ಆನಂದ್ ಸಿಂಗ್ಗೆ ಹೊಸ ಬೇಡಿಕೆ ಇಟ್ಟ ಕಂಪ್ಲಿಯ ಜನರು
ಬಳ್ಳಾರಿ, ನವೆಂಬರ್ 30 : ಕರ್ನಾಟಕ ಸರ್ಕಾರ ಹೊಸಪೇಟೆಯ ವಿಜಯನಗರವನ್ನು ನೂತನ ಜಿಲ್ಲೆಯಾಗಿ ರಚನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಸರ್ಕಾರದ ತೀರ್ಮಾನದ ಬಗ್ಗೆ ಪರ, ವಿರೋಧ ಚರ್ಚೆ ನಡೆಯುತ್ತಿದೆ.
ಆರು ತಾಲೂಕುಗಳನ್ನು ಸೇರಿಸಿ ವಿಜಯನಗರ ಜಿಲ್ಲೆ ರಚನೆ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ಕೊಟ್ಟಿದೆ. ಆದರೆ, ಕಂಪ್ಲಿ ತಾಲೂಕಿನ ಜನರು ಸಚಿವ ಆನಂದ್ ಸಿಂಗ್ ಮುಂದೆ ಹೊಸ ಬೇಡಿಕೆ ಇಟ್ಟಿದ್ದಾರೆ. ಕಂಪ್ಲಿಯನ್ನು ಬಳ್ಳಾರಿಯಿಂದ ವಿಜಯನಗರಕ್ಕೆ ಸೇರಿಸಿ ಎಂದು ಒತ್ತಾಯಿಸಿದ್ದಾರೆ.
ಕಂಪ್ಲಿ ತಾಲೂಕು ಹೋರಾಟ ಸಮಿತಿ, ವಿವಿಧ ಸಂಘಟನೆಗಳು ಕಂಪ್ಲಿಯನ್ನು ವಿಜಯನಗರಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಸೋಮವಾರ ಕಂಪ್ಲಿ ಬಂದ್ಗೆ ಕರೆ ನೀಡಿವೆ. ಮತ್ತೊಂದು ಕಡೆ ಬಳ್ಳಾರಿ ಜಿಲ್ಲಾ ವಿಭಜನೆ ಖಂಡಿಸಿ ಪ್ರತಿಭಟನೆಗಳು ನಡೆಯುತ್ತಿವೆ.

ಸಚಿವ ಆನಂದ್ ಸಿಂಗ್ ಈ ಕುರಿತು ಮಾತನಾಡಿದ್ದಾರೆ. "ಎಲ್ಲರ ಅಭಿಪ್ರಾಯ ಪಡೆದು ಜಿಲ್ಲಾ ವಿಭಜನೆ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಕೆಲವೇ ದಿನಗಳಲ್ಲಿ ಆಕ್ಷೇಪಣೆಗಳನ್ನು ಸಲ್ಲಿಕೆಗೆ ಪ್ರಕಟಣೆ ಹೊರಡಿಸಲಾಗುತ್ತದೆ. ಆಗ ವಿಭಜನೆ ವಿರೋಧಿಗಳು ಸೇರಿದಂತೆ ಎಲ್ಲರೂ ಆಕ್ಷೇಪಣೆ ಸಲ್ಲಿಸಬಹುದು" ಎಂದರು.
ಬಳ್ಳಾರಿ ಜಿಲ್ಲೆ; ಕಂಪ್ಲಿ, ಕುರುಗೋಡು, ಸಂಡೂರು, ಸಿರಗುಪ್ಪ, ಬಳ್ಳಾರಿ ತಾಲೂಕುಗಳು ಬಳ್ಳಾರಿ ಜಿಲ್ಲೆಯಲ್ಲಿ ಉಳಿದಿವೆ. ಕಂಪ್ಲಿಯ ಜನರು ವಿಜಯನ ನಗರ ಜಿಲ್ಲೆಗೆ ನಮ್ಮನ್ನು ಸೇರಿಸಿ ಎಂದು ಹೋರಾಟ ನಡೆಸುತ್ತಿದ್ದಾರೆ. ಸೋಮವಾರ ಕಂಪ್ಲಿ ಬಂದ್ ಕರೆ ನೀಡಿದ್ದಾರೆ.
ವಿಜಯನಗರ ಜಿಲ್ಲೆ; ಹೊಸಪೇಟೆ, ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು ಮತ್ತು ಕೂಡ್ಲಗಿ ತಾಲೂಕುಗಳನ್ನು ಹೊಸದಾಗಿ ರಚನೆಯಾಗುವ ವಿಜಯನಗರ ಜಿಲ್ಲೆಗೆ ಸೇರಿಸಲು ಸರ್ಕಾರ ಒಪ್ಪಿಗೆ ಕೊಟ್ಟಿದೆ.
ಬಳ್ಳಾರಿ ಜಿಲ್ಲೆ ವಿಭಜನೆ ತೀರ್ಮಾನಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಜಿಲ್ಲಾ ವಿಭಜನೆ ಖಂಡಿಸಿ ಭಾನುವಾರ ಸಚಿವ ಆನಂದ್ ಸಿಂಗ್ಗೆ ಘೇರಾವ್ ಹಾಕಲು ಪ್ರಯತ್ನ ನಡೆಸಿದ್ದ ಕರ್ನಾಟಕ ಜನಸೈನ್ಯ ಸಂಘಟನೆಯ ಸದಸ್ಯರನ್ನು ಪೊಲೀಸರು ಬಂಧಿಸಿದ್ದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications