ಹಂಪಿ ಉತ್ಸವ ಆಚರಣೆ ಬಗ್ಗೆ ಬಿಜೆಪಿ ನಿರ್ಲಕ್ಷ್ಯ, ಕಾಂಗ್ರೆಸ್ ವಕ್ತಾರರಿಂದ ಖಂಡನೆ
ಬಳ್ಳಾರಿ, ಅಕ್ಟೋಬರ್ 17: "ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಹಂಪಿ ಉತ್ಸವ ವಿಳಂಬವಾಗಿದ್ದಕ್ಕೆ ಬಳ್ಳಾರಿ ಜಿಲ್ಲೆ ಜನರಿಂದ ಭಿಕ್ಷೆ ಎತ್ತಿ ಹಂಪಿ ಉತ್ಸವ ಆಚರಿಸುತ್ತೇನೆಂದು ಬಳ್ಳಾರಿ ನಗರ ಶಾಸಕ ಸೋಮಶೇಖರರಡ್ಡಿ ಬೊಬ್ಬಿರಿದು ಅಬ್ಬರಿಸಿದ್ದರು. ಆದರೇ ತಮ್ಮದೇ ಬಿಜೆಪಿ ಸರ್ಕಾರವಿದ್ದು ಹಂಪಿ ಉತ್ಸವ ಆಚರಣೆಗೆ ಸಂಬಂಧಿಸಿದ ಪೂರ್ವಭಾವಿ ಸಭೆ ಇಲ್ಲಿಯವರೆಗೂ ನಡೆಯದೇ ಇದ್ದರೂ ಚಕಾರವೆತ್ತುತ್ತಿಲ್ಲ ಯಾಕೆ?" ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರರು ಪ್ರಶ್ನಿಸಿದ್ದಾರೆ.
ಅಂದು ಸಂಸದರಾಗಿದ್ದ ಉಗ್ರಪ್ಪ ಶ್ರಮವಹಿಸಿ ಉತ್ಸವ ಆಚರಣೆಗೆ ಚಾಲನೆ ನೀಡಿ ತಮ್ಮ ಜವಾಬ್ದಾರಿ ನಿರ್ವಹಿಸಿದ್ದರು. ಆದರೆ ಇಂದು ಬಳ್ಳಾರಿ ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ಸಂಸದ ದೇವೇಂದ್ರಪ್ಪ ಹಂಪಿ ಉತ್ಸವಕ್ಕೆ ಧ್ವನಿ ಎತ್ತದಿರುವುದು ಖೇದಕರ ಸಂಗತಿ.

ಹಂಪಿ ಉತ್ಸವ ಆಚರಣೆಗೆ ಪೂರ್ವಭಾವಿ ಸಭೆಯನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಹಾಗೂ ಉಪಮುಖ್ಯಮಂತ್ರಿ ಲಕ್ಷಣ ಸವದಿಯವರು ತಕ್ಷಣ ಕರೆದು ನಿಗದಿಯಂತೆ ನವಂಬರ್ 3,4 ಹಾಗೂ5 ರಂದು ಉತ್ಸವ ನಡೆಸಲು ಒತ್ತಾಯಿಸುತ್ತೇವೆ.
ನೆರೆ ಪ್ರವಾಹದ ಕಾರಣ ನೀಡದೇ ಅದ್ದೂರಿ ಆಡಂಬರವಾಗಿ ಮಾಡದಿದ್ದರೂ ಎದುರು ಬಸವಣ್ಣ ಮಂಟಪ ವೇದಿಕೆ, ವಿರುಪಾಕ್ಷೇಶ್ವರ ದೇವಸ್ಥಾನ ವೇದಿಕೆ, ಕಡಲೆಕಾಳು ಮತ್ತು ಸಾಸಿವೆಕಾಳು ಗಣಪ ವೇದಿಕೆಗಳಲ್ಲಿ ಸರಳವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕು.
ಉತ್ಸವದಲ್ಲಿ ಹಿಂದಿ ಮತ್ತು ಕನ್ನಡ ಸಿನಿಮಾ ರಂಗದವರಿಗೆ ಹೆಚ್ಚಿನ ಹಣ ವ್ಯಯ ಮಾಡುವ ಬದಲು ಬಳ್ಳಾರಿ ಜಿಲ್ಲೆಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಕರ್ನಾಟಕದ ಪ್ರಾಚೀನ ಕಲೆಗಳ ಪ್ರದರ್ಶನಕ್ಕೆ ಅವಕಾಶ ನೀಡಲು ಒತ್ತಾಯಿಸುತ್ತೇವೆ ಎಂದು ಪತ್ರೇಶ್ ಹೇಳಿದರು.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications