Anil Lad Quits JDS: ಅನಿಲ್ ಲಾಡ್ಗೆ ಟಿಕೆಟ್ ನೀಡಿದ ಜೆಡಿಎಸ್: ಪಕ್ಷ ತೊರೆದ ಮುನ್ನಾಬಾಯಿ
ಬಳ್ಳಾರಿ, ಏಪ್ರಿಲ್ 21: ಜೆಡಿಎಸ್ ಮುಖಂಡ ಮುನ್ನಾಬಾಯಿ ಜೆಡಿಎಸ್ಗೆ ಗುಡ್ ಬೈ ಹೇಳಿ, ಗಾಲಿ ಜನಾರ್ಧನ ರೆಡ್ಡಿ ಸ್ಥಾಪಿಸಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಶುಕ್ರವಾರ ಸಂಜೆ ಸೇರ್ಪಡೆಯಾಗಿದ್ದಾರೆ.
ಬಳ್ಳಾರಿ ನಗರ ಕ್ಷೇತ್ರದಲ್ಲಿ ಸ್ಪರ್ಧಿಸಲು ಜೆಡಿಎಸ್ ಪಕ್ಷದಿಂದ ಬಿ ಫಾರಂ ಪಡೆದು ನಂತರ ನಡೆದ ಅನಿರೀಕ್ಷಿತ ಬೆಳವಣಿಗೆಗಳಿಂದ ಟಿಕೆಟ್ ವಂಚಿತರಾದ ಮುನ್ನಾಬಾಯಿ ಜೆಡಿಎಸ್ ಮುಖಂಡರ ಮೇಲೆ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಶುಕ್ರವಾರ ಸಂಜೆ ಜೆಡಿಎಸ್ ಪಕ್ಷ ತೊರೆದು ಬಳ್ಳಾರಿ ನಗರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಲಕ್ಷ್ಮೀ ಅರುಣಾ ಅವರ ಸಮ್ಮುಖದಲ್ಲಿ ಕೆಆರ್ಪಿಪಿ ಸೇರ್ಪಡೆಯಾಗಿದ್ದಾರೆ.

ಮುನ್ನಾಬಾಯಿ ಅವರಿಗೆ ಏಪ್ರಿಲ್ 18ರಂದು ಜೆಡಿಎಸ್ ವರಿಷ್ಠರು ಟಿಕೆಟ್ ನೀಡಿದ್ದರು. ಆದರೆ ನಂತರ ಮಾಜಿ ಶಾಸಕ ಅನಿಲ್ ಲಾಡ್ ಜೆಡಿಎಸ್ ಸೇರ್ಪಡೆಯಾಗಿ ಬಳ್ಳಾರಿ ನಗರದಿಂದ ಸ್ಪರ್ಧಿಸಲು ಬಿ ಫಾರಂ ಪಡೆದರು. ಇದರಿಂದ ಜೆಡಿಎಸ್ ವರಿಷ್ಠರ ವಿರುದ್ಧ ಆಕ್ರೋಶಗೊಂಡಿರುವ ಮುನ್ನಾಬಾಯಿ ಪಕ್ಷಕ್ಕೆ ಗುಡ್ಬೈ ಹೇಳಿದ್ದಾರೆ.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರುವ ಮುನ್ನಾ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನ್ನಾಬಾಯಿ, ನನಗೆ ಏಪ್ರಿಲ್ 18 ರಂದು ಮಧ್ಯಾಹ್ನ ಜೆಡಿಎಸ್ ಬಿ ಫಾರಂ ನೀಡಿದರು. ಆದರೆ ಅಂದೇ ರಾತ್ರಿ ಅನಿಲ್ ಲಾಡ್ ಬಿ ಫಾರಂ ನೀಡಿದ್ದಾರೆ. 2013ರಲ್ಲಿ ನಾನು ಬಳ್ಳಾರಿ ನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ. 2018 ರಲ್ಲಿ ಕುಮಾರಣ್ಣನವರ ಮಾತಿಗೆ ಗೌರವ ಕೊಟ್ಟು ಗಣಿ ಮಾಲೀಕರಿಗೆ ಜೆಡಿಎಸ್ ಟಿಕೆಟ್ ಬಿಟ್ಟು ಕೊಟ್ಟೆ ಎಂದರು.
ಮಾತು ಮುಂದುವರಿಸಿದ ಮುನ್ನಾಬಾಯಿ, ಈಗ ಮತ್ತೆ ನನ್ನ ಬದಲಿಗೆ ಗಣಿ ಮಾಲೀಕ ಅನಿಲ್ ಲಾಡ್ಗೆ ಟಿಕೆಟ್ ನೀಡಿದ್ದಾರೆ. ಟಿಕೆಟ್ ಪಡೆದ ಅನಿಲ್ ಲಾಡ್ ಸೌಜನ್ಯಕ್ಕಾದರೂ ನನ್ನ ಭೇಟಿಯಾಗಿಲ್ಲ. ಪಕ್ಷದಲ್ಲಿ ನನಗೆ ಆಗುತ್ತಿರುವ ಅನ್ಯಾಯವನ್ನು ಧಿಕ್ಕರಿಸಿ ನಾನು ಜೆಡಿಎಸ್ ತೊರೆದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸೇರುತ್ತಿದ್ದೇನೆ ಎಂದು ಹೇಳಿದರು.

ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಕಾರಣ ಅಸಮಾಧಾನಗೊಂಡಿದ್ದ ಅನಿಲ್ ಲಾಡ್, ಏಪ್ರಿಲ್ 19 ತಡರಾತ್ರಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಅನಿಲ್ ಲಾಡ್ ಕಳೆದ ಮಂಗಳವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಕ್ಷಕ್ಕೆ ದಿಢೀರ್ ಸೇರ್ಪಡೆಯಾಗಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದ ಅನಿಲ್ ಲಾಡ್ಗೆ ಜೆಡಿಎಸ್ ಮುಖಂಡರು ಟಿಕೆಟ್ ನೀಡಿದ್ದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications