ಆಪರೇಷನ್ ಕಮಲ: ಅಮಿತ್ ಶಾ ಪಿತಾಮಹ, ಮೋದಿ ಮೌನಿ ಬಾಬಾ
ಬಳ್ಳಾರಿ, ಜುಲೈ 13: ಈಗ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನ, ಶಾಸಕರ ರಾಜೀನಾಮೆಯ ಹಿಂದೆ ಬಿಜೆಪಿ ವರಿಷ್ಠರ ಕೈವಾಡವಿದೆ ಎಂದು ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ವಿ ಎಸ್ ಉಗ್ರಪ್ಪ ಆರೋಪಿಸಿದರು.
ಆಪರೇಷನ್ ಕಮಲಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೇ ಪಿತಾಮಹ. ಎಲ್ಲವೂ ತಮ್ಮ ನೇರದಲ್ಲಿ ನಡೆಯುತ್ತಿದ್ದರೂ, ಪ್ರಧಾನಿ ಮೋದಿ 'ಮೌನಿಬಾಬಾ' ಆಗಿದ್ದಾರೆಂದು ಉಗ್ರಪ್ಪ, ಬಿಜೆಪಿ ವಿರುದ್ದ ಕಿಡಿಕಾರಿದರು.
ಗೋವಾದಲ್ಲಿ ಮತ್ತು ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನೊಮ್ಮೆ ನೋಡಿ, ಈ ಎಲ್ಲಾ ಬೆಳವಣಿಗೆಗಳು ಅಮಿತ್ ಶಾ ನಿರ್ದೇಶನದಲ್ಲಿ ನಡೆಯುತ್ತಿದೆ ಎಂದು ಉಗ್ರಪ್ಪ ಆಪಾದಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಉಗ್ರಪ್ಪ, ಶಾಸಕರನ್ನು ಕೋಟಿ ಕೋಟಿ ಕೊಟ್ಟು ಖರೀದಿಸುತ್ತಿದ್ದಾರೆ, ಕೇಂದ್ರದ ಆದಾಯ ತೆರಿಗೆ, ಇಡಿ ಇಲಾಖೆಗಳು ಕಣ್ಮುಚ್ಚಿ ಕೂತಿದೆ ಎಂದು ಉಗ್ರಪ್ಪ ಬೇಸರ ವ್ಯಕ್ತ ಪಡಿಸಿದರು.
ಸಿದ್ದಾಂತ, ಪ್ರಜಾಪ್ರಭುತ್ವದ ಬಗ್ಗೆ ದೊಡ್ಡದೊಡ್ಡ ಮಾತನಾಡುವ ಮೋದಿಯವರು ಮೌನಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಉಗ್ರಪ್ಪ ಹೇಳಿದರು.
ಯಡಿಯೂರಪ್ಪನವರಿಗೆ ವಿಶ್ವಾಸಮತ ಸಾಬೀತು ಪಡಿಸಲು ಸಾಧ್ಯವಾಗದ ನಂತರ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದಿರುವುದು ಎನ್ನುವುದನ್ನು ಬಿಜೆಪಿಯವರು ಮೊದಲು ಅರಿಯಲಿ ಎಂದು ಉಗ್ರಪ್ಪ ಹೇಳಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications