ಶ್ರೀ ಸಂಗನಬಸವ ಮಹಾಸ್ವಾಮಿಗಳ ಪರಿಚಯ
ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡುತ್ತಿರುವ ಶ್ರೀ ಶ್ರೀ ಸಂಗನಬಸವ ಮಹಾಸ್ವಾಮಿಯವರು ಬಿಜಾಪುರ ಜಿಲ್ಲೆಯ ಜಮಖಂಡಿಯಲ್ಲಿ 1938ರಲ್ಲಿ ಜನಿಸಿದರು. ತಮ್ಮ 13ನೇ ವಯಸ್ಸಿನಲ್ಲಿಯೇ ಪೂರ್ವಶ್ರಮವನ್ನು ತೊರೆದು, ದೈವಜ್ಞಾನಾರ್ಜನೆಯಲ್ಲಿ ತೊಡಗಿಸಿಕೊಂಡರು.
ಭಾರತೀಯ ತತ್ವಜ್ಞಾನ ಹಾಗೂ ಧರ್ಮಶಾಸ್ತ್ರದ ಆಳ ಅಧ್ಯಯನಕ್ಕಾಗಿ ಶ್ರೀಕ್ಷೇತ್ರ ಕಾಶಿಗೆ ತೆರಳಿದ ಮಹಾಸ್ವಾಮಿಯವರು, 1972ರಲ್ಲಿ ಶ್ರೀ ಜಗದ್ಗುರು ಕೊಟ್ಟೂರು ಮಹಾಸಂಸ್ಥಾನ ಮಠ, ಹೊಸಪೇಟೆ ಹಾಗೂ 1982ರಲ್ಲಿ ಹಾಳಕೆರೆ ಶ್ರೀ ಆನಂದೀಶ್ವರ ಸಂಸ್ಥಾನ ಮಠದ ಮಠಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಮಠದ ಸಂಪನ್ಮೂಲಗಳನ್ನು ಸಮಾಜದ ಎಲ್ಲಾ ವರ್ಗದ ಜನಗಳ ಒಳಿತಿಗಾಗಿ ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸ, ವ್ಯವಸಾಯ, ಸಮಾಜ ಸೇವೆ ಮತ್ತು ಸಮುದಾಯಗಳ ಏಳಿಗೆಗಾಗಿ ವಿನಿಯೋಗ ಮಾಡಿರುತ್ತಾರೆ.

ಶ್ರೀಗಳು ನಿರಂತರವಾಗಿ ಕೃಷಿಕರು, ಶಿಕ್ಷಣ ತಜ್ಞರು ಹಾಗೂ ಸಮಾಜ ಸೇವಕರುಗಳೊಂದಿಗೆ ಬೆರತು ಸಮಾಜದ ಎಲ್ಲಾ ಸಮುದಾಯಗಳ ಜನರ ಏಳಿಗೆಗಾಗಿ ಶ್ರಮ ವಹಿಸಿ ದುಡಿಯುತ್ತಿದ್ದಾರೆ. ಹೈದರಬಾದ್-ಕರ್ನಾಟಕ ಪ್ರಾಂತ್ಯದ ದೂರದ ಹಳ್ಳಿ ಪ್ರದೇಶಗಳಲ್ಲಿ ಶಾಲೆಗಳನ್ನು ಸ್ಥಾಪಿಸಿ ಸಾಕ್ಷರತೆಯ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ.
ಶ್ರೀಗಳು ಸ್ಥಳೀಯ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಪ್ರಚುರ ಪಡಿಸಲು ಸಂಶೋಧನೆಗಾಗಿ ಹೆಚ್ಚು ಒತ್ತು ನೀಡಿದ್ದಾರೆ. ಮಹಾ ಕವಿ ಹರಿಹರ ಸಂಶೋಧನ ಕೇಂದ್ರವನ್ನು ಸ್ಥಾಪಿಸಿ ಅದರಲ್ಲಿ ಸತತವಾಗಿ ವಿಚಾರ ಸಂಕಿರಣಗಳನ್ನು ಹಾಗೂ ಕಾರ್ಯಾಗಾರಗಳನ್ನು ನಡೆಸುತ್ತಾ ಹೇಮಕೂಟ ಎಂಬ ನಿಯತಕಾಲಿಕದಲ್ಲಿ ಧರ್ಮ, ತತ್ವಶಾಸ್ತ್ರ ಹಾಗೂ ಸಮಕಾಲೀನ ಸಮಸ್ಯೆಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬಾದಾಮಿಯ ಶ್ರೀ ಮದ್ವೀರಶೈವ ಶಿವಮಂದಿರದ ಶತಮಾನೋತ್ಸವ ಸಮಾರಂಭದ ಚುಕ್ಕಾಣೆಯನ್ನು ವಹಿಸಿದ ಹಿರಿಮೆ ಶ್ರೀಗಳದ್ದಾಗಿದೆ. ಈ ಸಮಾರಂಭಕ್ಕೆ ರಾಷ್ಟ್ರಮಟ್ಟದ ಹಾಗೂ ರಾಜ್ಯ ಮಟ್ಟದ ಗಣ್ಯಾತಿಗಣ್ಯರು ಭಾಗವಹಿಸಿದ್ದರು. ಶ್ರೀಗಳ ಎಲ್ಲಾ ಸೇವೆಯನ್ನು ಪರಿಗಣಿಸಿ, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸುತ್ತಿದೆ.
-
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications