ಪರಮೇಶ್ವರ್ ನಾಯ್ಕ್ಗೆ ಏಕೆ ಸಚಿವ ಸ್ಥಾನ? ಭೀಮಾ ನಾಯ್ಕ್ ಆಕ್ರೋಶ
ಬಳ್ಳಾರಿ, ಡಿಸೆಂಬರ್ 22: ಹೂವಿನ ಹಡಗಲಿ ಶಾಸಕ ಪರಮೇಶ್ವರ್ ನಾಯ್ಕ್ ಅವರಿಗೆ ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ಸಚಿವ ಸ್ಥಾನ ನೀಡುತ್ತಿದ್ದಂತೆಯೇ ಬಳ್ಳಾರಿ ಕಾಂಗ್ರೆಸ್ನಲ್ಲಿ ಭಾರಿ ಅಸಮಾಧಾನ ಸ್ಫೋಟಗೊಂಡಿದೆ.
ಅದರಲ್ಲಿಯೂ ಮುಖ್ಯವಾಗಿ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ್, ಪಕ್ಷದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಪರಮೇಶ್ವರ್ ನಾಯ್ಕ್ ಕಳೆದ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಪ್ರಯತ್ನಿಸಿದ್ದರು. ಹಿಂದೆಯೂ ಸಚಿವರಾಗಿದ್ದ ಅವರ ಆಡಳಿತ ಹೇಗಿತ್ತು ಎಂದು ಎಲ್ಲರಿಗೂ ಗೊತ್ತಿದೆ. ಅವರು ಸಚಿವರಾಗಿದ್ದಾಗ ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಶೂನ್ಯ, ಅಂತಹವರಿಗೆ ಸಚಿವ ಸ್ಥಾನ ನೀಡಬೇಕಿತ್ತೇ? ಎಂದು ಭೀಮಾ ನಾಯ್ಕ್ ಪ್ರಶ್ನಿಸಿದ್ದಾರೆ.

ಬೇರೆ ಅನೇಕ ಹಿರಿಯ ಮತ್ತು ಅರ್ಹ ಶಾಸಕರಿದ್ದರೂ ಪರಮೇಶ್ವರ್ ನಾಯ್ಕ್ ಅವರನ್ನೇ ಏಕೆ ಸಚಿವರನ್ನಾಗಿ ಆಯ್ಕೆ ಮಾಡಲಾಯಿತು ಎಂದು ಅವರು ಕೇಳಿದ್ದಾರೆ.
ಈ ನಡುವೆ ಸಚಿವ ಸ್ಥಾನ ದೊರೆತಿದ್ದಕ್ಕೆ ಪರಮೇಶ್ವರ್ ನಾಯ್ಕ್ ಸಂತಸ ವ್ಯಕ್ತಪಡಿಸಿದ್ದಾರೆ.
ನಾನು ಸಚಿವನಾಗುತ್ತಿರುವುದು ಇದು ಮೊದಲೇನಲ್ಲ. ಯಾವ ಖಾತೆ ನೀಡಿದರೂ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ ಎಂದು ಪರಮೇಶ್ವರ್ ನಾಯ್ಕ್ ಹೇಳಿದ್ದಾರೆ.
ಭೀಮಾ ನಾಯ್ಕ್ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದರ ಬಗ್ಗೆ ಅವರ ಬೆಂಬಲಿಗರಲ್ಲಿ ಸಹಜವಾಗಿಯೇ ಅಸಮಾಧಾನ ಉಂಟಾಗಿದೆ. ಅವರಿಗೆ ಮುಂದೆ ಪರ್ಯಾಯ ಸ್ಥಾನ ಸಿಗಬಹುದು.
ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರೂ ಪಕ್ಷ ತೊರೆಯಬಾರದು. ಬಿಜೆಪಿ ಕೂಡ ಸರ್ಕಾರ ಬೀಳಿಸುವ ಪ್ರಯತ್ನ ಮಾಡಬಾರದು. ಆಡಳಿತ ನಡೆಸಲು ಬಿಡಬೇಕು ಎಂದು ಸಚಿವ ಶಿವಶಂಕರ್ ರೆಡ್ಡಿ ಬಳ್ಳಾರಿಯಲ್ಲಿ ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications