ಹಂಪಿ ಉತ್ಸವ ಆಚರಣೆ ಬಗ್ಗೆ ಬಿಜೆಪಿ ನಿರ್ಲಕ್ಷ್ಯ, ಕಾಂಗ್ರೆಸ್ ವಕ್ತಾರರಿಂದ ಖಂಡನೆ
ಬಳ್ಳಾರಿ, ಅಕ್ಟೋಬರ್ 17: "ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಹಂಪಿ ಉತ್ಸವ ವಿಳಂಬವಾಗಿದ್ದಕ್ಕೆ ಬಳ್ಳಾರಿ ಜಿಲ್ಲೆ ಜನರಿಂದ ಭಿಕ್ಷೆ ಎತ್ತಿ ಹಂಪಿ ಉತ್ಸವ ಆಚರಿಸುತ್ತೇನೆಂದು ಬಳ್ಳಾರಿ ನಗರ ಶಾಸಕ ಸೋಮಶೇಖರರಡ್ಡಿ ಬೊಬ್ಬಿರಿದು ಅಬ್ಬರಿಸಿದ್ದರು. ಆದರೇ ತಮ್ಮದೇ ಬಿಜೆಪಿ ಸರ್ಕಾರವಿದ್ದು ಹಂಪಿ ಉತ್ಸವ ಆಚರಣೆಗೆ ಸಂಬಂಧಿಸಿದ ಪೂರ್ವಭಾವಿ ಸಭೆ ಇಲ್ಲಿಯವರೆಗೂ ನಡೆಯದೇ ಇದ್ದರೂ ಚಕಾರವೆತ್ತುತ್ತಿಲ್ಲ ಯಾಕೆ?" ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರರು ಪ್ರಶ್ನಿಸಿದ್ದಾರೆ.
ಅಂದು ಸಂಸದರಾಗಿದ್ದ ಉಗ್ರಪ್ಪ ಶ್ರಮವಹಿಸಿ ಉತ್ಸವ ಆಚರಣೆಗೆ ಚಾಲನೆ ನೀಡಿ ತಮ್ಮ ಜವಾಬ್ದಾರಿ ನಿರ್ವಹಿಸಿದ್ದರು. ಆದರೆ ಇಂದು ಬಳ್ಳಾರಿ ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ಸಂಸದ ದೇವೇಂದ್ರಪ್ಪ ಹಂಪಿ ಉತ್ಸವಕ್ಕೆ ಧ್ವನಿ ಎತ್ತದಿರುವುದು ಖೇದಕರ ಸಂಗತಿ.

ಹಂಪಿ ಉತ್ಸವ ಆಚರಣೆಗೆ ಪೂರ್ವಭಾವಿ ಸಭೆಯನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಹಾಗೂ ಉಪಮುಖ್ಯಮಂತ್ರಿ ಲಕ್ಷಣ ಸವದಿಯವರು ತಕ್ಷಣ ಕರೆದು ನಿಗದಿಯಂತೆ ನವಂಬರ್ 3,4 ಹಾಗೂ5 ರಂದು ಉತ್ಸವ ನಡೆಸಲು ಒತ್ತಾಯಿಸುತ್ತೇವೆ.
ನೆರೆ ಪ್ರವಾಹದ ಕಾರಣ ನೀಡದೇ ಅದ್ದೂರಿ ಆಡಂಬರವಾಗಿ ಮಾಡದಿದ್ದರೂ ಎದುರು ಬಸವಣ್ಣ ಮಂಟಪ ವೇದಿಕೆ, ವಿರುಪಾಕ್ಷೇಶ್ವರ ದೇವಸ್ಥಾನ ವೇದಿಕೆ, ಕಡಲೆಕಾಳು ಮತ್ತು ಸಾಸಿವೆಕಾಳು ಗಣಪ ವೇದಿಕೆಗಳಲ್ಲಿ ಸರಳವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕು.
ಉತ್ಸವದಲ್ಲಿ ಹಿಂದಿ ಮತ್ತು ಕನ್ನಡ ಸಿನಿಮಾ ರಂಗದವರಿಗೆ ಹೆಚ್ಚಿನ ಹಣ ವ್ಯಯ ಮಾಡುವ ಬದಲು ಬಳ್ಳಾರಿ ಜಿಲ್ಲೆಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಕರ್ನಾಟಕದ ಪ್ರಾಚೀನ ಕಲೆಗಳ ಪ್ರದರ್ಶನಕ್ಕೆ ಅವಕಾಶ ನೀಡಲು ಒತ್ತಾಯಿಸುತ್ತೇವೆ ಎಂದು ಪತ್ರೇಶ್ ಹೇಳಿದರು.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications