Jowar: ಏಪ್ರಿಲ್ 1ರಿಂದ ಬೆಂಬಲ ಬೆಲೆ ಸಹಿತ 'ಜೋಳ' ಖರೀದಿ: ಸರ್ಕಾರ
ಬಳ್ಳಾರಿ, ಮಾರ್ಚ್ 31: ರಾಜ್ಯ ಸರ್ಕಾರ ಬಿಳಿ ಜೋಳ ಬೆಳೆಗೆ ಬೆಂಬಲ ಬೆಲೆ ಘೋಷಿಸಿ ರೈತರಿಗೆ ಸಿಹಿ ಸುದ್ದಿ ನೀಡಿತ್ತು. ಇದೀಗ ನಾಳೆ ಸೋಮವಾರ ಏಪ್ರಿಲ್ 1 ಬಿಳಿ ಜೋಳ ಖರೀದಿ ಶುರುವಾಗುತ್ತಿದೆ. ಒಟ್ಟು ಒಂದು ಲಕ್ಷ ಮೆಟ್ರಿಕ್ ಟನ್ ನಷ್ಟು ಜೋಳ ಖರೀದಿಗೆ ಸರ್ಕಾರ ತಿರ್ಮಾನಿಸಿದೆ.
ರೈತರಿಂದ ನೇರವಾಗಿ ಎಫ್ಎಕ್ಯೂ ಗುಣಮಟ್ಟದ ಬಿಳಿ ಜೋಳವನ್ನು ಖರೀದಿಯನ್ನು ಸೋಮವಾರದಿಂದ ಆರಂಭಿಸಲಾಗುತ್ತಿದೆ. 2023-2024ರಲ್ಲಿ ಬೆಳೆದ ಜೋಳ ಬೆಳೆ ಇದಾಗಿದೆ. ರೈತರ ಇದರ ಸದುಪಯೋಗ ಮಾಡಿಕೊಳ್ಳುವಂತೆ ಬಳ್ಳಾರಿ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಜೋಳ ಖರೀದಿ ಬೆಲೆಯ ವಿವರ
ಸರ್ಕಾರ ಖರೀದಿ ಪ್ರಕ್ರಿಯೆ ಆರಂಭಿಸಿದೆ. ನೋಂದಣಿ ಮತ್ತು ಜೋಳ ಖರೀದಿ ಪ್ರಯೋಜನ ಪಡೆಯಬೇಕಿದೆ. ಸರ್ಕಾರ ಪ್ರತಿ ಕ್ವಿಂಟಾಲ್ ಮಾಲ್ದಂಡಿ ಬಿಳಿ ಜೋಳಕ್ಕೆ ಒಟ್ಟು 3,225 ಹಾಗೂ ಹೈಬ್ರಿಡ್ ಜೋಳಕ್ಕೆ 3,180 ರೂಪಾಯಿ ನಿಗದಿ ಮಾಡಿದೆ. ಜಿಲ್ಲೆಯಲ್ಲಿ ರೈತರಿಂದ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಇವರು ಏಪ್ರಿಲ್ 30ರವರೆಗೆ ಒಂದು ತಿಂಗಳು ಪೂರ್ತಿ ಜೋಳ ಖರೀದಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಮಾಹಿತಿಗೆ ರೈತರು ಖರೀದಿ ಕೇಂದ್ರಕ್ಕೆ ಸಂಪರ್ಕಿಸಿ
ಜಿಲ್ಲೆಯಲ್ಲಿ ರೈತರ ಜೋಳ ಖರೀದಿಗೆಂದೇ ಈಗಾಗಲೇ ಖರೀದಿ ಕೇಂದ್ರ ತೆರೆದಿದ್ದೇವೆ. ಈ ಕುರಿತು ಬಳ್ಳಾರಿ ತಾಲ್ಲೂಕಿನ ಕರ್ನಾಟಕ ರಾಜ್ಯ ಉಗ್ರಾಣ ನಿಗಮ (ಬಳ್ಳಾರಿ ಘಟಕ- ಮೊ.9900677875) ಹಾಗೂ ಕಂಪ್ಲಿಯ ಕರ್ನಾಟಕ ರಾಜ್ಯ ಉಗ್ರಾಣ ನಿಗಮ (ಮೊ. 9740838910) ಅನ್ನು ಹಾಗೂ ನಿಮ್ಮ ಹತ್ತಿರ ಖರೀದಿ ಕೇಂದ್ರವನ್ನು ರೈತರು ಕೂಡಲೇ ಸಂಪರ್ಕಿಸಬೇಕು. ಜೋಳ ಮಾರಾಟ, ಖರೀದಿ ಕುರಿತು ಹೆಚ್ಚು ಮಾಹಿತಿ ಪಡೆಯಬೇಕು ಎಂದು ಹೇಳಿದರು.

ಸರ್ಕಾರ ಎಫ್ಎಕ್ಯೂ ಗುಣಮಟ್ಟದ ಬಿಳಿ ಖರೀದಿಗೆ ಕೆಲವು ಷರತ್ತು ವಿಧಿಸಿದೆ. ಹೀಗಾಗಿ ರೈತರು ತಾವೇ ಸ್ವಯಂ ಆಗಿ ಖರೀದಿ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯಗೊಳಿಸಲಾಗಿದೆ. ಜೊತೆಗೆ ರೈತರ ಪ್ರತಿ ಎಕರೆಗೆ 20 ಕ್ವಿಂಟಾಲ್ನಂತೆ ರೈತನ ಜಮೀನಿಗೆ ತಕ್ಕಹಾಗೇ ಜೋಳ ಖರೀಸುವಂತೆ ಸರ್ಕಾರ ಸೂಚನೆ ನೀಡಿದೆ.
ಗುಣಮಟ್ಟ ಪರಿಶೀಲಿಸಿ ಖರೀದಿ
ಇನ್ನೂ ಜೋಳ ಖರೀದಿ ವೇಳೆ ನಿಯೋಜಿತ ಕೃಷಿ ಇಲಾಖೆ ಗುಣಮಟ್ಟ ಪರಿವೀಕ್ಷಕರು ಪರಿಶೀಲಿಸುತ್ತಾರೆ. ಬಳಿಕವೇ ಜೋಳ ಖರೀದಿ ಆಗಲಿದೆ. ರೈತರು ಸಾಗಾಣೆ ವೆಚ್ಚ ಭರಿಸಬೇಕು. ಇಲ್ಲಿ ನೀಡಿದ ಜೋಳಕ್ಕೆ ಪ್ರತಿಯಾಗಿ ಖರೀದಿ ಹಣವನ್ನು ಸರ್ಕಾರ ಆಯಾ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಹಿಂಗಾರು ಕೈಕೊಟ್ಟ ಸಂದರ್ಭದಲ್ಲಿ ಅಲ್ಪ ಸ್ವಲ್ಪ ಜೋಳ ಬೆಳೆದ ರೈತರು ದಿಢೀರನೇ ಬೆಲೆ ಇಳಿಕೆಯಿಂದ ಕಂಗಾಲಾಗಿದ್ದರು. ಈ ಮಧ್ಯೆ ಸರ್ಕಾರ ಬೆಂಬಲ ಬೆಲೆ ಘೋಷಿಸಿ, ಅದರಂತೆ ರೈತರಿಂದ ಇಂತಿಷ್ಟು ಕ್ವಿಂಟಾಲ್ ಜೋಳ ಖರೀದಿ ಮಾಡಲು ಆರಂಭಿಸಿದೆ. ಇದರಿಂದ ಆಯಾ ಜಿಲ್ಲೆಯ ಜೋಳ ಬೆಳೆಗಾರರಿಗೆ ಅನುಕೂಲವಾಗಲಿದೆ.
ಜೋಳ ಕೊಯ್ಲು ಮಾಡಿ ಮಾರಾಟಕ್ಕೆ ಕಾಯುತ್ತಿರುವವರಿಗೆ ಬಳ್ಳಾರಿ ಜಿಲ್ಲಾಧಿಕಾರಿ ಖುಷಿ ಸುದ್ದಿ ನೀಡಿದ್ದಾರೆ. ರೈತರು ಚೀಲ ತುಂಬುವುದು, ಸಾಗಾಣೆ ಕಾರ್ಯದಲ್ಲಿ ತೊಡಗಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications