ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ ಪರಿಸ್ಥಿತಿ; ಕೊಟ್ಟೂರು ಶ್ರೀ ಗುರು ಕೊಟ್ಟೂರೇಶ್ವರ ಜಾತ್ರೆ ರದ್ದು

|
Google Oneindia Kannada News

ಬಳ್ಳಾರಿ, ಫೆಬ್ರವರಿ 25: ಕೊಟ್ಟೂರು ಪಟ್ಟಣದ ಶ್ರೀ ಗುರು ಕೊಟ್ಟೂರೇಶ್ವರ ವಾರ್ಷಿಕ ಜಾತ್ರಾ ಮಹೋತ್ಸವ ರದ್ದಾಗಿದೆ. ಕೋವಿಡ್ ಸೋಂಕಿನ ಭೀತಿಯ ನಡುವೆಯೂ ಮಾರ್ಚ್ 7ರಂದು ರಥೋತ್ಸವ ನಡೆಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿತ್ತು.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಇತಿಹಾಸ ಪ್ರಸಿದ್ಧ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ರದ್ದು ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಂಜುನಾಥ ಹೇಳಿದ್ದಾರೆ. ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲು ಅನುಮತಿ ನೀಡಲಾಗಿದೆ.

ಹಿರಿಯೂರು ತೇರುಮಲ್ಲೇಶ್ವರ ದೇವಾಲಯದ ಇತಿಹಾಸ ಹಿರಿಯೂರು ತೇರುಮಲ್ಲೇಶ್ವರ ದೇವಾಲಯದ ಇತಿಹಾಸ

ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ಎಸ್. ಭೀಮಾನಾಯ್ಕ್, "ರಥೋತ್ಸವ ರದ್ದು ಮಾಡಿ ಧಾರ್ಮಿಕ ವಿಧಿ ವಿಧಾನ ನಡೆಸಲು ಜಿಲ್ಲಾಡಳಿತ ಅವಕಾಶ ನೀಡಿದೆ. ಜನರು ಸಹಕಾರ ನೀಡಬೇಕು" ಎಂದರು.

ಮೈಸೂರು: ಕೊರೊನಾ ಕಾರಣದಿಂದ ಸುತ್ತೂರು ಜಾತ್ರೆ ರದ್ದುಮೈಸೂರು: ಕೊರೊನಾ ಕಾರಣದಿಂದ ಸುತ್ತೂರು ಜಾತ್ರೆ ರದ್ದು

Kotturu Guru Kottureshwara Rathotsava Cancelled

"ರಾಜ್ಯದ ಅಲ್ಲಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ, ಮುಂಜಾಗ್ರತಾ ಕ್ರಮವಾಗಿ ರಥೋತ್ಸವ ರದ್ದು ಮಾಡಲಾಗಿದೆ. ಜಿಲ್ಲಾಡಳಿತ ಕೈಗೊಂಡ ತೀರ್ಮಾನಕ್ಕೆ ಜನರು ಸಹಕಾರ ನೀಡಬೇಕು" ಎಂದು ಮನವಿ ಮಾಡಿದರು.

ಜಾತ್ರೆ, ಉತ್ಸವಗಳಿಗೆ ಅಸ್ತು: ಭಕ್ತಾದಿಗಳಿಗೆ ಸಂತಸದ ಸುದ್ದಿ ನೀಡಿದ ರಾಜ್ಯ ಸರ್ಕಾರ ಜಾತ್ರೆ, ಉತ್ಸವಗಳಿಗೆ ಅಸ್ತು: ಭಕ್ತಾದಿಗಳಿಗೆ ಸಂತಸದ ಸುದ್ದಿ ನೀಡಿದ ರಾಜ್ಯ ಸರ್ಕಾರ

ಜಿಲ್ಲಾಡಳಿತ ಪ್ರತಿ ವರ್ಷ ಜಾತ್ರೆಯ ದಿನ ನಡೆಸುತ್ತಿದ್ದ ಪೂಜೆಗಳನ್ನು ಮಾಡಲು ಅವಕಾಶ ನೀಡಿದೆ. ರಥೋತ್ಸವದ ಸಮಯದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಪಾದಯಾತ್ರೆ ಮೂಲಕ ಭಕ್ತರು ಕೊಟ್ಟೂರಿಗೆ ಆಗಮಿಸುತ್ತಿದ್ದರು.

ಈ ವರ್ಷ ಹೊರಗಿನ ಜಿಲ್ಲೆಗಳಿಂದ ಯಾವುದೇ ಭಕ್ತರು ಆಗಮಿಸಲು ಜಿಲ್ಲಾಡಳಿತ ಅವಕಾಶ ನೀಡಿಲ್ಲ. ಪ್ರತಿ ವರ್ಷ ಲಕ್ಷಾಂತರ ಜನರ ಸಮ್ಮುಖದಲ್ಲಿ ನಡೆಯುತ್ತಿದ್ದ ರಥೋತ್ಸವ ಈ ಬಾರಿ ಸಾಂಪ್ರದಾಯಿಕ ಪೂಜೆಗಳ ಮೂಲಕ ಮಾತ್ರ ನಡೆಯಲಿದೆ.

English summary
Due to COVID 19 situation the place Kotturu Guru Kottureshwara rathotsava cancelled. Rathotsava scheduled on March 7, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X