ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿ ಲೋಕಸಭೆ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಜೆ ಶಾಂತಾ, ಉಗ್ರಪ್ಪ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ. ಅಕ್ಟೋಬರ್.16: ಬಳ್ಳಾರಿ ಲೋಕಸಭೆ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿ ಜೆ. ಶಾಂತಾ ಇಂದು (ಅಕ್ಟೋಬರ್ 16) ಮಂಗಳವಾರ ನಾಮಪತ್ರ ಸಲ್ಲಿಸಿದರು. ಜೆ ಶಾಂತಾ ಅವರಿಗೆ ಸಹೋದರ ಶ್ರೀ ರಾಮುಲು ಸಾಥ್ ನೀಡಿದರು.

ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಜೆ. ಶಾಂತಾ, ನಮ್ಮ ಪಕ್ಷದ ಸರ್ವಾನುಮತದ ಅಭ್ಯರ್ಥಿ ಆಗಿ ನನ್ನನ್ನು ಆಯ್ಕೆ ಮಾಡಿದ್ದಾರೆ. ನನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ನಾಯಕರಿಗೆ ಋಣಿಯಾಗಿದ್ದೇನೆ. ರಾಜ್ಯದ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದರು.

ಉಪ ಚುನಾವಣೆ 2018 : ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?ಉಪ ಚುನಾವಣೆ 2018 : ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?

ಜೆ ಶಾಂತಾ ನಾಮಪತ್ರ ಸಲ್ಲಿಕೆ ನಂತರ ಲೋಕಸಭೆ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಗ್ರಪ್ಪ ನಾಮಪತ್ರ ಸಲ್ಲಿಸಿದರು. ಇವರಿಗೆ ಶಾಸಕರುಗಳಾದ ಭೀಮಾನಾಯ್ಕ, ಬಿ ನಾಗೇಂದ್ರ, ತುಕಾರಾಮ್, ಸಚಿವ ಡಿಕೆ ಶಿವಕುಮಾರ್, ಗುಂಡೂರಾವ್ ಸಾಥ್ ನೀಡಿದರು.

J shantha, Ugrappa filed the nomination Today

ಬಳ್ಳಾರಿ ಲೋಕಸಭೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಜೆ. ಶಾಂತಾ ನಾಮಪತ್ರ ಸಲ್ಲಿಕೆಬಳ್ಳಾರಿ ಲೋಕಸಭೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಜೆ. ಶಾಂತಾ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಕೆಲಕಾಲ ನೂಕು ನುಗ್ಗಲು ಉಂಟಾಯಿತು. ಡಿಸಿ ಕಚೇರಿಯ ಗೇಟ್ ನೂಕಿ ಒಂದೇ ಸಮಯಕ್ಕೆ ಒಳನುಗ್ಗಲು ಕೈ ಕಾರ್ಯಕರ್ತರು ಪ್ರಯತ್ನಿಸಿದ್ದು ಕಂಡುಬಂದಿತು.

J shantha, Ugrappa filed the nomination Today

ಇದೇ ವೇಳೆ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಯಿತು.

English summary
BJP candidate J shantha filed the nomination for Bellary Lok Sabha by election scheduled on November 3. As well as Congress candidate Ugrappa also filed the nomination today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X