ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿ ಜನರಿಗೆ ಏನು ಹೇಳಲು ಹೊರಟಿದ್ದೀರಿ?; ಕಾಂಗ್ರೆಸ್ ಮುಖಂಡರಿಗೆ ಪ್ರಶ್ನೆ

By ರೋಹಿಣಿ ಬಳ್ಳಾರಿ
|
Google Oneindia Kannada News

ಬಳ್ಳಾರಿ, ಸೆಪ್ಟೆಂಬರ್ 21: ಗಣಿನಾಡು ಬಳ್ಳಾರಿ ಜಿಲ್ಲೆಯನ್ನು ವಿಭಾಗಿಸಿ ಹೊಸದಾಗಿ ವಿಜಯನಗರ ಜಿಲ್ಲೆ ರಚನೆಗೆ ಮುಂದಾಗಿರುವ ನಡೆಗೆ ಜಿಲ್ಲೆಯ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ರಾಜ್ಯ ಮುಖಂಡರಾದ ಅಲ್ಲಂ ವೀರಭದ್ರಪ್ಪ, ಕೆ.ಸಿ.ಕೊಂಡಯ್ಯನವರು ಅನರ್ಹ ಶಾಸಕ ಆನಂದ್ ಸಿಂಗ್ ನಿಯೋಗದಲ್ಲಿ ಭಾಗವಹಿದ್ದಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ.

ನೀವು ನಿಯೋಗದಲ್ಲಿ ಪಾಲ್ಗೊಳ್ಳುವ ಮೂಲಕ ಜನರಿಗೆ ಏನು ಸಂದೇಶವನ್ನು ನೀಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಅನರ್ಹ ಶಾಸಕರ ಹಿತ ಮುಖ್ಯ ಅಲ್ಲ; ವಿಜಯನಗರ ಜಿಲ್ಲೆ ರಚನೆಗೆ ಜಿಲ್ಲಾ ಹೋರಾಟ ಸಮಿತಿ ವಿರೋಧಅನರ್ಹ ಶಾಸಕರ ಹಿತ ಮುಖ್ಯ ಅಲ್ಲ; ವಿಜಯನಗರ ಜಿಲ್ಲೆ ರಚನೆಗೆ ಜಿಲ್ಲಾ ಹೋರಾಟ ಸಮಿತಿ ವಿರೋಧ

"ಅಖಂಡ ಬಳ್ಳಾರಿ ಜಿಲ್ಲೆ ನಿಮಗೆ ಬೇಡವೇ... ಆ ನಿಯೋಗದಲ್ಲಿ ಭಾಗವಹಿಸುವ ಮೊದಲು ಸ್ಥಳೀಯ ಮುಖಂಡರ ಜೊತೆ ಪೂರ್ವಭಾವಿ ಸಭೆಯನ್ನು ನಡೆಸಿ ಅಭಿಪ್ರಾಯಗಳನ್ನು ಪಡೆದಿದ್ದಾರಾ? ದಯವಿಟ್ಟು ಬಳ್ಳಾರಿ ಜಿಲ್ಲೆಯ ಜನತೆಗೆ ಸ್ಪಷ್ಟನೆ ಕೊಡಿ" ಎಂದು ಕೇಳಿಕೊಂಡಿದ್ದಾರೆ.

Karnataka Rakshana Vedike Ballary District Opposed To Form New Vijayanagara District

ಸಂಪಾದಕರಿಗೆ ಪತ್ರ: ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದರೆ ಬರೀ ತೊಂದರೆಸಂಪಾದಕರಿಗೆ ಪತ್ರ: ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದರೆ ಬರೀ ತೊಂದರೆ

"ಯಾವ ಕಾರಣಕ್ಕೆ ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಬೇಕು ಎನ್ನುತ್ತೀರಿ? ಅದಕ್ಕೆ ನಿಮ್ಮ ಸಮರ್ಥನೆ ಏನು ದಯವಿಟ್ಟು ಬಳ್ಳಾರಿ ಜಿಲ್ಲೆಯ ಜನತೆಗೆ ತಿಳಿಸಿ. ನಿಮ್ಮ ಉತ್ತರದ ನಿರೀಕ್ಷೆಯಲ್ಲಿದ್ದೇವೆ" ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಬಳ್ಳಾರಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಕುರುಗೋಡು ಚನ್ನಬಸವರಾಜ್ ಗೌಡರು ಪ್ರಶ್ನಿಸಿದ್ದಾರೆ.

English summary
Members of the karnataka rakshana vedike Swabhimani bana in the district opposed the move to divide the Bellary district and the formation of the new Vijayanagar district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X