ಬಳ್ಳಾರಿಯಲ್ಲಿ ಕೆಪಿಸಿಎಲ್ ಇಂಜಿನಿಯರ್ ಭೀಕರ ಕೊಲೆ
ಬಳ್ಳಾರಿ, ಮೇ 7 : ಬಳ್ಳಾರಿಯ ಕುಡಿತಿನಿಯ ಕೆಪಿಸಿಎಲ್ ನಲ್ಲಿ ಕಾರ್ಯ ಪಾಲಕ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಬೆಂಗಳೂರು ಮೂಲದ ರಮೇಶ್ ಅವರನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಳ್ಳಾರಿಯ ಗಾಂಧಿನಗರದಲ್ಲಿ ನೆಲೆಸಿರುವ ರಮೇಶ್ (56) ಅವರ ಮೃತದೇಹ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಹೊಸಪೇಟೆ ರಸ್ತೆಯ ಮೊರಾರ್ಜಿ ದೇಸಾಯಿ ಹಾಸ್ಟೆಲ್ ಬಳಿ ಪತ್ತೆಯಾಗಿದೆ. ಬಳ್ಳಾರಿ ಗ್ರಾಮಾಂತರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಒಂಟಿಯಾಗಿದ್ದರು : ಕೆಪಿಸಿಎಲ್ ನಲ್ಲಿ ಕೆಲಸ ಮಾಡುತ್ತಿದ್ದ ರಮೇಶ್ ಗಾಂಧಿನಗರದಲ್ಲಿ ಒಂಟಿಯಾಗಿ ನೆಲೆಸಿದ್ದರು. ಅವರ ಪತ್ನಿ ಮತ್ತು ಕುಟುಂಬ ಸದಸ್ಯರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸೋಮವಾರ ರಾತ್ರಿ 7.30ರ ಸುಮಾರಿಗೆ ರಮೇಶ್ ಕುಟುಂಬದವರೊಂದಿಗೆ ಮಾತುಕತೆ ನಡೆಸಿದ್ದಾರೆ. [ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆರಂಭ]
ನಂತರ ಹೊಸಪೇಟೆ ರಸ್ತೆಗೆ ತೆರಳಿದ್ದಾರೆ. ಮಂಗಳವಾರ ಮುಂಜಾನೆ ರಮೇಶ್ ಅವರ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಶ್ವಾನದಳದೊಂದಿಗೆ ರಮೇಶ್ ಶವ ಸಿಕ್ಕ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ರಮೇಶ್ ಅವರ ಮೊಬೈಲ್ ಗೆ ಬಂದಿರುವ ಕರೆಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಬಳ್ಳಾರಿ ಗ್ರಾಮಾಂತರ ಠಾಣೆ ಪೊಲೀಸರು ಬೆಂಗಳೂರಿನಲ್ಲಿರುವ ರಮೇಶ್ ಅವರ ಕುಟುಂಬ ಸದಸ್ಯರಿಗೂ ಮಾಹಿತಿ ನೀಡಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಶವ ಸಿಕ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications