Lok Sabha Election 2024 Result: ಬಿ. ಶ್ರೀ ರಾಮುಲು, ಸಹೋದರಿ ಜೆ. ಶಾಂತ ಇಬ್ಬರಿಗೂ ಸೋಲು
ಬಳ್ಳಾರಿ, ಜೂನ್ 04; ಲೋಕಸಭೆ ಚುನಾವಣೆ 2024ರಲ್ಲಿ ಬಿಜೆಪಿ ನಾಯಕ ಬಿ. ಶ್ರೀ ರಾಮುಲು ಮತ್ತು ಅವರ ಸಹೋದರಿ ಜೆ. ಶಾಂತ ಇಬ್ಬರೂ ಸೋಲು ಕಂಡಿದ್ದಾರೆ. ಇಬ್ಬರೂ ಸಹ ಬೇರೆ-ಬೇರೆ ಪಕ್ಷದಿಂದ ಬೇರೆ-ಬೇರೆ ರಾಜ್ಯಗಳಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.
ಮಂಗಳವಾರ ಲೋಕಸಭೆ ಚುನಾವಣೆ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ ಅಭ್ಯರ್ಥಿಯಾಗಿ ಬಿ. ಶ್ರೀರಾಮುಲು ಕರ್ನಾಟಕದ ಬಳ್ಳಾರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಬಿ. ಶ್ರೀರಾಮುಲು ಸಹೋದರಿ ಜೆ. ಶಾಂತ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಯುವಜನ ಶ್ರಮಿಕ ರೈತ ಕಾಂಗ್ರೆಸ್ (ವೈಎಸ್ಆರ್ಸಿಪಿ) ಪಕ್ಷದಿಂದ ಹಿಂದೂಪುರ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದರು.

ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ. ತುಕಾರಾಂ 730845 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಬಳ್ಳಾರಿ ಎಸ್ಟಿ ಮೀಸಲು ಕ್ಷೇತ್ರವಾಗಿದ್ದು, ಬಿ. ಶ್ರೀರಾಮುಲು ಬಿಜೆಪಿಯಿಂದ ಕಣದಲ್ಲಿದ್ದರು, ಅವರು 631853 ಮತಗಳನ್ನು ಪಡೆದು ಸೋಲು ಕಂಡರು.
ವೈಎಸ್ಆರ್ಸಿಪಿ ಪಕ್ಷದ ಅಭ್ಯರ್ಥಿ ಜೆ. ಶಾಂತಾ ಹಿಂದೂಪುರದಲ್ಲಿ 578320 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ. ಅವರ ಎದುರಾಳಿ ಟಿಡಿಪಿಯ ಬಿ. ಕೆ. ಪಾರ್ಥಸಾರಥಿ 706898 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
ಜೆ. ಶಾಂತಾ ಬಿಜೆಪಿ ಅಭ್ಯರ್ಥಿಯಾಗಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕರ್ನಾಟಕದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಈ ಬಾರಿಯ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಕೆಲವು ದಿನಗಳ ಮೊದಲು ವೈಎಸ್ಆರ್ಸಿಪಿ ಪಕ್ಷವನ್ನು ಸೇರಿ ಹಿಂದೂಪುರದಿಂದ ಅಭ್ಯರ್ಥಿಯಾಗಿದ್ದರು.
ಶ್ರೀರಾಮುಲು ಪ್ರತಿಕ್ರಿಯೆ: ಲೋಕಸಭೆ ಚುನಾವಣೆ ಸೋಲಿನ ಬಳಿಕ ಪ್ರತಿಕ್ರಿಯೆ ನೀಡಿರುವ ಬಿ. ಶ್ರೀರಾಮುಲು, 'ಆತ್ಮೀಯ ಮತದಾರ ಬಂಧುಗಳೇ..! ಚುನಾವಣೆಯಲ್ಲಿ ಸೋಲು- ಗೆಲುವು ಸಹಜ,ಆದರು ಕೂಡ ನನ್ನ ಮೇಲೆ ನಂಬಿಕೆ ಇರಿಸಿ,ಮತದಾನ ಮಾಡಿದ ಬಳ್ಳಾರಿ ವಿಜಯನಗರ ಲೋಕಸಭಾ ಕ್ಷೇತ್ರದ ಮತದಾರ ಬಂಧುಗಳಿಗೆ ಹೃದಯಪೂರ್ವಕ ಧನ್ಯವಾದಗಳು' ಎಂದು ಹೇಳಿದ್ದಾರೆ.
'ಚುನಾವಣೆಯಲ್ಲಿ ಸೋತೆ ಎಂದ ಮಾತ್ರಕ್ಕೆ ನಿಮ್ಮಿಂದ ದೂರ ಉಳಿಯುವುದಿಲ್ಲ, ನಿರಂತರವಾಗಿ ನಿಮ್ಮ ಸೇವೆಯಲ್ಲಿ ನನ್ನನ್ನು ನಾನು ತೊಡಗಿಸಿಕೊಂಡು ನಿಮ್ಮ ಸೇವೆ ಮಾಡುತ್ತೇನೆ. ಚುನಾವಣೆ ದಿನಾಂಕ ಘೋಷಣೆ ಆದಾಗಿನಿಂದ ನಿರಂತರವಾಗಿ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ, ನಾಯಕರಿಗೆ, ಪದಾಧಿಕಾರಿಗಳಿಗೆ ಹಾಗೂ ಬಳ್ಳಾರಿ ವಿಜಯನಗರ ಲೋಕಸಭಾ ಕ್ಷೇತ್ರದ ಜನತೆಗೆ, ಮಾಧ್ಯಮ ಮಿತ್ರರಿಗೆ ಹೃದಯಪೂರ್ವಕ ಕೃತಜ್ಞತೆಗಳು' ಎಂದು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications