ಗಣಿನಾಡಿನ ಮದಿರೆ ಗ್ರಾಮದಲ್ಲಿ ಶವಯಾತ್ರೆಗೆ ಹಳ್ಳದ ಹಾದಿ...
ಬಳ್ಳಾರಿ, ಡಿಸೆಂಬರ್ 06: ಇಂದಿಗೂ ರಾಜ್ಯದ ಅಸಂಖ್ಯ ಹಳ್ಳಿಗಳಲ್ಲಿ ಮೂಲಸೌಲಭ್ಯಗಳಿಲ್ಲ. ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಇಂಥ ಮೂಲ ಸೌಕರ್ಯಗಳಿಲ್ಲದೇ ಗ್ರಾಮಸ್ಥರು ಪ್ರತಿನಿತ್ಯದ ಜೀವನವನ್ನೇ ಸವಾಲೆಂಬಂತೆ ಕಳೆಯಬೇಕಿದೆ. ಈ ಸೌಲಭ್ಯದ ವಿಷಯಕ್ಕೆ ಬಂದರೆ, ಈಚೆಗೆ ಮತ್ತೂ ಒಂದು ಸಮಸ್ಯೆ ಹಳ್ಳಿಗಳನ್ನು ಕಾಡುತ್ತಿದೆ.
ಅದೇ ಸ್ಮಶಾನದ ಭೂಮಿಯ ಕೊರತೆ. ಗಣಿನಾಡು ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮ ಪಂಚಾಯಿತಿಗೆ ಒಳಪಡುವ ಮದಿರೆ ಗ್ರಾಮದಲ್ಲೂ ಈ ಕೊರತೆ ಗ್ರಾಮಸ್ಥರನ್ನು ಸಮಸ್ಯೆಗೆ ದೂಡಿದೆ.
ಸ್ಮಶಾನಕ್ಕೆ ಸೂಕ್ತ ಜಾಗವಿಲ್ಲದೇ ಮದಿರೆ ಗ್ರಾಮದೊಳಗೆ ಹಾದುಹೋಗುವ ಹಳ್ಳ ದಾಟಿ ಶವವನ್ನು ಹೊತ್ತೊಯ್ಯುಬೇಕಾದ ಸನ್ನಿವೇಶವಿದೆ. ಆ ಹಳ್ಳದಾಚೆಗೆ ರುದ್ರಭೂಮಿ ಇರುವುದರಿಂದ ಅನಿವಾರ್ಯ ಕಾರಣದಿಂದಾಗಿ ಶವವನ್ನು ಅಲ್ಲಿಗೆ ತೆಗೆದುಕೊಂಡು ಹೋಗಿ ಊಳಬೇಕಾದ ಪರಿಸ್ಥಿತಿಯಿದೆ. ಆದರೆ ಸೋಮಸಮುದ್ರ ಗ್ರಾಮ ಪಂಚಾಯಿತಿಯಾಗಲೀ ಅಥವಾ ಜಿಲ್ಲಾಡಳಿತವಾಗಗಲೀ ಈ ಬಗ್ಗೆ ಕಿಂಚಿತ್ತೂ ಗಮನ ಹರಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಬೇರೆ ಕಾಲದಲ್ಲಿ ಹಳ್ಳ ದಾಟುವುದು ಕಷ್ಟವೆನಿಸುವುದಿಲ್ಲ. ಆದರೆ ಮಳೆಗಾಲ ಬಂತೆಂದರೆ ಸಾಕು. ಹಳ್ಳ ತುಂಬಿ ಹರಿಯುತ್ತದೆ. ಆಗ ಗ್ರಾಮದಲ್ಲಿ ಯಾರಾದರೂ ಸಾವನ್ನಪ್ಪಿದರೆ ಹಳ್ಳದಲ್ಲೇ ಇಳಿದುಕೊಂಡು ಶವಸಂಸ್ಕಾರ ಮಾಡಬೇಕು. ಹಳ್ಳದ ದಂಡೆಯ ಪಕ್ಕದಲ್ಲಿ ಹೊಲಗಳಿವೆಯಾದರೂ ಶವ ಹೊತ್ತೊಯ್ಯಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಈ ಕುರಿತು ಗ್ರಾಮ ಪಂಚಾಯಿತಿ ಕಚೇರಿಗೆ ತಿಳಿಸಿದರೂ ಯಾವುದೇ ಪ್ರಯೋಜನ ಇಲ್ಲವಾಗಿದೆ ಎಂದು ಗ್ರಾಮಸ್ಥರು ನಿರಾಶರಾಗಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications