ಡಿಸಿಎಂ ಹುದ್ದೆ ಬದಲಿಗೆ ರಾಮುಲು ಮುಂದಿಟ್ಟರು ಪ್ರಮುಖ ಬೇಡಿಕೆ
ಬಳ್ಳಾರಿ, ಆಗಸ್ಟ್ 28: ಉಪಮುಖ್ಯಮಂತ್ರಿ ಸ್ಥಾನ ಸಿಗದೇ ಇದ್ದದ್ದಕ್ಕೆ ಬೇಸರವಿಲ್ಲ, ವಾಲ್ಮಿಕಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿ ಸಾಕು, ಅದಾದರೆ ಎಲ್ಲವೂ ದೊರೆತಂತೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಕೊಡಲಾಗುತ್ತದೆ ಎಂಬ ನಿರೀಕ್ಷೆ ಇತ್ತು, ಆದರೆ ಆ ಹುದ್ದೆ ಕೈತಪ್ಪಿದೆ. ರಾಮುಲು ಅವರ ಬೆಂಬಲಗಿರು ಈ ಕಾರಣದಿಂದಾಗಿ ಬಿಜೆಪಿ ನಾಯಕರ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. ಆದರೆ ರಾಮುಲು ಅವರು ನನಗೆ ಡಿಸಿಎಂ ಹುದ್ದೆ ಬೇಡ ಎಂದಿದ್ದಾರೆ.
ಬಲಿಷ್ಟ ಹೈಕಮಾಂಡ್ ಎದುರು ಮಂಡಿಯೂರಿದ ಬಿಜೆಪಿ ಅತೃಪ್ತರು
ನನಗೆ ಯಾವ ಹುದ್ದೆಯೂ ಬೇಡ, ನಾನು ಪ್ರತಿನಿಧಿಸುವ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 7.5% ಕ್ಕೆ ಹೆಚ್ಚಿಸಿದರೆ ಎಲ್ಲವೂ ಸಿಕ್ಕಂತೆ ಎಂದು ರಾಮುಲು ಇಂದು ಹೇಳಿದ್ದಾರೆ.
ಮೀಸಲಾತಿ ಹೆಚ್ಚಳ ಕುರಿತು ಈಗಾಗಲೇ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ. ಈ ವಿಚಾರದ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜಾರಕಿಹೊಳಿ, ಶಿವನಗೌಡ ಪಾಟೀಲ್, ರಾಜೂಗೌಡ ಎಲ್ಲರೂ ಒಂದಾಗಿದ್ದೇವೆ ಎಂದರು.
ಹೆಚ್ಚಿದ ಅಸಮಾಧಾನ: ಹೈಕಮಾಂಡ್ನಿಂದ ಬಂತು ಖಡಕ್ ಆದೇಶ
ಶ್ರೀರಾಮುಲು ಅವರಿಗೆ ಆರೋಗ್ಯ ಸಚಿವ ಸ್ಥಾನ ನೀಡಲಾಗಿದೆ. ಆದರೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಅಶ್ವಥ್ನಾರಾಯಣ, ಗೋವಿಂದ ಕಾರಜೋಳ, ಲಕ್ಷ್ಮಣ ಸವದಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ.