ಲೋಕಸಭಾ ಚುನಾವಣೆಗೆ ಶ್ರೀರಾಮುಲು ತಯಾರಿ: ನಾಗು ಸಾಧುವಿನ ಆಶೀರ್ವಾದ ಪಡೆದ ಮಾಜಿ ಸಚಿವ..
ಬಳ್ಳಾರಿ ಜನವರಿ 10: ಮುಂಬರುವ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಸಿದ್ಧತೆಗಳು ಆರಂಭವಾಗಿವೆ. ಅದರಲ್ಲಿಯೂ ವಿಧಾನಸಭೆಯಲ್ಲಿ ಸೋಲನ್ನು ಕಂಡಿರುವ ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿ ರಾಜ್ಯ ರಾಜಕಾರಣದಲ್ಲಿ ತನ್ನ ಪ್ರಭಾವ ಕುಂದಿಲ್ಲ ಎಂದು ತೋರ್ಪಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ.
ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿಯ ಪ್ರಭಾವಿ ನಾಯಕರಲ್ಲಿ ಒಬ್ಬರಾದ ಶ್ರೀರಾಮುಲು ಕೂಡಾ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದು, ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಈಗಾಗಲೇ ಚುನಾವಣಾ ತಯಾರಿಯ ಗ್ರೌಂಡ್ವರ್ಕ್ ಮಾಡಲು ಆರಂಭಿಸಿರುವ ಮಾಜಿ ಸಚಿವ ಶ್ರೀರಾಮುಲು ತಮ್ಮ ಪ್ರಯತ್ನಕ್ಕೆ ಯಶ ಸಿಗಲಿ ಎಂದು ಸಾಧು ಸಂತರ ಭೇಟಿಗೆ ಮುಂದಾಗಿದ್ದಾರೆ.

ಈಗಾಗಲೇ ಹಲವು ಪುಣ್ಯ ಕ್ಷೇತ್ರಗಳ ದರ್ಶನ ಮಾಡಿರುವ ಮಾಜಿ ಸಚಿವರು, ಸಾಧು ಸಂತರ ಹಾಗೂ ಸ್ವಾಮೀಜಿಗಳ ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ದೇವರಕೊಳ್ಳದ ನಾಗಸಾಧು ಶ್ರೀ ದಿಗಂಬರ ರಾಜ ಭಾರತಿ ಅವರನ್ನು ಮಾಜಿ ಸಚಿವ ಶ್ರೀರಾಮುಲು ಭೇಟಿ ಮಾಡಿ ಆಶೀರ್ವಾದ ಪಡೆದಿರೋದು ಕುತೂಹಲ ಮೂಡಿಸಿದೆ.
ಬಿಜೆಪಿಯ ಪ್ರಮುಖ ಮುಖಂಡರಲ್ಲಿ ಒಬ್ಬರಾದ ಮಾಜಿ ಸಚಿವ ಶ್ರೀರಾಮುಲು, ಎಸ್ಟಿ ಸಮುದಾಯದ ಪ್ರಬಲ ನಾಯಕರಲ್ಲಿ ಒಬ್ಬರು. ಆದರೆ 2023 ರ ವಿಧಾನ ಸಭೆ ಚುನಾವಣೆಯಲ್ಲಿ ಶ್ರೀರಾಮುಲು ಕಂಡ ಸೋಲು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಹಿನ್ನೆಡೆಯಾಗಿತ್ತು. ಈ ಸೋಲಿನಿಂದ ಕಂಗೆಟ್ಟಿದ್ದ,ಶ್ರೀರಾಮುಲು ಇದೀಗ ಲೋಕಸಭೆ ಚುನಾವಣೆಯ ತಯಾರಿಯ ಹಿನ್ನೆಲೆಯಲ್ಲಿ ನಾಗಸಾಧುಗಳ ಆಶೀರ್ವಾದ ಪಡೆಯುವ ಪ್ರಯತ್ನಕ್ಕೆ ಮುಂದಾಗುವ ಮೂಲಕ ಗೆಲುವಿನ ಹಳಿಗೆ ಮರಳಲು ಯತ್ನಿಸುತ್ತಿದ್ದಾರೆ.

ಆಶೀರ್ವಾದ ಪಡೆದವರು ಯಾರು ಸೋತಿಲ್ಲ..!
ಸಂಡೂರು ತಾಲೂಕಿನ ದೇವರ ಕೊಳ್ಳ ಪ್ರದೇಶದಲ್ಲಿ ನೆಲೆಸಿರುವ ನಾಗಸಾಧು ಶ್ರೀ ದಿಗಂಬರ ರಾಜ ಭಾರತಿ ಬಳ್ಳಾರಿ ಜಿಲ್ಲೆಯನ್ನು ಮೀರಿ ಪ್ರಭಾವನ್ನು ಹೊಂದಿದ್ದಾರೆ. ದಟ್ಟ ಅರಣ್ಯದಲ್ಲಿರುವ ಗುಡ್ಡದ ಮೇಲೆ ವಾಸ ಮಾಡುತ್ತಿರುವ ಈ ನಾಗಸಾಧು ಆರು ತಿಂಗಳು ಮಾತನಾಡಿದರೇ, ಇನ್ನಾರು ತಿಂಗಳು ಮೌನವೃತದಲ್ಲಿರುತ್ತಾರೆ. ಇಲ್ಲಿಗೆ ಬಂದು ನಾಗಸಾಧುಗಳ ಆಶೀರ್ವಾದ ಪಡೆದವರು ಯಾರು ಸೋತಿಲ್ಲ ಎನ್ನುವ ಪ್ರತೀತಿ ಇದೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಸಾತ್ವಿಕ ಸನ್ಯಾಸಿ ಜೀವನ ನಡೆಸುತ್ತಿರುವ ಈ ನಾಗಸಾಧು ಆಶೀರ್ವಾದ ಪಡೆಯಲು ರಾಜಕೀಯ ಮುಖಂಡರು ಹೆಚ್ಚು ಹೆಚ್ಚು ಬರುತ್ತಿರುತ್ತಾರೆ.
ಈ ಹಿಂದೆ ಡಿ.ಕೆ.ಶಿವಕುಮಾರ್, ಉಗ್ರಪ್ಪ, ತುಕಾರಾಂ, ಎಂ.ಪಿ. ಪ್ರಕಾಶ್, ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಆನಂದ ಸಿಂಗ್, ಸಂತೋಷ ಲಾಡ್, ಅನಿಲ್ ಲಾಡ್ ಸೇರಿದಂತೆ ಹತ್ತು ಹಲವು ನಾಯಕರು ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ

ಬಳ್ಳಾರಿ ಲೋಕಸಭೆ ಕ್ಷೇತ್ರದ ಪ್ರಬಲ ಆಕಾಂಕ್ಷಿ...
ಚುನಾವಣಾ ರಾಜಕೀಯದಲ್ಲಿ ಬಹುತೇಕ ಯಶಸ್ಸನ್ನೇ ಕಂಡಿದ್ದ ಶ್ರೀರಾಮುಲು, 2023ರ ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ಅಲ್ಪ ಕಾಲ ಸೈಲೆಂಟ್ ಆಗಿದ್ದರು. ಅವರ ಮನೆಯಲ್ಲಿ ನಡೆದ ಶುಭ ಕಾರ್ಯಗಳ ಕಾರಣದಿಂದಲೂ ಕೂಡ ಅವರು ರಾಜಕೀಯ ಚಟುವಟಿಕೆಗಳಿಗೆ ಅಲ್ಪ ವಿರಾಮ ನೀಡಿದ್ದರು. ಬಿಡುವಿನ ಬಳಿಕ ಈಗ ಮತ್ತೊಮ್ಮೆ ಬಳ್ಳಾರಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಮಾಜಿ ಸಚಿವರು ಸಿದ್ದರಾಗುತ್ತಿದ್ದಾರೆ. ಬಳ್ಳಾರಿಯಿಂದ ಎಂಪಿ ಚುನಾವಣೆಯ ಪ್ರಬಲ ಆಕಾಂಕ್ಷಿಯಾಗಿರುವ ಶ್ರೀರಾಮುಲು ಈ ಬಾರಿ ಗೆಲುವಿನ ರುಚಿ ನೋಡಲು ಸಕಲ ತಯಾರಿ ನಡೆಸುತ್ತಿದ್ದಾರೆ.
ರಾಜಕೀಯ ಆರಂಭದ ಮೊದಲ ವಿಧಾನಸಭೆ ಚುನಾವಣೆ 1999ರಲ್ಲಿ ಸೋತಿದ್ದು ಬಿಟ್ಟರೇ, ನಂತರ ನಿರಂತರವಾಗಿ ಗೆದ್ದ ಶ್ರೀರಾಮುಲು, 2023ರಲ್ಲಿ ಸೋತರು. 2004ರಿಂದ ಗೆಲುವಿನ ಅಭಿಯಾನ ಕಂಡಿದ್ದ ಶ್ರೀರಾಮುಲು, 2008, 2011ರ ಉಪ ಚುನಾವಣೆ 2013, 2018 ಸಾರ್ವತ್ರಿಕ ಚುನಾವಣೆ ಸೇರಿದಂತೆ 2014ರಲ್ಲಿ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿಯೂ ಗೆದ್ದಿದ್ದರು. ಆದರೆ, ಬದಲಾದ ರಾಜಕೀಯ ಸನ್ನಿವೇಶದಲ್ಲಿ 2023ರ ಚುನಾವಣೆ ಯಲ್ಲಿ ತವರು ಕ್ಷೇತ್ರ ಬಳ್ಳಾರಿ ಗ್ರಾಮಾಂತರದಿಂದ ಭಾರಿ ಅಂತರದ ಸೋಲಾಯ್ತು.
ಹೀಗಾಗಿ ಮತ್ತೊಮ್ಮೆ ರಾಜಕೀಯ ಅದೃಷ್ಟದ ಪರೀಕ್ಷೆ ಎದುರಿಸಲು ಸಿದ್ಧರಾಗಿರುವ ಶ್ರೀರಾಮುಲು ಲೋಕಸಭೆ ಚುನಾವಣೆಯಲ್ಲಿ ಯಶಸ್ಸು ಕಾಣಲು ತಮ್ಮ ಪ್ರಯತ್ನಕ್ಕೆ ಅಲೌಕಿಕ ಆಧ್ಯಾತ್ಮದ ಬೆಂಬಲ ಪಡೆಯಲು ಹೊರಟಂತಿದೆ. ಕಳೆದ ಕೆಲವು ದಿನಗಳಿಂದ ಕ್ಷೇತ್ರದಲ್ಲಿನ ಅವರ ಓಡಾಟವನ್ನು ನೋಡಿದರೇ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಅಖಾಡದಲ್ಲಿ ತಮ್ಮ ಛಾಪನ್ನು ಮೂಡಿಸಲು ಶ್ರೀರಾಮುಲು ಸನ್ನದ್ಧರಾದಂತೆ ಕಾಣುತ್ತಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications