ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ವಿತರಣೆಗೆ ಆಗ್ರಹಿಸಿ: ಕೆಪಿಸಿಸಿ ವಕ್ತಾರ
ಬೆಂಗಳೂರು, ಅಕ್ಟೋಬರ್ 30: ಎಪಿಎಲ್, ಬಿಪಿಎಲ್ ಸೇರಿದಂತೆ ಎಲ್ಲಾ ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ವಿತರಣೆ ಬಂದ್ ಆಗಿವೆ. ರಾಜ್ಯದಲ್ಲಿ ಅಡುಗೆ ಅನಿಲವನ್ನು ಬಹಳಷ್ಟು ಕುಟುಂಬಗಳಿಗೆ ಒದಗಿಸಿದ ನಂತರ ಆಹಾರ ಇಲಾಖೆ ಅಡುಗೆ ಅನಿಲ ಪಡೆದ ಕುಟುಂಬಗಳೂ ಸೇರಿದಂತೆ ಎಲ್ಲಾ ಪಡಿತರ ಚೀಟಿದಾರರಿಗೂ ಸೀಮೆಎಣ್ಣೆ ವಿತರಣೆ ನಿಲ್ಲಿಸಿದ್ದು ಗ್ರಾಮೀಣ ಭಾಗದ ಜನರಿಗೆ ತುಂಬಾ ತೊಂದರೆಯಾಗಿದೆ ಎಂದು ಕೆಪಿಸಿಸಿ ವಕ್ತಾರ ಪತ್ರೇಶ್ ಹಿರೇಮಠ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಳೆಗಾಳಿಯ ಸಂದರ್ಭದಲ್ಲಿ ಅನಿಯಮಿತ ವಿದ್ಯುತ್ ಕಡಿತವಾದಾಗ, ಮಕ್ಕಳ ಪರೀಕ್ಷೆ ಸಮಯದಲ್ಲಿ ಬೆಳಕಿಗಾಗಿ ಸೀಮೆಎಣ್ಣೆಗಾಗಿ ಹಳ್ಳಿಗಳಲ್ಲಿ ಮನೆಮನೆಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮದುವೆ ಉಪನಯನ ಸೀಮಂತ ನಾಮಕರಣದಂತಹ ಸಂಭ್ರಮದ ದೊಡ್ಡ ಭೋಜನ ತಯಾರಿಸುವ ಸಮಯದಲ್ಲಿ ಬೆಂಕಿ ಹಚ್ಚುವಷ್ಟು ಸೀಮೆಎಣ್ಣೆ ಇರದೇ ಜನತೆ ಕಂಗಾಲಾಗಿದ್ದಾರೆ. ನಗರ ಪ್ರದೇಶಗಳಲ್ಲಿ ಚಿತಾಗಾರ ಇದ್ದು ಗ್ರಾಮೀಣ ಪರಿಸರದಲ್ಲಿ ವಿಶೇಷವಾಗಿ ಶವ ಸುಡುವ ಸಮಯದಲ್ಲೂ ಅಗತ್ಯವಾಗಿರುವ ಸೀಮೆಎಣ್ಣೆ ಎಲ್ಲಿಯೂ ಸಿಗದಿರುವುದು ಶೋಚನೀಯ. ಪಡಿತರ ಚೀಟಿದಾರರಿಗೆ ಒಂದು ಎಲ್ಇಡಿ ಬಲ್ಬ್ ಇಲ್ಲವೇ ಒಂದು ಲೀ ಸೀಮೆಎಣ್ಣೆ ನೀಡುವ ಐಚ್ಛಿಕ ಅವಕಾಶವನ್ನು ನೀಡಿ ಗ್ರಾಮಪಂಚಾಯಿತಿಗಳಿಗೆ ಪಟ್ಟಿ ಮಾಡಲು ಸೂಚಿಸಲಾಗಿತ್ತು ಆ ಕೆಲಸವು ಕಾರ್ಯರೂಪಕ್ಕೆ ಬಂದಿಲ್ಲ.

ಹಿಂದಿನ ಸರ್ಕಾರದಲ್ಲಿ ಈ ಎಲ್ಲಾ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಪ್ರತಿ ಪಡಿತರಚೀಟಿಗೆ ತಿಂಗಳಿಗೊಮ್ಮೆಯಾದರೂ ಒಂದು ಲೀಟರ್ ಸೀಮೆಎಣ್ಣೆ ನೀಡುವ ಪ್ರಸ್ತಾವ ಇಲಾಖೆ ಸಿದ್ಧಪಡಿಸಿ ಸರ್ಕಾರದ ಮುಂದೆ ಸಲ್ಲಿಸಿತ್ತು. ಆದರೆ ಸರ್ಕಾರ ಪತನಗೊಂಡ ಬಳಿಕ ಪ್ರಸ್ತಾವ ಸ್ಥಗಿತಗೊಂಡಿದೆ. ತಕ್ಷಣವೇ ಆಹಾರ ಖಾತೆ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಪ್ರಸ್ತಾವಕ್ಕೆ ಮರುಜೀವ ನೀಡಿ ತಿಂಗಳಿಗೆ ಪ್ರತಿ ಪಡಿತರಚೀಟಿಗೆ ಒಂದು ಲೀಟರ್ ಸೀಮೆಎಣ್ಣೆ ವಿತರಣೆಗೆ ಕ್ರಮ ಕೈಗೊಳ್ಳಲು ಒತ್ತಾಯಿಸುತ್ತೇನೆ ಎಂದು ಪತ್ರೇಶ್ ಹಿರೇಮಠ್ ಹೇಳಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications