶಾಸಕರು ತಾವು ಸಚಿವ ಸ್ಥಾನದ ಆಕಾಂಕ್ಷಿಯೇ ಅಲ್ಲ ಎಂದು ಹೇಳಿದ್ದಾರೆ. ನನಗೆ ಸಚಿವ ಸ್ಥಾನದ ಮೇಲೆ ಯಾವುದೇ ಆಸೆಯಿಲ್ಲ. ಇಂಥದ್ದೇ ಖಾತೆ, ಅಂಥದ್ದೆ ಖಾತೆ ನೀಡುವಂತೆ ಒತ್ತಾಯವನ್ನೂ ಮಾಡುವುದಿಲ್ಲ ಎಂದು ವಿಜಯನಗರ ಶಾಸಕ ಆನಂದ್ ಸಿಂಗ್ ತಿಳಿಸಿದ್ದಾರೆ.
ಹರಪನಹಳ್ಳಿಯಲ್ಲಿ ಮಾತನಾಡಿರುವ ಶಾಸಕ ಆನಂದ್ ಸಿಂಗ್ ತಮಗೆ ಯಾವುದೇ ಸಚಿವ ಸ್ಥಾನದ ಮೇಲೆ ಆಸೆಯಿಲ್ಲ ಎಂದು ಹೇಳಿದರು. ತಮ್ಮ ಕ್ಷೇತ್ರದ ಅಭಿವೃದ್ಧಿಯೊಂದೇ ನನ್ನ ಉದ್ದೇಶವಾಗಿದೆ. ಅದನ್ನು ಹೊರತುಪಡಿಸಿ ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜೀನಾಮೆ ಸಲ್ಲಿಸಲು ಕಾರಣಕೊಟ್ಟ ಶಾಸಕ:
ವಿಜಯನಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ನೆರವು ಸಿಕ್ಕರಷ್ಟೇ ಸಾಕು. ನನಗೆ ಮತ್ಯಾವ ಸಚಿವ ಸ್ಥಾನವೂ ಬೇಕಿಲ್ಲ ಎಂದು ಶಾಸಕ ಆನಂದ್ ಸಿಂಗ್ ಹೇಳಿದರು. ಈ ಹಿಂದಿನ ಮೈತ್ರಿ ಸರ್ಕಾರದಲ್ಲಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ನಾಯಕರು ತಲೆ ಕೆಡಿಸಿಕೊಳ್ಳಲಿಲ್ಲ. ಹೆಚ್.ಡಿ.ಕುಮಾರಸ್ವಾಮಿ ಸರ್ಕಾರ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸರಿಯಾದ ರೀತಿಯಲ್ಲಿ ಅನುದಾನವನ್ನು ನೀಡುತ್ತಿರಲಿಲ್ಲ. ಹೀಗಾಗಿ ನಾನು ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿದೆ ಎಂದು ಆನಂದ್ ಸಿಂಗ್ ಸ್ಪಷ್ಟನೆ ನೀಡಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications