ವಿಜಯನಗರದಲ್ಲಿ ಬಿಜೆಪಿಗೆ ತಲೆನೋವಾದ ರೆಬೆಲ್ ಕವಿರಾಜ
ಬಳ್ಳಾರಿ, ನವೆಂಬರ್ 22: ಆನಂದ್ ಸಿಂಗ್ ಅವರು ನಮ್ಮ ನಾಯಕರು, ಅವರು ದೊಡ್ಡ ಮನಸ್ಸು ಮಾಡಿ ನಮ್ಮಂಥವರಿಗೆ ಅವಕಾಶ ಮಾಡಿಕೊಡಬೇಕು ಎಂದು ಉದ್ಯಮಿ ಕಮ್ ರಾಜಕಾರಣಿ ಕವಿರಾಜ್ ಅರಸ್ ಕೇಳಿಕೊಂಡಿದ್ದರು. ಪ್ರತ್ಯೇಕ ವಿಜಯನಗರ ಜಿಲ್ಲೆ ಸ್ಥಾಪನೆಯ ಕನಸು ಹೊತ್ತುಕೊಂಡಿರುವ ಆನಂದ್ ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿಯುವ ಸಾಧ್ಯತೆ ಕನಸಿನ ಮಾತು. ಹೀಗಾಗಿ ಕವಿರಾಜ್ ರನ್ನು ಹಿಂದಕ್ಕೆ ಸರಿಯುವಂತೆ ಕೇಳಿಕೊಳ್ಳಲಾಯಿತು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೇ ಖುದ್ದು ಮಾತನಾಡಿದರು. ಆದರೆ ರೆಬೆಲ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ನಿರ್ಧಾರದಿಂದ ಹಿಂದಕ್ಕೆ ಸರಿಯುವ ಮಾತೇ ಇಲ್ಲ ಎಂದು ಕವಿರಾಜ್ ಅರಸ್ ಘೋಷಿಸಿಬಿಟ್ಟರು.
"ಪಕ್ಷದ ಕಾರ್ಯಕರ್ತರು, ಬೆಂಬಲಿಗರ ಇಚ್ಛೆಯಂತೆ ನಾನು ಕಣಕ್ಕಿಳಿದಿದ್ದೇನೆ. ನಾನು ಗೆದ್ದ ಬಳಿಕ ಬಿಜೆಪಿ ಸರ್ಕಾರಕ್ಕೆ ಮೊದಲಿಗೆ ನನ್ನ ಬೆಂಬಲ ಘೋಷಿಸುತ್ತೇನೆ" ಎಂದು ಆತ್ಮವಿಶ್ವಾಸದಿಂದ ನುಡಿದಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರಿಗೂ ಮುನ್ನ ಡಿಸಿಎಂ ಗೋವಿಂದ ಕಾರಜೋಳ, ಆರೋಗ್ಯ ಸಚಿವ ಬಿ ಶ್ರೀರಾಮುಲು, ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಅವರು ಕೂಡಾ ಕವಿರಾಜ್ ಮನ ಓಲೈಕೆ ಮಾಡಲು ಯತ್ನಿಸಿ ಸೋತಿದ್ದಾರೆ. ನಿಗಮ -ಮಂಡಳಿ ಅಧ್ಯಕ್ಷ ಸ್ಥಾನದ ಆಫರ್ ಕೂಡಾ ನೀಡಿದರೂ ಕವಿರಾಜ್ ಮನ ಕರಗಿಲ್ಲ.
ಬಿಜೆಪಿ ಆಂತರಿಕ ತಿಕ್ಕಾಟ: ಕವಿರಾಜ್ ಅವರಿಗೆ ಸ್ಥಳೀಯ ಆರೆಸ್ಸೆಸ್ ಹಾಗೂ ಬಿಜೆಪಿ ಮುಖಂಡರ ಬೆಂಬಲ ಸಿಕ್ಕಿರುವ ಮಾಹಿತಿಯಿದೆ. ಕಾಂಗ್ರೆಸ್ಸಿನಿಂದ ಬಿಜೆಪಿಗೆ ಬಂದಿರುವ ಮಾಜಿ ಶಾಸಕ ಗವಿಯಪ್ಪ ಅವರು ಕೂಡಾ ಉಪ ಚುನಾವಣೆಯಲ್ಲಿ ತಟಸ್ಥರಾಗಿ ಉಳಿಯಲು ನಿರ್ಧರಿಸಿದ್ದಾರೆ.

2018ರಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸಿದ್ದ ಆನಂದ್ ಸಿಂಗ್ ವಿರುದ್ಧ ಸ್ಪರ್ಧಿಸಿ ಗವಿಯಪ್ಪ ಸೋಲು ಕಂಡಿದ್ದರು. ಇದಲ್ಲದೆ ಬಿಜೆಪಿ ಮಹಿಳಾ ರಾಜ್ಯ ಉಪಾಧ್ಯಕ್ಷೆ ರಾಣಿ ಸಂಯುಕ್ತಾ ಕೂಡಾ ಆನಂದ್ ಸಿಂಗ್ ಪರ ಪ್ರಚಾರ ಕೈಗೊಳ್ಳಲು ಸಿದ್ಧರಿಲ್ಲ. ಪ್ರತ್ಯೇಕ ವಿಜಯನಗರ ಜಿಲ್ಲೆ ವಿರೋಧಿಸುವ ಗಾಲಿ ರೆಡ್ಡಿ ಬಣದ ಅನೇಕ ಮುಖಂಡರು ಆನಂದ್ ಸಿಂಗ್ ಪರ ಪ್ರಚಾರ ನಡೆಸುವುದಿಲ್ಲ. ಹೀಗಾಗಿ, ಬಳ್ಳಾರಿಯಲ್ಲಿ ಆಂತರಿಕ ಕಚ್ಚಾಟದ ಲಾಭವನ್ನು ಪಡೆಯಲು ಕಾಂಗ್ರೆಸ್ ಸಜ್ಜಾಗಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications