ಹಾಲಿನ ದರ 3 ರೂ. ಹೆಚ್ಚಳ; ಕೆಎಂಎಫ್ ಅಧ್ಯಕ್ಷರ ಸಮರ್ಥನೆ
ಬಳ್ಳಾರಿ, ಜುಲೈ 25; ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ ಮಾಡಿದಂತೆ ಪ್ರತಿ ಲೀಟರ್ ಹಾಲಿನ ದರವನ್ನು ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ಲೀಟರ್ಗೆ 3 ರೂ. ಹೆಚ್ಚಿಸಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ, ರಾಬಕೊವಿ ಜಿಲ್ಲಾ ಹಾಲು ಸಹಕಾರ ಒಕ್ಕೂದ ಅಧ್ಯಕ್ಷ ಎಲ್. ಭೀಮನಾಯ್ಕ ತಿಳಿಸಿದರು. ಹಾಲಿನ ದರ ಏರಿಕೆಯನ್ನು ಅವರು ಸಮರ್ಥಿಸಿಕೊಂಡರು.
ಮಂಗಳವಾರ ಬಳ್ಳಾರಿ ನಗರದ ಕೆಎಂಎಫ್ನ ಡೈರಿ ಆಡಳಿತ ಮಂಡಳಿಯ ಸಭಾಂಗಣದಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸಿದರು. ಆಗಸ್ಟ್ 1 ರಿಂದ ಹಾಲಿನ ದರ ಹೆಚ್ಚಾಗುತ್ತಿರುವುದರ ಕುರಿತು ಮಾತನಾಡಿದರು. ಹೊಸ ದರವು ಜಾರಿಗೆ ಬರಲಿದೆ ಹಾಗೂ ಹೆಚ್ಚುವರಿ ಮಾಡುವ ಮಾರಾಟ ದರದ ಸಂಪೂರ್ಣ ಮೊತ್ತವನ್ನು ರೈತರಿಗೆ ವರ್ಗಾವಣೆ ಮಾಡಲಾಗುತ್ತದೆ ಎಂದರು.

"ಕರ್ನಾಟಕ ಹಾಲು ಮಹಾಮಂಡಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಂದಿನಿ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್ಗೆ ರೂ. 3 ಹೆಚ್ಚಳಕ್ಕೆ ಸಮ್ಮತಿ ನೀಡಲಾಗಿದೆ. ಆಗಸ್ಟ್ 1 ರಿಂದ ನೂತನ ದರ ಜಾರಿಗೆ ಬರಲಿದೆ" ಎಂದು ಹೇಳಿದರು.
ದರ ಹೆಚ್ಚಳ ಮಾಡಿರುವುದು ಏಕೆ?; ಎಲ್. ಭೀಮನಾಯ್ಕ ಮಾತನಾಡಿ, "ರಾಜ್ಯದಲ್ಲಿ ಪ್ರಮುಖವಾಗಿ ಸಣ್ಣ, ಮಧ್ಯಮ ರೈತರು ಹಾಗೂ ಹೆಚ್ಚು ಮಹಿಳಾ ರೈತರೇ ಹೈನೋದ್ಯಮವನ್ನು ಜೀವನೋಪಾಯದ ಮೂಲ ಕಸುಬನ್ನಾಗಿ ಅಳವಡಿಸಿಕೊಂಡಿರುವುದು ಹಾಗೂ ಹಾಲು ಉತ್ಪಾದನೆ ವೆಚ್ಚವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಮತ್ತು ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ಹಾಲು ಸಂಸ್ಕರಣೆ, ಸಾಗಾಣಿಕೆ, ಖರೀದಿ ದರಗಳಂತಹ ಎಲ್ಲಾ ಅಂಶಗಳನ್ನು ಪರಿಗಣಿಸಿ ದರ ಹೆಚ್ಚಿಸಲಾಗಿದೆ" ಎಂದು ಸಮರ್ಥನೆ ನೀಡಿದರು.
"ನಂದಿನಿ ಹಾಲಿನ ಮಾರಾಟ ದರವನ್ನು ಪ್ರಸ್ತುತ ರೂ. 3 ರಂತೆ ಪ್ರತಿ ಲೀಟರ್ಗೆ ಹೆಚ್ಚಳ ಮಾಡಿದ ನಂತರವು ದೇಶದ ಇತರೆ ಪ್ರಮುಖ ರಾಜ್ಯಗಳಲ್ಲಿನ ಸಹಕಾರಿ ಹಾಗೂ ಇತರೆ ಹಾಲಿನ ಬ್ಯಾಂಡ್ಗಳ ಮಾರಾಟ ದರಕ್ಕೆ ಹೋಲಿಸಿದಾಗ ಸಹ ನಂದಿನಿ ಹಾಲಿನ ಮಾರಾಟ ದರ ಕಡಿಮೆ ಇರುವುದನ್ನು ಗಮನಿಸಬಹುದು" ಎಂದರು.
"ಕರ್ನಾಟಕದಲ್ಲಿ 42 ರೂ., ಕೇರಳ 50 ರೂ., ದೆಹಲಿ 54 ರೂ., ಗುಜರಾತ್ 54 ರೂ., ಮಹಾರಾಷ್ಟ್ರ 54 ರೂ., ಆಂಧ್ರಪ್ರದೇಶದಲ್ಲಿ 56 ರೂ. ಇರುತ್ತದೆ. ಕೆಎಂಎಫ್ ಮಾರುಕಟ್ಟೆಯಲ್ಲಿರುವ ಇತರೆ ಎಲ್ಲಾ ಹಾಲಿನ ಮಾರಾಟ ದರಕ್ಕಿಂತ ಅತಿ ಕಡಿಮೆ ದರದಲ್ಲಿ ಹಾಲನ್ನು ಒದಗಿಸುತ್ತಿರುವುದನ್ನು ಗ್ರಾಹಕರು ಗಮನಿಸಿ ಈ ಹಿಂದಿನಂತೆಯೇ ಸಹಕರಿಸಬೇಕು" ಎಂದು ಮನವಿ ಮಾಡಿದರು.
"2022ನೇ ಸಾಲಿನಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ ಮೇವಿನ ಲಭ್ಯತೆ ತೊಂದರೆಯಿಂದ, ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಂಡುಬಂದಿರುವುದರಿಂದ, ಹಾಲಿನ ಮಾರಾಟ ದರ ಹೆಚ್ಚಳದ ವಿಳಂಬ ಹಾಗೂ ಪಶು ಆಹಾರ ಬೆಲೆ ಹೆಚ್ಚಳದಿಂದಾಗಿ ಪಶುಸಾಕಾಣಿಕೆ ವೆಚ್ಚ ಹೆಚ್ಚಾಗಿ ಹೈನುಗಾರಿಕೆ ಲಾಭದಾಯಕ ವೃತ್ತಿಯಲ್ಲವೆಂದು ರಾಜ್ಯವ್ಯಾಪ್ತಿಯಲ್ಲಿ ಸುಮಾರು 35 ಸಾವಿರಕ್ಕೂ ಹೆಚ್ಚು ಹೈನುಗಾರರು ಹೈನುಗಾರಿಕೆಯಿಂದ ವಿಮುಖರಾಗಿ, ಹಾಲು ಸರಬರಾಜನ್ನು ನಿಲ್ಲಿಸಿದ್ದಾರೆ" ಎಂದು ಕೆಎಂಎಫ್ ಅಧ್ಯಕ್ಷರು ವಿವರಿಸಿದರು.
"ಇದರಿಂದಾಗಿ ಕಳೆದ ಸಾಲಿಗೆ ಹೋಲಿಸಿದರೆ ಹಾಲಿನ ಶೇಖರಣೆಯು ದಿನವಹಿ 94 ಲಕ್ಷ ಲೀಟರ್ಗಳಿಂದ 84 ಲಕ್ಷ ಲೀಟರ್ಗಳಿಗೆ ಇಳಿಕೆಯಾಗಿದ್ದು, ದಿನವಹಿ ಅಂದಾಜು 10 ಲಕ್ಷ ಲೀಟರ್ ಕಡಿಮೆಯಾಗಿರುತ್ತದೆ" ಎಂದು ಅಧ್ಯಕ್ಷರು ವಿವರಣೆ ನೀಡಿದರು.
ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಪ್ರತಿ ಲೀಟರ್ ನಂದಿನಿ ಹಾಲಿನ ದರವನ್ನು 5 ರೂ. ಏರಿಕೆ ಮಾಡಬೇಕು ಎಂದು ಮನವಿ ಮಾಡಿತ್ತು. ಆದರೆ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರತಿ ಲೀಟರ್ಗೆ ದರವನ್ನು 3 ರೂ. ಏರಿಕೆ ಮಾಡಲು ಒಪ್ಪಿಗೆ ನೀಡಲಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications