ಹಂಪಿ ಉತ್ಸವ 2018ರ ಮೇಲೆ ಲೋಕಸಭೆ ಚುನಾವಣೆಯ ಕರಿನೆರಳು
ಬಳ್ಳಾರಿ, ಅಕ್ಟೋಬರ್ 06 : ನವೆಂಬರ್ 3, 4 ಮತ್ತು 5ರಂದು ಆಚರಿಸಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ಮಟ್ಟದ ಸಾಂಸ್ಕೃತಿಕ 'ಹಂಪಿ ಉತ್ಸವ - 2018'ಕ್ಕೆ ಲೋಕಸಭೆ ಮತ್ತು ವಿಧಾನಸಭಾ ಉಪ ಚುನಾವಣೆಯ ಕರಿನೆರಳು ಬೀಳುವ ಆತಂಕ ಅನೇಕರಲ್ಲಿ ಮನೆ ಮಾಡಿದೆ. ಆದರೆ, ಬಳ್ಳಾರಿ ಜಿಲ್ಲಾಡಳಿತದ ಅಧಿಕಾರಿ ವಲಯದಲ್ಲಿ 'ಚುನಾವಣೆಗೆ ಸಿದ್ಧತೆ' ಪೂರ್ಣಗೊಂಡಿದೆ.
ಜಿಲ್ಲಾಧಿಕಾರಿ ಡಾ. ರಾಂಪ್ರಸಾತ್ ವಿ. ಮನೋಹರ್ ಅವರು ವೈಯಕ್ತಿಕ ಮುತುವರ್ಜಿವಹಿಸಿ ಹಂಪಿ ಉತ್ಸವದ ಪೂರ್ವಭಾವೀ ಸಿದ್ಧತೆಗಳನ್ನು ಪ್ರತಿನಿತ್ಯವೂ ಪರಿಶೀಲಿಸಿ, ಕಲಾವಿದರ ಆಯ್ಕೆ, ವೇದಿಕೆಗಳ ನಿರ್ಮಾಣ, ಹಣಕಾಸು ವ್ಯವಸ್ಥೆ, ಆಹಾರ - ವಸತಿ ಸೇರಿ ಅನೇಕ ಉಪ ಸಮಿತಿಗಳನ್ನು ರಚಿಸಿ, ಉತ್ಸವದ ಯಶಸ್ವಿಗಾಗಿ ಅಧಿಕಾರಿಗಳನ್ನು ಕಳೆದ ಒಂದು ತಿಂಗಳಿನಿಂದಲೇ ಮಾನಸಿಕವಾಗಿ ಸಿದ್ಧಗೊಳಿಸುತ್ತಿದ್ದಾರೆ.
ಮಾರಾಟ ಮಳಿಗೆಗಳ ನಿರ್ಮಾಣ, ಬಸ್ ನಿಲ್ದಾಣ, ಸಾರಿಗೆ ವ್ಯವಸ್ಥೆ, ಕಾನೂನು ಮತ್ತು ಶಾಂತಿಯ ಪಾಲನೆ, ಕುಡಿಯುವ ನೀರು, ಶೌಚ ಅಷ್ಟೇ ಅಲ್ಲದೇ, ಆಹ್ವಾನಿತರ ಕಾಳಜಿ ಎಲ್ಲವನ್ನೂ ಪ್ರತೀ ಹಂತದಲ್ಲೂ ಗಮನಿಸುತ್ತಿದ್ದಾರೆ. ಆದರೆ, ಇದೇ ಸಂದರ್ಭದಲ್ಲೂ ಬಳ್ಳಾರಿ ಲೋಕಸಭಾ ಉಪ ಚುನಾವಣೆಗಾಗಿ ಮತಗಟ್ಟೆಗಳ ಪಟ್ಟಿ, ಇವಿಎಂ ಯಂತ್ರಗಳ ಪರಿಶೀಲನೆ, ಮತದಾರರ ಪಟ್ಟಿ, ಇನ್ನಿತರೆ ಕೆಲಸಗಳನ್ನೂ ನಿರ್ವಹಿಸುತ್ತಿದ್ದಾರೆ.

ಶನಿವಾರದಂದು ಮೂರು ರಾಜ್ಯಗಳ ವಿಧಾನಸಭಾ ಚುನಾವಣಾ ನೋಟಿಫಿಕೇಷನ್ ಪ್ರಕಟ ಆಗುತ್ತಿರುವ ಹಿನ್ನಲೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೂ ಚುನಾವಣೆ ಘೋಷಣೆ ಆಗಲಿದೆ ಎಂದು ಅಧಿಕಾರಿಗಳು ನಿರೀಕ್ಷೆಯಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಅನೇಕರು ಹಂಪಿ ಉತ್ಸವಕ್ಕೆ ಕನಿಷ್ಠ 30 ಕೋಟಿ ರೂಪಾಯಿ ದುಂದುವೆಚ್ಚ ಮಾಡುವ ಬದಲು, ಉರಿ ಬಿಸಿಲಲ್ಲಿ ಕಲಾವಿದರು, ಆಹ್ವಾನಿತರು ಮತ್ತು ಕಲಾಪ್ರೇಮಿಗಳನ್ನು ಬಾಧಿಸುವ ಬದಲು ಚುನಾವಣೆ ನಡೆದು, ಉತ್ಸವ ಮುಂದೂಡುವುದೇ ಸೂಕ್ತ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ.
ಬಿ. ಶ್ರೀರಾಮುಲು ಅವರು ಲೋಕಸಭಾ ಚುನಾವಣೆ ಸ್ಥಾನಕ್ಕೆ ರಾಜೀನಾಮೆ ನೀಡಿ, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುವ ಸುಳಿವು ಅಧಿಕಾರಿಗಳಲ್ಲಿ ಇದೆ.
ಅಷ್ಟೇ ಅಲ್ಲ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತೆರವು ಮಾಡಿರುವ ರಾಮನಗರ ವಿಧಾನಸಭಾ ಕ್ಷೇತ್ರ ಮತ್ತು ಸಿದ್ದು ನ್ಯಾಮಗೌಡ ಅವರ ನಿಧನದಿಂದ ತೆರವಾಗಿರುವ ಜಮಖಂಡಿ ವಿಧಾನಸಭಾ ಉಪ ಚುನಾವಣೆ ದಿನಾಂಕ ಘೋಷಣೆ ಆದರೂ, ನೀತಿ ಸಂಹಿತೆ ಹಿನ್ನಲೆಯಲ್ಲಿ ಹಂಪಿ ಉತ್ಸವ ರದ್ದಾಗಲಿದೆ ಎನ್ನುವುದು ಅನೇಕರ ಲೆಕ್ಕಾಚಾರವಾಗಿದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications