ರೆಡ್ಡಿಯನ್ನು ಕೆಣಕಿದ ಲಾಡ್ ಗೆ ಬಳ್ಳಾರಿ ಬಿಜೆಪಿ ತಿರುಗೇಟು
ಬಳ್ಳಾರಿ, ನವೆಂಬರ್ 17: ಮಾಜಿ ಸಚಿವ ಜನಾರ್ದನ ರೆಡ್ಡಿ ತಮ್ಮ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಿದ ವಿಚಾರವನ್ನು ಟೀಕಿಸಿದ್ದ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ವಿರುದ್ಧ ಬಿಜೆಪಿಯ ಬಳ್ಳಾರಿ ಜಿಲ್ಲಾ ಘಟಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕಪ್ಪು ಹಣದ ಬಗ್ಗೆ ಮಾತನಾಡುವ ಬಿಜೆಪಿಯವರು ಜನಾರ್ದನ ರೆಡ್ಡಿಯವರ ವಿಚಾರದಲ್ಲಿ ಮೌನ ವಹಿಸಿರುವುದು ಏಕೆ ಎಂದು ಲಾಡ್ ಪ್ರಶ್ನಿಸಿದ್ದರು.
ಬ್ರಹ್ಮಿಣಿ ಸ್ಟೀಲ್ಸ್ ಘಟಕಕ್ಕೆ ಮಂಜೂರಾಗಿದ್ದ ಭೂಮಿ ಏನಾಯಿತು, ಕೆಐಎಡಿಬಿಯಿಂದ ಮಂಜೂರು ಮಾಡಿಸಿಕೊಂಡಿದ್ದ ಜಾಗದ ಕಥೆ ಏನು ಎಂಬುದು ಸೇರಿದಂತೆ ವಿವಿಧ ಪ್ರಶ್ನೆಗಳನ್ನು ಲಾಡ್ ಕೇಳಿದ್ದರು.[ಹೊಗಳಿಕೆ ಟೀಕೆ ಅಪಹಾಸ್ಯಕ್ಕೀಡಾದ ರೆಡ್ಡಿ ಮಗಳ ಮದುವೆ!]
ಇದೇ ವಿಚಾರವಾಗಿ ಲಾಡ್ ಗೆ ಉತ್ತರ ಎಂಬಂತೆ ಪತ್ರಿಕಾ ಪ್ರಕಟಣೆ ನೀಡಿರುವ ಬಿಜೆಪಿ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಗುರುಲಿಂಗನಗೌಡ, ಅನಿಲ್ ಲಾಡ್ ಅವರನ್ನೇ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಕೋಟಿ-ಕೋಟಿ ಹಣ ಖರ್ಚು ಮಾಡಿ, ಜನ್ಮದಿನ ಅಚರಣೆಗೆ ಸಿನಿಮಾ ತಾರೆಯರನ್ನು ಕರೆಸುವವರು ಯಾರು? ಟೆನಿಸ್ ತಾರೆಯೊಬ್ಬರ ಜತೆಗೆ ಅರ್ಧ ಗಂಟೆ ಟೆನಿಸ್ ಆಡುವುದಕ್ಕೆ ಲಕ್ಷಾಂತರ ರುಪಾಯಿ ಕೊಟ್ಟವರು ಯಾರು ಎಂದು ನಾಡಿನ ಜನರಿಗೆ ಗೊತ್ತಿದೆ.

ಜನಾರ್ದನ ರೆಡ್ಡಿ ಅವರ ಮಗಳ ಹೇಳಿಕೆ ವಿಚಾರವಾಗಿ ಲಾಡ್ ನೀಡಿದ ಹೇಳಿಕೆ ಸತ್ಯಕ್ಕೆ ದೂರವಾದದ್ದು. ಸಾಂಪ್ರದಾಯಿಕವಾಗಿ ನಡೆದ ಮದುವೆಯಲ್ಲಿ ಕಲೆ, ವಿನ್ಯಾಸವನ್ನು ಕಂಡು ಜನರು ಸಂಭ್ರಮಿಸಿದ್ದಾರೆ. ಪಕ್ಷ ಭೇದ ಮರೆತು ಗಣ್ಯರು ಭಾಗವಹಿಸಿ ಆಶೀರ್ವಾದ ಮಾಡಿದ್ದಾರೆ ಎಂದು ಸಮರ್ಥನೆ ನೀಡಲಾಗಿದೆ.[ಗಾಲಿ ರೆಡ್ಡಿ ಮಗಳ ಮದ್ವೆಗೆ ಪರಂ ಎಂಟ್ರಿ, ಪೊಲೀಸರು ಗರಂ]
ಜನಾರ್ದನ ರೆಡ್ಡಿಯವರು ಹದಿನೇಳು ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನಲವತ್ತು ಸಾವಿರಕ್ಕೂ ಹೆಚ್ಚು ಮಂದಿಗೆ ಕಂಕಣ ಭಾಗ್ಯ ದೊರೆತಿದೆ. ತಮ್ಮ ಜನ್ಮದಿನದಂದು ಅನಾಥಾಶ್ರಮಗಳಿಗೆ, ವೃದ್ಧಾಶ್ರಮಗಳಿಗೆ ಸಹಾಯ ಮಾಡುವ ಜನಾರ್ದನ ರೆಡ್ಡಿಯವರ ಬಗ್ಗೆ ಅನಿಲ್ ಲಾಡ್ ಅವರಿಗೆ ಮಾತನಾಡುವ ನೈತಿಕವಾದ ಹಕ್ಕಿಲ್ಲ ಎನ್ನಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications