ಬಳ್ಳಾರಿ ಲೋಕಸಭೆ ಚುನಾವಣೆ ಅಪ್ಡೇಟ್: ವಿಎಸ್ ಉಗ್ರಪ್ಪಗೆ ದಾಖಲೆ ಜಯ
ಬಳ್ಳಾರಿ, ನವೆಂಬರ್ 06: ಕರ್ನಾಟಕದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳ ಚುನಾವಣಾ ಫಲಿತಾಂಶ ಮಂಗಳವಾರ(ನವೆಂಬರ್ 06)ದಂದು ಹೊರ ಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ ಅವರು ಭರ್ಜರಿ ಜಯ ದಾಖಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಜೆ ಶಾಂತಾ ಅವರು ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಅಂತಿಮ ಫಲಿತಾಂಶ: ವಿಎಸ್ ಉಗ್ರಪ್ಪ: 6,28,365 ಮತಗಳು ; ಜೆ ಶಾಂತಾ : 3,85,204 ಮತಗಳು
ನವೆಂಬರ್ 3 ಶನಿವಾರದಂದು ನಡೆದ ಉಪಚುನಾವಣೆಯ ಫಲಿತಾಂಶ ಕುತೂಹಲಕಾರಿಯಾಗಿತ್ತು. ಮಂಡ್ಯದಲ್ಲಿ ಜೆಡಿಎಸ್ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದ ಸಿ ಎಸ್ ಪುಟ್ಟರಾಜು, ಶಿವಮೊಗ್ಗದಲ್ಲಿ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದ ಬಿ ಎಸ್ ಯಡಿಯೂರಪ್ಪ ಮತ್ತು ಬಳ್ಳಾರಿ ಬಿಜೆಪಿ ಸಂಸದ ಶ್ರೀರಾಮುಲು ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರಿಂದ ತೆರವಾದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು.

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜೆ.ಶಾಂತ ಅವರು ಕಣದಲ್ಲಿದ್ದರೆ ಕಾಂಗ್ರೆಸ್ ನಿಂದ ವಿ.ಎಸ್.ಉಗ್ರಪ್ಪ ಮೊದಲ ಬಾರಿಗೆ ಸ್ಪರ್ಧಿಸಿದ್ದರು.
ಬಿಜೆಪಿಯಿಂದ ಟಿಕೆಟ್ ವಂಚಿತರಾಗಿ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಡಾ.ಟಿ.ಆರ್.ಶ್ರೀನಿವಾಸ್ ಕಣದಲ್ಲಿದ್ದರು. ಬಿ. ಶ್ರೀರಾಮುಲು ಹಾಗೂ ಡಿಕೆ ಶಿವಕುಮಾರ್ ನಡುವಿನ ಪ್ರತಿಷ್ಠಾ ಕಣವಾಗಿ ಮಾರ್ಪಾಟ್ಟಿದ್ದು, ಯಾರಿಗೆ ಮೇಲುಗೈ ಎಂಬುದು ಇಂದು ನಿರ್ಧಾರವಾಗಿದೆ.

ಸ್ವಾತಂತ್ರ್ಯ ಬಂದಾಗಿನಿಂದ 2000 ದ ವರೆಗೆ ಬಳ್ಳಾರಿ ಕ್ಷೇತ್ರ ಕಾಂಗ್ರೆಸ್ ತೆಕ್ಕೆಯಲ್ಲಿತ್ತು. ಆದರೆ ಕಳೆದ ಮೂರು ಚುನಾವಣೆಯಲ್ಲಿ ಬಿಜೆಪಿ ಕೈ ಸೇರಿದೆ. ಈ ಬಾರಿ ದೀಪಾವಳಿ ಲಡ್ಡು ಕೈ ನಾಯಕರ ಬಾಯಿಗೆ ಬಿದ್ದಿದೆ.
Karnataka: Counting of votes is underway for #KarnatakaByElection2018. Visuals from a counting station in Bellary. pic.twitter.com/CDvEBxQNjm
— ANI (@ANI) November 6, 2018
#KarnatakaBypolls2018: Counting of votes begins at counting centres in Bellary and Shimoga Lok Sabha constituencies, pic.twitter.com/J9syo6wsRQ
— ANI (@ANI) November 6, 2018
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications