ಹಂಪಿ ಉತ್ಸವ 2018ರ ಮೇಲೆ ಲೋಕಸಭೆ ಚುನಾವಣೆಯ ಕರಿನೆರಳು
ಬಳ್ಳಾರಿ, ಅಕ್ಟೋಬರ್ 06 : ನವೆಂಬರ್ 3, 4 ಮತ್ತು 5ರಂದು ಆಚರಿಸಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ಮಟ್ಟದ ಸಾಂಸ್ಕೃತಿಕ 'ಹಂಪಿ ಉತ್ಸವ - 2018'ಕ್ಕೆ ಲೋಕಸಭೆ ಮತ್ತು ವಿಧಾನಸಭಾ ಉಪ ಚುನಾವಣೆಯ ಕರಿನೆರಳು ಬೀಳುವ ಆತಂಕ ಅನೇಕರಲ್ಲಿ ಮನೆ ಮಾಡಿದೆ. ಆದರೆ, ಬಳ್ಳಾರಿ ಜಿಲ್ಲಾಡಳಿತದ ಅಧಿಕಾರಿ ವಲಯದಲ್ಲಿ 'ಚುನಾವಣೆಗೆ ಸಿದ್ಧತೆ' ಪೂರ್ಣಗೊಂಡಿದೆ.
ಜಿಲ್ಲಾಧಿಕಾರಿ ಡಾ. ರಾಂಪ್ರಸಾತ್ ವಿ. ಮನೋಹರ್ ಅವರು ವೈಯಕ್ತಿಕ ಮುತುವರ್ಜಿವಹಿಸಿ ಹಂಪಿ ಉತ್ಸವದ ಪೂರ್ವಭಾವೀ ಸಿದ್ಧತೆಗಳನ್ನು ಪ್ರತಿನಿತ್ಯವೂ ಪರಿಶೀಲಿಸಿ, ಕಲಾವಿದರ ಆಯ್ಕೆ, ವೇದಿಕೆಗಳ ನಿರ್ಮಾಣ, ಹಣಕಾಸು ವ್ಯವಸ್ಥೆ, ಆಹಾರ - ವಸತಿ ಸೇರಿ ಅನೇಕ ಉಪ ಸಮಿತಿಗಳನ್ನು ರಚಿಸಿ, ಉತ್ಸವದ ಯಶಸ್ವಿಗಾಗಿ ಅಧಿಕಾರಿಗಳನ್ನು ಕಳೆದ ಒಂದು ತಿಂಗಳಿನಿಂದಲೇ ಮಾನಸಿಕವಾಗಿ ಸಿದ್ಧಗೊಳಿಸುತ್ತಿದ್ದಾರೆ.
ಮಾರಾಟ ಮಳಿಗೆಗಳ ನಿರ್ಮಾಣ, ಬಸ್ ನಿಲ್ದಾಣ, ಸಾರಿಗೆ ವ್ಯವಸ್ಥೆ, ಕಾನೂನು ಮತ್ತು ಶಾಂತಿಯ ಪಾಲನೆ, ಕುಡಿಯುವ ನೀರು, ಶೌಚ ಅಷ್ಟೇ ಅಲ್ಲದೇ, ಆಹ್ವಾನಿತರ ಕಾಳಜಿ ಎಲ್ಲವನ್ನೂ ಪ್ರತೀ ಹಂತದಲ್ಲೂ ಗಮನಿಸುತ್ತಿದ್ದಾರೆ. ಆದರೆ, ಇದೇ ಸಂದರ್ಭದಲ್ಲೂ ಬಳ್ಳಾರಿ ಲೋಕಸಭಾ ಉಪ ಚುನಾವಣೆಗಾಗಿ ಮತಗಟ್ಟೆಗಳ ಪಟ್ಟಿ, ಇವಿಎಂ ಯಂತ್ರಗಳ ಪರಿಶೀಲನೆ, ಮತದಾರರ ಪಟ್ಟಿ, ಇನ್ನಿತರೆ ಕೆಲಸಗಳನ್ನೂ ನಿರ್ವಹಿಸುತ್ತಿದ್ದಾರೆ.

ಶನಿವಾರದಂದು ಮೂರು ರಾಜ್ಯಗಳ ವಿಧಾನಸಭಾ ಚುನಾವಣಾ ನೋಟಿಫಿಕೇಷನ್ ಪ್ರಕಟ ಆಗುತ್ತಿರುವ ಹಿನ್ನಲೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೂ ಚುನಾವಣೆ ಘೋಷಣೆ ಆಗಲಿದೆ ಎಂದು ಅಧಿಕಾರಿಗಳು ನಿರೀಕ್ಷೆಯಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಅನೇಕರು ಹಂಪಿ ಉತ್ಸವಕ್ಕೆ ಕನಿಷ್ಠ 30 ಕೋಟಿ ರೂಪಾಯಿ ದುಂದುವೆಚ್ಚ ಮಾಡುವ ಬದಲು, ಉರಿ ಬಿಸಿಲಲ್ಲಿ ಕಲಾವಿದರು, ಆಹ್ವಾನಿತರು ಮತ್ತು ಕಲಾಪ್ರೇಮಿಗಳನ್ನು ಬಾಧಿಸುವ ಬದಲು ಚುನಾವಣೆ ನಡೆದು, ಉತ್ಸವ ಮುಂದೂಡುವುದೇ ಸೂಕ್ತ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ.
ಬಿ. ಶ್ರೀರಾಮುಲು ಅವರು ಲೋಕಸಭಾ ಚುನಾವಣೆ ಸ್ಥಾನಕ್ಕೆ ರಾಜೀನಾಮೆ ನೀಡಿ, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುವ ಸುಳಿವು ಅಧಿಕಾರಿಗಳಲ್ಲಿ ಇದೆ.
ಅಷ್ಟೇ ಅಲ್ಲ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತೆರವು ಮಾಡಿರುವ ರಾಮನಗರ ವಿಧಾನಸಭಾ ಕ್ಷೇತ್ರ ಮತ್ತು ಸಿದ್ದು ನ್ಯಾಮಗೌಡ ಅವರ ನಿಧನದಿಂದ ತೆರವಾಗಿರುವ ಜಮಖಂಡಿ ವಿಧಾನಸಭಾ ಉಪ ಚುನಾವಣೆ ದಿನಾಂಕ ಘೋಷಣೆ ಆದರೂ, ನೀತಿ ಸಂಹಿತೆ ಹಿನ್ನಲೆಯಲ್ಲಿ ಹಂಪಿ ಉತ್ಸವ ರದ್ದಾಗಲಿದೆ ಎನ್ನುವುದು ಅನೇಕರ ಲೆಕ್ಕಾಚಾರವಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications