ಹೊಸಪೇಟೆಯಲ್ಲಿ ಅಕ್ರಮವಾಗಿ ಇರಿಸಿದ್ದ ಅನ್ನಭಾಗ್ಯ ಅಕ್ಕಿ ವಶ
ಬಳ್ಳಾರಿ ಜಿಲ್ಲೆ ಹೊಸಪೇಟೆ ಪಟ್ಟಣದಲ್ಲಿ ಅಕ್ರಮ ಅಕ್ಕಿ ದಾಸ್ತಾನು ಗೋಡೌನ್ ಮೇಲೆ ದಾಳಿ. 100 ಕ್ವಿಂಟಾಲ್ ನಷ್ಟು ಅಕ್ರಮ ಅಕ್ಕಿ ದಾಸಾಸ್ತು ವಶಕ್ಕೆ. ಅನ್ನಭಾಗ್ಯ ಯೋಜನೆಗಾಗಿ ಮೀಸಲಿದ್ದ ಅಕ್ಕಿ.
ಹೊಸಪೇಟೆ, ಜೂನ್ 6: ನಗರದ ಸ್ವಾಗಿ ಮಾರುಕಟ್ಟೆಯಲ್ಲಿ ಅನ್ನಭಾಗ್ಯಕ್ಕೆ ಮೀಸಲಾಗಿರುವ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.
ಈ ದಾಳಿಯ ವೇಳೆ, ಸುಮಾರು 100 ಕ್ವಿಂಟಾಲ್ ನಷ್ಟು ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಬಳ್ಳಾರಿ ಜಿಲ್ಲೆಯ ಆಹಾರ ಇಲಾಖೆಯ ಉಪವಿಭಾಗಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿತ್ತು.[ಮಗ ಕಿರೀಟಿಗಾಗಿ ಜನಾರ್ದನ ರೆಡ್ಡಿ ಸಿನಿಮಾ ನಿರ್ಮಾಣ!]
ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರೂ ಕೂಡ ಈ ಪ್ರಕರಣದ ಬೆನ್ನು ಹತ್ತಿದ್ದಾರೆ. ಜಿಲ್ಲೆಯಲ್ಲಿ ಇಂಥ ಹಲವಾರು ಅಕ್ರಮಗಳು ಕೇಳಿಬಂದಿದ್ದು, ಅಂಥ ಪ್ರಕರಣಗಳನ್ನು ಅಧಿಕಾರಿಗಳು ಹಾಗೂ ಪೊಲೀಸರು ಪತ್ತೆ ಹಚ್ಚುವಲ್ಲಿ, ಸಂಘಟಿತ ದಾಳಿ ನಡೆಸಿ ಅಕ್ರಮ ಅಕ್ಕಿಯನ್ನು ವಶಪಡಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.[ಎಚ್ ಡಿಕೆ ವಿರುದ್ಧ ಸಾಕ್ಷ್ಯ ಮಂಗಳವಾರ ಸಲ್ಲಿಸಲಿದ್ದಾರೆ ಜನಾ ರೆಡ್ಡಿ]