8ನೇ ಬಾರಿ 160 ಕೆ.ಜಿ ಗುಂಡು ಎತ್ತಿದ ಗೆದ್ದ ಜಗಜಟ್ಟಿ; ಹೌದು ಹುಲಿಯಾ ಎಂದ ಸಿ.ಟಿ ರವಿ
ಬಳ್ಳಾರಿ, ಜನವರಿ 11: ಹಂಪಿ ಉತ್ಸವ-2020ರ ಸಲುವಾಗಿ ಎರಡನೇ ದಿನವಾದ ಇಂದು ಮಲಪನಗುಡಿಯ ವಿದ್ಯಾರಣ್ಯ ಪೀಠದ ಹೈಸ್ಕೂಲ್ ಮೈದಾನದಲ್ಲಿ ಗುಂಡು ಎತ್ತುವ ಸ್ಪರ್ಧೆ ಆಯೋಜನೆಗೊಂಡಿತ್ತು. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲ್ಲೋಳಿ ಗ್ರಾಮದ ಇಬ್ರಾಹಿಂ ಮಕ್ಬುಲ್ ಸಾಬ್ ಅರಬ್ ಅವರು 160 ಕೆ.ಜಿ.ಭಾರದ ಕಲ್ಲನ್ನು ಎತ್ತಿ ಸತತ 8ನೇ ಬಾರಿಗೆ ಪ್ರಥಮ ಸ್ಥಾನ ಗಳಿಸಿದರು.
ಇಬ್ರಾಹಿಂ ಅವರು ಕಲ್ಲು ಎತ್ತುವ ಅಂಗಳಕ್ಕೆ ಬರುತ್ತಲೇ ಜನರು ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ಮೊಣಕಾಲಿನವರೆಗೆ ಕಲ್ಲು ಎತ್ತುತ್ತಿದ್ದಂತೆ ಹೌದೋ ಹುಲಿಯಾ ಹೌದೋ ಭೀಮ ಎಂದು ಕೂಗಿ ಸಚಿವ ಸಿಟಿ ರವಿ ಅವರು ಪ್ರೋತ್ಸಾಹ ನೀಡಿದರು. ಇದಾದ ಕೆಲವೇ ಸೆಕೆಂಡುಗಳಲ್ಲಿ ಬರೋಬ್ಬರಿ 160 ಕೆ.ಜಿ. ಭಾರದ ಕಲ್ಲು ಇಬ್ರಾಹಿಂ ಅವರ ಭುಜದ ಮೇಲೆ ಬಂದಿತ್ತು.

ಒಂದೇ ಒಂದು ಸಲವೂ ಕೆಳಗೆ ಒಗೆಯದೇ ಒಂದೇ ಪ್ರಯತ್ನದಲ್ಲಿ ಕಲ್ಲು ಎತ್ತಿದ ಇಬ್ರಾಹೀಂ ಮಕ್ಬುಲ್ ಸಾಬ್ ಸಾಹಸ ಕಂಡು ಜನರು ಚಪ್ಪಾಳೆ ತಟ್ಟಿದರು. ಆಧುನಿಕ ಭೀಮ ಖ್ಯಾತಿಗೆ ಭಾಜನವಾದರು. ಇಬ್ರಾಹೀಂ ಮಕ್ಬುಲ್ ಸಾಬ್ ವಯಸ್ಸು 29. ಕೃಷಿ ಕೆಲಸ ಮಾಡುತ್ತಿರುವ ಅವರಿಗೆ ಕ್ರೀಡಾ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಬಂದಿವೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications