ಶಾಸಕ ಗಣೇಶ್ ಪಶ್ಚಾತ್ತಾಪ, ಆನಂದ್ ಸಿಂಗ್ ಬಳಿ ಕ್ಷಮೆ ಯಾಚನೆ
ಬಳ್ಳಾರಿ, ಏಪ್ರಿಲ್ 27: ಶಾಸಕ ಆನಂದ್ ಸಿಂಗ್ ಅವರ ಕಣ್ಣು ಊದಿ ವಿಕಾರವಾಗುವಂತೆ ಹೊಡೆದಿದ್ದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರಿಗೆ ಜೈಲುವಾಸದ ಬಳಿಕ ತಪ್ಪಿನ ಅರಿವಾದಂತಿದೆ. ಇಂದು ಅವರು ಆನಂದ್ ಸಿಂಗ್ ಅವರ ಬಳಿ ಕ್ಷಮಾಪಣೆ ಕೋರಿದ್ದಾರೆ.
ಬಳ್ಳಾರಿ ಹೊಸಪೇಟೆಯ ಕೃಷ್ಣ ದೇವಾಲಯದಲ್ಲಿ ಶಾಸಕ ಆನಂದ್ ಸಿಂಗ್ ಅವರನ್ನು ಭೇಟಿಯಾಗಿದ್ದ ಕಂಪ್ಲಿ ಶಾಸಕ ಗಣೇಶ್ ಅವರು ಅವರ ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ. ಅಲ್ಲದೆ ಸ್ಥಳದಲ್ಲಿ ಹಾಜರಿದ್ದ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ ಅವರ ಬಳಿಯೂ ಕ್ಷಮೆಗೆ ಯಾಚಿಸಿದ್ದಾರೆ.
ಪೂರ್ವ ನಿರ್ಧಾರದಂತೆ ಗಣೇಶ್ ಅವರು ಕೃಷ್ಣ ದೇವಾಲಯಕ್ಕೆ ಇಂದು ಮಧ್ಯಾಹ್ನದ ವೇಳೆಗೆ ಹೋಗಿದ್ದರು, ಆನಂದ್ ಸಿಂಗ್ ಅವರು ತಮ್ಮ ತಂದೆಯೊಂದಿಗೆ ದೇವಸ್ಥಾನಕ್ಕೆ ಬಂದಿದ್ದರು, ಅಲ್ಲಿ ಪ್ರಥ್ವಿರಾಜ್ ಸಿಂಗ್ ಅವರ ಕಾಲಿಗೆ ನಮಸ್ಕರಿಸಿದ ಗಣೇಶ್ ಅವರು ಆ ನಂತರ ತಂದೆ ಮಗನ ಬಳಿ ಕ್ಷಮೆ ಕೇಳಿದ್ದಾರೆ.
ಆಕಸ್ಮಿಕವಾಗಿ ತಪ್ಪು ನಡೆದಿದೆ, ಮನ್ನಿಸಿ, ಮತ್ತೆ ಎಂದೂ ಹೀಗಾಗದು ಎಂದು ಗಣೇಶ್ ಅವರು ದೀನರಾಗಿ ಕೇಳಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಗಣೇಶ್ ಅವರು ಜೈಲಿನಿಂದ ಬಿಡುಗಡೆ ಆದ ಬಳಿಕ ಸಹ ಇದೇ ರೀತಿಯ ಸೌಮ್ಯ ಹೇಳಿಕೆಗಳನ್ನೇ ನೀಡುತ್ತಿದ್ದರು, ಅವರಿಗೂ ಸಹ ತಮ್ಮ ತಪ್ಪಿನ ಅರಿವಾಗಿದೆ ಎಂದು ಭಾಸವಾಗುತ್ತಿತ್ತು.

ಈಗಲ್ಟನ್ ರೆಸಾರ್ಟ್ನಲ್ಲಿ ನಡೆದಿದ್ದ ಹಲ್ಲೆ
ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಜನವರಿ 19 ರಂದು ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ಮಾಡಿದ್ದರು, ಆನಂದ್ ಸಿಂಗ್ ಅವರ ಕಣ್ಣಿಗೆ ತೀವ್ರ ಪೆಟ್ಟಾಗಿತ್ತು, ಆ ನಂತರ ಗಣೇಶ್ ಅವರು ತಲೆಮರೆಸಿಕೊಂಡಿದ್ದರು.

68 ದಿನ ಜೈಲುವಾಸ ಅನುಭವಿಸಿದ ಗಣೇಶ್
ಫೆಬ್ರವರಿ 20 ರಂದು ಗಣೇಶ್ ಅವರನ್ನು ಗುಜರಾತಿನ ನಗರವೊಂದರಲ್ಲಿ ಬಂಧಿಸಲಾಯಿತು, ಫೆಬ್ರವರಿ 21ಕ್ಕೆ ನ್ಯಾಯಾಂಗ ಬಂಧನಕ್ಕೆ ಒಳಗಾದ ಅವರು ಮೂರು ದಿನದ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಅವರು ಸತತ 68 ದಿನಗಳ ಜೈಲುವಾಸ ಅನುಭವಿಸಿದ್ದಾರೆ. ಈ ನಡುವೆ ಅವರ ಕೆಪಿಸಿಸಿ ಸದಸ್ಯತ್ವ ರದ್ದು ಮಾಡಲಾಗಿದೆ.

ಮತ್ತೆ ಕಾಂಗ್ರೆಸ್ ಸೇರಲು ಗಣೇಶ್ ಕಸರತ್ತು?
ನ್ಯಾಯಾಲಯದಲ್ಲಿ ಪ್ರಕರಣವನ್ನು ಮೆದುಗೊಳಿಸಿಕೊಳ್ಳಲು ಮತ್ತು ಕಾಂಗ್ರೆಸ್ ಪಕ್ಷ ಹೇರಿರುವ ಅಮಾನತು ರದ್ದು ಪಡಿಸಿಕೊಳ್ಳಲು ಯತ್ನಿಸುತ್ತಿರುವ ಗಣೇಶ್ ಅವರು ಸಹಜವಾಗಿಯೇ ಆನಂದ್ ಸಿಂಗ್ ಅವರ ಬಳಿ ಸಂಧಾನಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಗಣೇಶ್ ಅವರನ್ನು ಕ್ಷಮಿಸಿದ್ದಾರೆಯೇ ಆನಂದ್ ಸಿಂಗ್ ?
ಆನಂದ್ ಸಿಂಗ್ ಆಗಲಿ ಅವರ ತಂದೆಯವರಾಗಲಿ ಗಣೇಶ್ ಅವರ ಕ್ಷಮಾಪಣೆ ಮನವಿಯನ್ನು ಮನ್ನಿಸಿದ್ದಾರೋ ಇಲ್ಲವೋ ಎಂಬುದು ಈವರೆಗೆ ತಿಳಿದುಬಂದಿಲ್ಲ, ಹಿಂದೊಮ್ಮೆ ಈ ಬಗ್ಗೆ ಮಾತನಾಡಿದ್ದ ಆನಂದ್ ಸಿಂಗ್ ಅವರು, ತಾವು ಈ ಪ್ರಕರಣದಲ್ಲಿ ನಿಲವು ಬದಲಾಯಿಸುವುದಿಲ್ಲ ಎಂದಿದ್ದರು, ಆದರೆ ಇಂದು ಗಣೇಶ್ ಕರೆದ ಸಂಧಾನಕ್ಕೆ ಬಂದಿರುವುದು ಅವರು ನಿಲವು ಮೃದುವಾಗಿದೆ ಎಂದು ಅರಿವಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications