"ಜಿಲ್ಲಾ ವಿಭಜನೆ ವಿಷಯಕ್ಕೆ ರಾಜೀನಾಮೆ ನೀಡಲೂ ನಾನು ಸಿದ್ಧ"
ಬಳ್ಳಾರಿ, ಡಿಸೆಂಬರ್ 03: ನೂತನ ವಿಜಯನಗರ ಜಿಲ್ಲೆ ಘೋಷಣೆ ವಿಚಾರವಾಗಿ ನನ್ನ ಕ್ಷೇತ್ರದ ಜನ ಇಷ್ಟಪಟ್ಟರೆ ರಾಜೀನಾಮೆ ನೀಡಲೂ ಸಿದ್ಧ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬಳ್ಳಾರಿಯಲ್ಲಿ ಗುರುವಾರ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ನನ್ನ ಕ್ಷೇತ್ರದ ಜನರು ಜಿಲ್ಲೆ ವಿಭಜನೆ ವಿಚಾರವಾಗಿ ನನಗೆ ರಾಜೀನಾಮೆ ನೀಡಿ ಅಂದರೆ ನಾನು ಈಗಲೇ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ. ಮುಂದೆ ಓದಿ...

"ದಿನವು ನನಗೆ ಫೋನ್ ಬರುತ್ತಿದೆ"
ಜಿಲ್ಲೆಯ ವಿಭಜನೆ ಮಾಡುವ ವಿಚಾರವಾಗಿ ನನಗೆ ಪಶ್ಚಿಮ ತಾಲೂಕುಗಳ ಜನರು ಫೋನ್ ಮಾಡಿ ಮಾತನಾಡಿದ್ದಾರೆ. ಯಾಕೆ ವಿಭಜನೆ ಮಾಡ್ತಾರೆ ಅಂತ ಗೋಳು ಹೇಳಿಕೊಂಡಿದ್ದಾರೆ. ಸಿಎಂ ಬಿಎಸ್ ವೈ ಯಡಿಯೂರಪ್ಪ ಇದ್ದಾರೆ. ನಿಮ್ಮದೇ, ಸರ್ಕಾರ ಇದೆ ಹಣ ತಂದು ಅಭಿವೃದ್ಧಿ ಮಾಡಬಹುದೆಂದು ಕೇಳುತ್ತಿದ್ದಾರೆ. ಇದಕ್ಕೆ ನಾನು ಏನೆಂದು ಉತ್ತರಿಸಲಿ ಎಂದಿದ್ದಾರೆ.

ಜಿಲ್ಲೆ ಒಡೆಯೋದು ಬೇಡ ಅಂತ ಮನವಿ
ಜಿಲ್ಲಾ ಕೇಂದ್ರದ ಕಚೇರಿಗಳು ಬೇಕಾದರೆ ಹೊಸಪೇಟೆಗೆ ಶಿಫ್ಟ್ ಆಗಲಿ, ಆದರೆ ಜಿಲ್ಲೆ ಒಡೆಯೋದು ಬೇಡ ಅಂತ ಮನವಿ ಮಾಡುವೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಬಳ್ಳಾರಿ ಜಿಲ್ಲೆಗೆ ಸೇರಿಸೋದು ಬೇಡ. ಈ ಬಗ್ಗೆ ನಾನು ಶ್ರೀರಾಮುಲು ಅವರ ಮನವೊಲಿಸುವೆ ಎಂದು ಹೇಳಿದ್ದಾರೆ.

ಮೊಳಕಾಲ್ಮೂರು ಸೇರಿಸದಿರಲು ಆಗ್ರಹ
ನಾಳೆ ನೆರೆಯ ಆಂಧ್ರ ಪ್ರದೇಶದ ನಾನಾ ತಾಲೂಕುಗಳು ಬರ್ತಾವೆ, ಚಳ್ಳಕೆರೆನೂ ಕೇಳ್ತಾರೆ. ಹಾಗೆ ಸೇರಿಸುತ್ತಾ ಹೋದರೆ 371 ಜೆ ಸೌಲಭ್ಯದಿಂದ ನಮ್ಮ ಭಾಗದ ಮಕ್ಕಳು ವಂಚಿತರಾಗ್ತಾರೆ. ಯಾವುದೇ ಕಾರಣಕ್ಕೂ ಮೊಳಕಾಲ್ಮೂರು ಬಳ್ಳಾರಿಗೆ ಸೇರಿಸೋದು ಬೇಡ ಎಂದು ಆಗ್ರಹಿಸಿದ್ದಾರೆ.

ಎಚ್ಚರಿಕೆ ಕೊಟ್ಟಿದ್ದ ಸೋಮಶೇಖರ್
ಗಣಿ ಜಿಲ್ಲೆಯ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸದೆ ನೂತನ ವಿಜಯನಗರ ಜಿಲ್ಲೆ ಘೋಷಣೆ ಮಾಡಿರುವುದಕ್ಕೆ ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ ಪರೋಕ್ಷವಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications