ಬಳ್ಳಾರಿ ಕನಕ ದುರ್ಗಮ್ಮನಿಗೆ ಲಕ್ಷಾಂತರ ರು ಕಾಣಿಕೆ
ಬಳ್ಳಾರಿ, ಫೆ.18: ಕನಕ ದುರುಗಮ್ಮ ದೇವಿ ದೇಗುಲದ ಹುಂಡಿಯಲ್ಲಿ ಭಕ್ತಾದಿಗಳ ಕಾಣಿಕೆ ರೂಪದಲ್ಲಿ ಲಕ್ಷಾಂತರ ರುಪಾಯಿ ಸಂಗ್ರಹವಾಗಿದೆ. ಈ ಋತುವಿನಲ್ಲಿ ಒಂದು ಹುಂಡಿಯಲ್ಲೇ ಈ ದೊಡ್ಡ ಪ್ರಮಾಣದಲ್ಲಿ ಹಣ ಸಂಗ್ರಹವಾಗಿರುವುದು ಇದೆ ಮೊದಲು ಎನ್ನಲಾಗಿದೆ.
ಬಳ್ಳಾರಿ ಜಿಲ್ಲೆ ಸೇರಿದಂತೆ ನೆರೆಯ ಹಲವಾರು ಜಿಲ್ಲೆಗಳ ಭಕ್ತಾದಿಗಳು ನಗರ ದೇವತೆ ಶ್ರೀ ಕನಕ ದುರುಗಮ್ಮ ದೇವಿ ದೇವಸ್ಥಾನಕ್ಕೆ ನಡೆದುಕೊಳ್ಳುತ್ತಾರೆ. ಇತ್ತೀಚೆಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಎಸ್.ಪಿ.ಬಿ.ಮಹೇಶ್ ಹಾಗೂ ಶ್ರೀ ಕನಕ ದುರುಗಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಾಹಕ ಪಿ.ಮಲ್ಲಣ್ಣರವರ ಸಮಕ್ಷಮದಲ್ಲಿ ಒಂದು ಹುಂಡಿಯನ್ನು ತೆರೆದು ಲೆಕ್ಕ ಮಾಡಲಾಯಿತು.
ದೇಗುಲದದ ಒಂದು ಹುಡಿಯಲ್ಲಿ 19,21,210 ರೂ (ಹತ್ತೊಂಬತ್ತು ಲಕ್ಷದ ಇಪ್ಪತ್ತೊಂದು ಸಾವಿರದ ಇನ್ನೂರ ಹತ್ತು ರೂಗಳು) ಸಂಗ್ರಹವಾಗಿತ್ತು ಎಂದು ಶ್ರೀ ಕನಕ ದುರುಗಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪಿ.ಮಲ್ಲಣ್ಣರವರು ಹೇಳಿದ್ದಾರೆ.

ರೆಡ್ಡಿಗಳ ಮೆಚ್ಚಿನ ದೈವ ಕನಕ ದುರ್ಗಿ: ಬಳ್ಳಾರಿಯಲ್ಲಿ ವರಲಕ್ಷ್ಮಿ ಪೂಜೆಯ ಸಂಭ್ರಮವನ್ನು ಪರಿಚಯಿಸಿದ ಗಾಲಿ ರೆಡ್ಡಿ ಸೋದರರು, ಗುಂತಕಲ್ ಸಮೀಪದ ಕಸ್ವಾಪುರ ನೆಟ್ಟಿಗಂಟಿ ಆಂಜನೇಯ ಸ್ವಾಮಿ ಅಲ್ಲದೆ ಬಳ್ಳಾರಿಯ ಕನಕ ದುರ್ಗಮ್ಮ ದೇಗುಲಕ್ಕೆ ತುಂಬಾ ನಡೆದುಕೊಳ್ಳುತ್ತಾರೆ. ಗಾಲಿ ರೆಡ್ಡಿ ಸೋದರರಲ್ಲದೆ ಬಿ. ಶ್ರೀರಾಮುಲು, ಶಾಂತಾ ಅವರು ಕೂಡಾ ಈ ದೇಗುಲಕ್ಕೆ ವಿಶೇಷ ಸಂದರ್ಭಗಳಲ್ಲಿ ತಪ್ಪದೇ ಭೇಟಿ ಕೊಡುತ್ತಾರೆ.
ಶರನ್ನವರಾತ್ರಿಯ ಸಂದರ್ಭದಲ್ಲಿ ಈ ದೇಗುಲದಲ್ಲಿ 9 ದಿನಗಳ ಕಾಲ ಬನ್ನಿ ಮಹಾಂಕಾಳಿ ದೇವಿಗೆ ವಿಶೇಷ ಪೂಜೆ, ಪುನಸ್ಕಾರ ನಡೆಯುತ್ತದೆ. ವಿಜಯದಶಮಿಯ ದಿನ ಮಹಿಳೆಯರು ದೇವಿಗೆ ಸೀರೆ, ಬಳೆ, ಉಡಿಗೆ ಅಕ್ಕಿ, ನೈವೇದ್ಯದೊಂದಿಗೆ ತೆರಳಿ ಮಲ್ಲಿಗೆ, ಸೇವಂತಿ, ಕನಕಾಂಬರ ಹೀಗೆ ಬಗೆಬಗೆಯ ಪುಷ್ಪಗಳಿಂದ ಪೂಜೆ ಸಲ್ಲಿಸುತ್ತಾರೆ.
ನಗರದ ಹೃದಯಭಾಗದಲ್ಲಿರುವ ಅಧಿದೇವತೆ ಕನಕ ದುರ್ಗಮ್ಮ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದ ಸರಕಾರದಿಂದ ಇದುವರೆವಿಗೂ 7 ಕೋಟಿಗೂ ಅಧಿಕ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಲಾಗುತ್ತದೆ.
ಅದರೆ, ಇಲ್ಲಿ ಎಲ್ಲವೂ ಗಾಲಿ ರೆಡ್ಡಿ ಕುಟುಂಬ ಸೇರಿದಂತೆ ಖಾಸಗಿಯವರಿಂದ ನಡೆಸಲಾದ ಅಭಿವೃದ್ಧಿ ಕಾಮಗಾರಿಯಾಗಿದೆ. ಮೂಲ ಸೌಕರ್ಯ ಅಭಿವೃದ್ಧಿ ಇನ್ನೂ ಕುಂಠಿತವಾಗಿದೆ ಎಂದು ಜನಾರ್ದನ ರೆಡ್ಡಿ ಅಭಿಮಾನಿ ಬಳಗ ದೂರಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications