ರೆಡ್ಡಿ ಸಹೋದರರು ನನ್ನ ಮೇಲೆ ಗೂಂಡಾಗಳನ್ನು ಬಿಟ್ಟಿದ್ದರು: ಸಿದ್ದರಾಮಯ್ಯ
Recommended Video

ಬೆಂಗಳೂರು, ಅಕ್ಟೋಬರ್ 23: ಬಳ್ಳಾರಿಯಲ್ಲಿ ಲೋಕಸಭೆ ಉಪಚುನಾವಣೆ ಪ್ರಚಾರದಲ್ಲಿರುವ ಸಿದ್ದರಾಮಯ್ಯ ಪ್ರಚಾರ ಸಮಯದಲ್ಲಿ ಸ್ವಾರಸ್ಯಕರವಾದ ಹಳೆಯ ಘಟನೆ ಒಂದನ್ನು ನೆನಪಿಸಿಕೊಂಡಿದ್ದಾರೆ.
ಸಿದ್ದರಾಮಯ್ಯ ಅವರು ವಿರೋಧಪಕ್ಷದಲ್ಲಿದ್ದಾಗ ಬಳ್ಳಾರಿಗೆ ಪಾದಯಾತ್ರೆ ಬಂದ ಘಟನೆಯನ್ನು ರಾಜಕೀಯದ ಬಗ್ಗೆ ಆಸಕ್ತಿ ಉಳ್ಳ ಯಾರೂ ಸಹ ಮರೆಯುವಂತಿಲ್ಲ ಅದೇ ಸಂದರ್ಭದ ಘಟನೆ ಒಂದನ್ನು ಇಂದು ಪ್ರಚಾರ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕರಾಗಿದ್ದಾಗ ಒಮ್ಮೆ ಸಂಡೂರಿಗೆ ಬಂದಾಗ ನನ್ನ ಮೇಲೆ ಗೂಂಡಾಗಳನ್ನು ಜನಾರ್ಧನ ರೆಡ್ಡಿ ಗುಂಪು ತಮ್ಮ ರೌಡಿಗಳನ್ನು ನಮ್ಮ ಮೇಲೆ ಛೂ ಬಿಟ್ಟಿದ್ದರು, ಹೆದರಿಕೆಗೆ ಪೊಲೀಸರು ಸಹ ನಮ್ಮೊಂದಿಗೆ ಬಂದಿರಲಿಲ್ಲ ಎಂದು ಸಿದ್ದರಾಮಯ್ಯ ನೆನಪಿಸಿಕೊಂಡರು.

ಸಂಡೂರಿನ ಜನ ಜೀವ ಭಯದಲ್ಲಿದ್ದರು
ಅಂದು ನಾನು ಬಳ್ಳಾರಿಗೆ ಬಂದಾಗ ಸಮಾವೇಶ ಮಾಡಲು ಸಹ ಜಾಗ ಕೊಡಲು ಸಿದ್ದವಿರಲಿಲ್ಲ, ಸಂಡೂರಿನ ಜನ ಜೀವಭಯದಲ್ಲಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರೆಡ್ಡಿ ಮತ್ತು ಶ್ರೀರಾಮುಲು ಜನರನ್ನು ಹೆದರಿಸಿ ರಾಜಕೀಯ ಮಾಡಿದ್ದಾರೆ ಎಂದು ಅವರು ಹೇಳಿದರು.

ರಾಮುಲುಗೆ 371ಜೆ ಎಂದರೇನು ಗೊತ್ತಿಲ್ಲ
ಶ್ರೀರಾಮುಲು 371ಜೆ ಎಂದರೆ ಏನು ಎಂಬುದು ಗೊತ್ತಿಲ್ಲ. ಆದರೆ ಅವರಿಗೆ ಅಪರಾಧ ಕಾಯ್ದೆಗಳ ಮಾತ್ರ ಚೆನ್ನಾಗಿ ಅರಿವಿದೆ ಎಂದು ಸಿದ್ದರಾಮಯ್ಯ ಅವರು ರಾಮುಲು ಕಾಲೆಳೆದರು. ಟ್ವಿಟ್ಟರ್ ಖಾತೆಯಲ್ಲಿ ಸಹ ಅವರು ಇದನ್ನು ಪ್ರಕಟಿಸಿದ್ದಾರೆ.

ನನ್ನನ್ನು ಬೈದರೆ ಕುರುಬ ಸಮುದಾಯವನ್ನು ಬೈದಂತಾ?
ಶ್ರೀರಾಮುಲುಗೆ ಬೈದರೆ ನಾಯಕ ಸಮುದಾಯಕ್ಕೆ ಬೈದರು ಎನ್ನುತ್ತಾರೆ ಹಾಗಾದರೆ ನನ್ನ ಟೀಕಿಸಿದರೆ ಕುರುಬ ಸಮುದಾಯವನ್ನು ಟೀಕಿಸಿದಂತೆ ಆಗುತ್ತದೆಯೇ ಎಂದ ಸಿದ್ದರಾಮಯ್ಯ, ವ್ಯಕ್ತಿಯೊಬ್ಬನನ್ನು ಸಮುದಾಯಕ್ಕೆ ಹೋಲಿಸುವುದು ತರವಲ್ಲ ಎಂದರು. ಅಷ್ಟೆ ಅಲ್ಲದೆ ನಾಯಕ ಸಮುದಾಯಕ್ಕೆ ರಾಮುಲು ಕೊಡುಗೆ ಏನು ಎಂದು ಅವರು ಪ್ರಶ್ನೆ ಮಾಡಿದರು.

ಡಿ.ಕೆ.ಶಿವಕುಮಾರ್ vs ಶ್ರೀರಾಮುಲು
ಬಳ್ಳಾರಿ ಲೋಕಸಭೆ ಉಪಚುನಾವಣೆ ಕಣ ದಿನೇ ದಿನೇ ರಂಗೇರುತ್ತಿದೆ. ಕಾಂಗ್ರೆಸ್ನಿಂದ ವಿಎಸ್ ಉಗ್ರಪ್ಪ ಚುನಾವಣೆಗೆ ನಿಂತಿದ್ದರೆ. ಬಿಜೆಪಿಯಿಂದ ಶ್ರೀರಾಮುಲು ಅವರ ಸಹೋದರಿ ಶಾಂತಾ ಅವರು ಚುನಾವಣೆಗೆ ನಿಂತಿದ್ದಾರೆ. ಬಳ್ಳಾರಿ ಉಪಚುನಾವಣೆ ಡಿ.ಕೆ.ಶಿವಕುಮಾರ್ ಮತ್ತು ಶ್ರೀರಾಮುಲು ನಡುವಿನ ಸ್ಪರ್ಧೆ ಎಂಬಂತೆ ಭಾರಿ ಕುತೂಹಲ ಕೆರಳಿಸಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications